ನ್ಯಾಷನಲ್ ಹೆರಾಲ್ಡ್ ಕೇಸ್; ಜೈಲಿಗೆ ಹಾಕಿದರೂ ರಾಹುಲ್ ಗಾಂಧಿ ಹಿಂಜರಿಯುವುದಿಲ್ಲ: ಡಿ ಕೆ ಶಿವಕುಮಾರ್
ಬೆಂಗಳೂರು, ಡಿಸೆಂಬರ್ 01: ರಾಹುಲ್ ಗಾಂಧಿ ಅವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಎಫ್ ಐಆರ್ ದಾಖಲಾಗಿದ್ದು, ರಾಜಕೀಯ ದ್ವೇಷಕ್ಕಾಗಿ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಇದು ಅನ್ಯಾಯ. ಯಾರಿಗೆ ಆಗಲಿ ಕಿರುಕುಳ ನೀಡುವುದಕ್ಕೆ ಒಂದು ಮಿತಿ ಇದೆ. ಈ ಪ್ರಕರಣದಲ್ಲಿ ಕಿರುಕುಳ ನೀಡುವ ಅಗತ್ಯವಿಲ್ಲ. ನ್ಯಾಷನಲ್ ಹೆರಾಲ್ಡ್ ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಅವರ ಆಸ್ತಿಯಲ್ಲ. ಪಕ್ಷದ ಅಧ್ಯಕ್ಷ ಸ್ಥಾನದಲ್ಲಿದ್ದ ಕಾರಣಕ್ಕೆ ಅವರು ಈ ಸಂಸ್ಥೆಯ ಷೇರುಗಳ ಪಾಲಕರಾಗಿದ್ದರು. ನಾನು ಹಾಗೂ ಸಿಎಂ ಅವರೂ ಕೂಡ ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರಾಗಿದ್ದೇವೆ. ಅಧ್ಯಕ್ಷರಾದ ಹಿನ್ನೆಲೆಯಲ್ಲಿ ಅವರ ಹೆಸರಿನಲ್ಲಿ ಕನಿಷ್ಠ 1-2 ಷೇರುಗಳು ಇರುತ್ತವೆ.

ನಮ್ಮ ಅಧಿಕಾರ ಮುಗಿದ ನಂತರ ಈ ಷೇರುಗಳು ವರ್ಗಾವಣೆಯಾಗುತ್ತದೆ. ಅದೇ ರೀತಿ ನಮ್ಮ ನಾಯಕರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದ ಕಾರಣ, ಜವಹಾರ್ ಲಾಲ್ ನೆಹರೂ ಅವರ ಕಾಲದಿಂದ ನಡೆದುಕೊಂಡು ಬಂದಿರುವ ಪ್ರತೀತಿಯಂತೆ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಜವಾಬ್ದಾರಿ ಹೊತ್ತಿರುತ್ತಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ಯಂಗ್ ಇಂಡಿಯಾ ಅಗಲಿ, ನ್ಯಾಷನಲ್ ಹೆರಾಲ್ಡ್ ಆಗಲಿ ನಮ್ಮ ವೈಯಕ್ತಿಕ ಆಸ್ತಿಯಲ್ಲ ಎಂದು ಅವರು ಈಗಾಗಲೇ ಘೋಷಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಆಸ್ತಿ. ಕಾಂಗ್ರೆಸ್ ಪಕ್ಷದ ಪಾಲಕರು ಅವರಾಗಿದ್ದಾರೆ. ಇಲ್ಲಿ ಅನೇಕ ಸದಸ್ಯರುಗಳು ಇದ್ದಾರೆ. ಮೊರಾರ್ಜಿ ಅವರು, ಅಹ್ಮದ್ ಪಟೇಲ್ ಅವರ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಹಿತಕ್ಕಾಗಿ ಕೆಲವು ನಿರ್ಧಾರ ಕೈಗೊಳ್ಳಲಾಗಿತ್ತು. ಕೇಸರಿ ಅವರ ಕಾಲದಲ್ಲಿ ಪಕ್ಷ ಸಂಕಷ್ಟದ ಸಮಯದಲ್ಲಿದ್ದಾಗ, ಕಾಂಗ್ರೆಸ್ ಪಕ್ಷದ ನಾಯಕರಾದ ನಾವುಗಳು ಸೋನಿಯಾ ಗಾಂಧಿ ಅವರ ಮುಂದೆ ಹೋಗಿ ಪಕ್ಷದ ಜವಾಬ್ದಾರಿ ವಹಿಸಿಕೊಳ್ಳುವಂತೆ ಬೇಡಿಕೊಂಡೆವು. ಅವರು ನೇತೃತ್ವ ವಹಿಸಿದ ನಂತರ ನಮ್ಮ ಪಕ್ಷ ದೇಶದ ಅತ್ಯುತ್ತಮ ಆರ್ಥಿಕ ತಜ್ಞರ ಮುಂದಾಳತ್ವದಲ್ಲಿ 10 ವರ್ಷ ಆಡಳಿತ ನಡೆಸಿದೆ.
ಈಗ ರಾಜಕೀಯವಾಗಿ ಕಿರುಕುಳ ನೀಡಲು ಈ ರೀತಿ ಮಾಡಲಾಗುತ್ತಿದೆ. ಇತಿಹಾಸ ಮರುಕಳಿಸಲಿದೆ. ಅವರು ರಾಹುಲ್ ಗಾಂಧಿ ಅವರನ್ನು ಜೈಲಿಗೆ ಹಾಕಿದರೂ ಅವರು ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ಕೇಂದ್ರ ಸರ್ಕಾರದ ಈ ದ್ವೇಷ ರಾಜಕಾರಣ ಸರಿಯಲ್ಲ. ಇದರಿಂದ ಅವರಿಗೆ ಯಾವುದೇ ಪ್ರಯೋಜನ ಆಗುವುದಿಲ್ಲ ಎಂದು ಕೇಂದ್ರಕ್ಕೆ ಹೇಳಲು ಬಯಸುತ್ತೇನೆ. ಇದು ಕೇಂದ್ರ ಸರ್ಕಾರದ ನೈತಿಕತೆಯನ್ನಷ್ಟೇ ಕುಗ್ಗಿಸಲಿದೆ. ರಾಜಕೀಯವನ್ನು ನೇರಾನೇರವಾಗಿ ಜನರ ಮಧ್ಯೆ ಮಾಡೋಣ. ಚುನಾವಣೆಯಲ್ಲಿ ಹೋರಾಡೋಣ. ಆದರೆ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡು ಈ ರೀತಿ ಕಿರುಕುಳ ನೀಡುವುದು ಸರಿಯಲ್ಲ ಎಂದು ತಿಳಿಸಿದರು.
ನಾಳೆ ಸಿಎಂ ಅವರನ್ನು ಉಪಹಾರಕೂಟಕ್ಕೆ ಆಹ್ವಾನಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ್ದು, ಇದು ನನಗೆ ಹಾಗೂ ಮುಖ್ಯಮಂತ್ರಿಗಳಿಗೆ ಸಂಬಂಧಿಸಿದ ವಿಚಾರ. ನಾವಿಬ್ಬರು ಸಹೋದರರಂತೆ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ. ನೀವುಗಳು ಸದಾ ಗುಂಪು, ಗುಂಪು ಎಂದು ಬಿಂಬಿಸುತ್ತಿದ್ದೀರಿ. ನಮ್ಮಲ್ಲಿ ಯಾವುದೇ ಗುಂಪಿಲ್ಲ. ನಮ್ಮ ಜೊತೆ 140 ಶಾಸಕರಿದ್ದಾರೆ. ನಾವು ಹುಟ್ಟುವಾಗಲೂ ಒಬ್ಬರೇ, ಸಾಯುವಾಗಲೂ ಒಬ್ಬರೆ. ಪಕ್ಷದ ವಿಚಾರ ಬಂದಾಗ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತೇವೆ. ಈ ಬಗ್ಗೆ ಚಿಂತೆ ಬೇಡ ಎಂದು ತಿಳಿಸಿದರು.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications