ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ಟೋಬರ್ 6, 7ರಂದು ರಾಹುಲ್ ರಾಜ್ಯ ಪ್ರವಾಸ

|
Google Oneindia Kannada News

ಬೆಂಗಳೂರು, ಸೆ. 18 : ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಕರ್ನಾಟಕ ಭೇಟಿಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಅಕ್ಟೋಬರ್ ಎರಡನೇ ವಾರದಲ್ಲಿ ರಾಹುಲ್ ರಾಜ್ಯಕ್ಕೆ ಆಗಮಿಸಲಿದ್ದು , ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ರಾಹುಲ್ ಗಾಂಧಿ ಅವರು ಅಕ್ಟೋಬರ್ 2ನೇ ವಾರದಲ್ಲಿ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ' ಎಂದು ಹೇಳಿದರು. ಪಕ್ಷದ ಮೂಲಗಳ ಮಾಹಿತಿ ಪ್ರಕಾರ ಅಕ್ಟೋಬರ್ 6 ಮತ್ತು 7 ರಂದು ರಾಹುಲ್ ರಾಜ್ಯ ಪ್ರವಾಸ ಮಾಡಲಿದ್ದಾರೆ. [ರೈತರ ಆತ್ಮಹತ್ಯೆಗಳು ನೋವು ತಂದಿದೆ: ಸಿದ್ದರಾಮಯ್ಯ]

rahul gandhi

ರಾಜ್ಯಕ್ಕೆ ಆಗಮಿಸುವ ರಾಹುಲ್ ಗಾಂಧಿ ಅವರು ವಿವಿಧ ಜಿಲ್ಲೆಗಳಿಗೆ ತೆರಳಿ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಲಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಮಂಡ್ಯ ಮತ್ತು ಬೆಳಗಾವಿ ಜಿಲ್ಲೆಗೆ ಅವರು ಭೇಟಿ ನೀಡುವ ಸಾಧ್ಯತೆ ಇದೆ. [ರೈತ ಆತ್ಮಹತ್ಯೆ, ಲೋಕಸಭೆಯಲ್ಲಿ ಯಡಿಯೂರಪ್ಪ ಘರ್ಜನೆ]

ಹಿಂದೆಯೇ ಬರಬೇಕಿತ್ತು : ಜುಲೈ ತಿಂಗಳಿನಲ್ಲಿಯೇ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಕೈಗೊಳ್ಳಬೇಕಿತ್ತು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಮತ್ತು ಮಾಜಿ ಕೇಂದ್ರ ಸಚಿವ ಚಲ್ಲಂರಾಜು ಅವರು ಮಂಡ್ಯಕ್ಕೆ ಭೇಟಿ ನೀಡಿ ಆತ್ಮಹತ್ಯೆ ಮಾಡಿಕೊಂಡ ರೈತರ ಬಗ್ಗೆ ಮಾಹಿತಿ ಸಂಗ್ರಹಿಸಿ, ವರದಿ ನೀಡಿದ್ದರು.[ಎರಡು ದಿನ ರಾಜ್ಯ ಪ್ರವಾಸ ಮಾಡಲಿದ್ದಾರೆ ರಾಹುಲ್]

ಆದರೆ, ಬಿಬಿಎಂಪಿ ಚುನಾವಣೆ ಎದುರಾಗಿದ್ದರಿಂದ ರಾಹುಲ್ ಭೇಟಿ ಮುಂದಕ್ಕೆ ಹೋಯಿತು. ಈಗ ರಾಹುಲ್ ಗಾಂಧಿ ಅವರ ಭೇಟಿಯ ದಿನಾಂಕ ನಿಗದಿಯಾಗಿದೆ. ಆದರೆ, ಯಾವ-ಯಾವ ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ. [ಪಿಟಿಐ ಚಿತ್ರ]

English summary
Congress vice president Rahul Gandhi will visit Karnataka on October 6th and 7th to meet some of the family members of farmers who committed suicide recently.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X