ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ ಭೇಟಿ ಹಿನ್ನಲೆ ರಾಹುಲ್ ಏ.13ರ ರಾಜ್ಯ ಪ್ರವಾಸ ಮುಂದೂಡಿಕೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 7 : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಏ.13ರ ಕರ್ನಾಟಕ ಭೇಟಿಯನ್ನು ಮುಂದೂಡಲಾಗಿದೆ. ಅಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಗಳೂರಿನಲ್ಲಿ ಈ ಕುರಿತು ಹೇಳಿಕೆ ನೀಡಿದರು. 'ಏ.13ಕ್ಕೆ ನರೇಂದ್ರ ಮೋದಿ ಅವರು ದಕ್ಷಿಣ ಕನ್ನಡಕ್ಕೆ ಬರುವ ಉದ್ದೇಶವೇನು?. ಅಂದು ಜಿಲ್ಲೆಯಲ್ಲಿ ರಾಹುಲ್ ಗಾಂಧಿ ಕಾರ್ಯಕ್ರಮ ಇದೆ' ಎಂದು ಹೇಳಿದರು.

ಏಪ್ರಿಲ್ 8ರ ನರೇಂದ್ರ ಮೋದಿ ಸಮಾವೇಶ ಮುಂದೂಡಿಕೆಏಪ್ರಿಲ್ 8ರ ನರೇಂದ್ರ ಮೋದಿ ಸಮಾವೇಶ ಮುಂದೂಡಿಕೆ

'ಎರಡು ಕಾರ್ಯಕ್ರಮಗಳು ಕ್ಲಾಷ್ ಆಗಬಾರದು ಎಂಬ ಕಾರಣಕ್ಕೆ ರಾಹುಲ್ ಗಾಂಧಿ ಕಾರ್ಯಕ್ರಮವನ್ನು ಮುಂದೂಡಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಜಿಲ್ಲೆಗೆ ಏನು ಸಂದೇಶ ಕೊಡುತ್ತಾರೆ. ಮೋದಿ ಮುಖ ನೋಡಿ ಜನ ಏಕೆ ಮತ ನೀಡಬೇಕು?' ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಏ.13ರಂದು ಮಂಡ್ಯದಲ್ಲಿ ರಾಹುಲ್ ಗಾಂಧಿ ರೋಡ್ ಶೋಏ.13ರಂದು ಮಂಡ್ಯದಲ್ಲಿ ರಾಹುಲ್ ಗಾಂಧಿ ರೋಡ್ ಶೋ

Rahul Gandhis poll campaign in Karnataka on April 13 postponed

ರೋಡ್‌ ಶೋ ಇತ್ತು : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಏ.13ರಂದು ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ದಕ್ಷಿಣ ಕನ್ನಡದಲ್ಲಿ ಅವರು ಪ್ರಚಾರ ನಡೆಸಬೇಕಾಗಿತ್ತು. ಬಳಿಕ ಕೆ.ಆರ್.ನಗರ ಮತ್ತು ಮಂಡ್ಯದಲ್ಲಿ ಅವರು ರೋಡ್ ಶೋ ನಡೆಸಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಮತಯಾಚನೆ ಮಾಡಬೇಕಿತ್ತು.

ಆದರೆ, ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿ ಒಂದೇ ದಿನ ಬಂದರೆ ಗಲಾಟೆ ನಡೆಯಬಹುದು ಎಂಬ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಮೋದಿ ಭೇಟಿ : ನರೇಂದ್ರ ಮೋದಿ ಅವರು ಏ.9ರಂದು ಚಿತ್ರದುರ್ಗ ಮತ್ತು ಮೈಸೂರಿನಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಏ.13ರಂದು ಮಂಗಳೂರಿನಲ್ಲಿ ಸಮಾವೇಶ ನಿಗದಿಯಾಗಿದೆ.

English summary
AICC president Rahul Gandhi poll campaign in Karnataka on April 13 postponed. Prime Ministers Of India Narendra Modi will campaign in Karnataka on April 13. 1st phase of poll will be held in state on April 18.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X