ರಾಯಚೂರು: ಪುಡಾರಿಯ ಪುಂಡಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ
ರಾಯಚೂರು, ಮೇ 09 : ಪದೇ ಪದೇ ಚುಡಾಯಿಸುತ್ತಿದ್ದ ಯುವಕನ ಕಿರುಕುಳಕ್ಕೆ ಬೇಸತ್ತು ರಾಯಚೂರಿನಲ್ಲಿ ಯುವತಿಯೊಬ್ಬಳು ಸೋಮವಾರ ರಾತ್ರಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
18 ವರ್ಷದ ಹುಲಿಗೆಮ್ಮ ಆತ್ಮಹತ್ಯೆಗೆ ಮಾಡಿಕೊಂಡು ದುರ್ದವೈ. ಅಂಬೇಡ್ಕರ್ ನಗರದ ನಿವಾಸಿಯಾದ ಹುಲಿಗೆಮ್ಮಳನ್ನ ಜಹೀರ್ ಎಂಬಾತ ಚುಡಾಯಿಸುತ್ತಿದ್ದ. ಇದರಿಂದ ಈತನ ಕಾಟದಿಂದ ಬೇಸತ್ತು ಆತನ ಪೋಷಕರಿಗೆ ಹುಲಿಗೆಮ್ಮ ದೂರು ನೀಡಿದ್ದಳು.

ಆದರೆ, ತಮ್ಮ ಮಗನಿಗೆ ಬುದ್ಧಿ ಹೇಳಬೇಕಾದ ಜಹೀರ್ ಪೋಷಕರು ಹುಲಿಗೆಮ್ಮಳಿಗೆ ಬೈದು ಕಳುಸಿದ್ದರು. ಇದರಿಂದ ಮನನೊಂದ ಹುಲಿಗೆಮ್ಮ ಸೋಮವಾರ ರಾತ್ರಿ ನಗರದ ಮಾವಿನಕೆರೆ ಪಕ್ಕದ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪೊಲೀಸ್ ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಹೊರತೆಗೆದಿದ್ದಾರೆ. ಈ ಬಗ್ಗೆ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications