ರಾಯಚೂರಿನಲ್ಲಿ 82ನೇ ಕನ್ನಡ ಸಾಹಿತ್ಯ ಸಮ್ಮೇಳನ
ಹಾಸನ, ಫೆ.3 : ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಮೂರು ದಿನಗಳ ಅಕ್ಷರ ಜಾತ್ರೆಗೆ ಇಂದು ತೆರೆ ಬೀಳಲಿದೆ. 82ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ರಾಯಚೂರು ನಗರದಲ್ಲಿ ನಡೆಸಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಸೋಮವಾರ ಶ್ರವಣಬೆಳಗೊಳದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವಿರೋಧವಾಗಿ ರಾಯಚೂರಿನಲ್ಲಿ ಸಮ್ಮೇಳನ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಕಳೆದ ಬಾರಿ ಹಾವೇರಿಯಲ್ಲಿ ಎದುರಾದಂತಹ ಸಮಸ್ಯೆ ಬರಬಾರದು ಎಂಬ ಕಾರಣಕ್ಕೆ ರಾಯಚೂರು ನಗರದಲ್ಲೇ ನಡೆಸಬೇಕು ಎಂಬ ನಿರ್ಣಯ ಅಂಗೀಕರಿಸಲಾಗಿದೆ. [ಸಾಹಿತ್ಯ ಸಮ್ಮೇಳನದ ಚಿತ್ರಗಳು]

ಸಮ್ಮೇಳನ ನಡೆಸುವುದಾಗಿ ರಾಮನಗರ, ಚಾಮರಾಜನಗರ ಮತ್ತು ಧಾರವಾಡ ಜಿಲ್ಲಾ ಘಟಕದವರು ಬೇಡಿಕೆ ಇಟ್ಟಿದ್ದರು. ಹೈದರಾಬಾದ್ ಕರ್ನಾಟಕಕ್ಕೆ ಅವಕಾಶ ನೀಡಬೇಕು ಎಂಬ ಉದ್ದೇಶದಿಂದ ರಾಯಚೂರು ಜಿಲ್ಲೆಯನ್ನು ಆಯ್ಕೆ ಮಾಡಲಾಗಿದ್ದು, ಅಕ್ಟೋಬರ್ ತಿಂಗಳಿನಲ್ಲಿ ಸಮ್ಮೇಳನ ನಡೆಸಲು ಉದ್ದೇಶಿಸಲಾಗಿದೆ.
ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮಾನಾಂತರ ವೇದಿಕೆಯನ್ನೇ ರದ್ದು ಮಾಡಬೇಕು ಎಂದು ಕೆಲವರು ಒತ್ತಾಯಿಸಿದರು. ಈ ಬಗ್ಗೆ ಗಂಭೀರವಾದ ಚರ್ಚೆಗಳು ನಡೆದರೂ ಅಂತಿಮ ತೀರ್ಮಾನವನ್ನು ಕೈಗೊಂಡಿಲ್ಲ. ಈ ಬಗ್ಗೆ ಇನ್ನೊಮ್ಮೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳೋಣ ಎಂದು ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ತಿಳಿಸಿದರು. [ಸಮ್ಮೇಳನಾಧ್ಯಕ್ಷ ಸಿದ್ದಲಿಂಗಯ್ಯ ಭಾಷಣ ಓದಿ]
ಅರ್ಧ ದಿನದ ವೇತನ ವಾಪಸ್ : ಶ್ರವಣಬೆಳಗೊಳದ 81ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಾಸನ ಜಿಲ್ಲೆಯ ಸರ್ಕಾರಿ ನೌಕರರಿಂದ ಸಂಗ್ರಹಿಸಿರುವ ಒಂದು ದಿನದ ವೇತನದ ಪೂರ್ತಿ ಹಣವನ್ನು ಸಮ್ಮೇಳನಕ್ಕೆ ಕೊಡಬೇಕು, ಅರ್ಧದಿನದ ವೇತನ ಕೊಟ್ಟರೆ ಅದನ್ನು ಸ್ವೀಕರಿಸಬಾರದು ಎಂದು ಸಭೆಯಲ್ಲಿ ತೀರ್ಮಾನಿಸಿದ್ದು, ಅರ್ಧ ವೇತನವನ್ನು ವಾಪಸ್ ನೀಡಲು ನಿರ್ಧರಿಸಲಾಗಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ












Click it and Unblock the Notifications