Get Updates
Get notified of breaking news, exclusive insights, and must-see stories!

ರಾಯಚೂರು : ಅಕ್ಟೋಬರ್‌ನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

ರಾಯಚೂರು, ಜೂ.23 : ರಾಯಚೂರಿನಲ್ಲಿ ಅಕ್ಟೋಬರ್ 9ರಿಂದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಲಾಗಿದೆ. ಸಮ್ಮೇಳನಕ್ಕೆ ಸುಮಾರು ಐದು ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದ್ದು, ಸರ್ಕಾರ 2 ಕೋಟಿ ರೂ.ಗಳನ್ನು ನೀಡಲಿದೆ.

ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅಧ್ಯಕ್ಷತೆಯಲ್ಲಿ ಸೋಮವಾರ ಸಂಜೆ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಅಕ್ಟೋಬರ್ 9, 10 ಮತ್ತು 11 ರಂದು ಕೃಷಿ ವಿವಿ ಆವರಣದಲ್ಲಿ ಸಮ್ಮೇಳನ ನಡೆಸಲು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. [ರಾಯಚೂರಿನಲ್ಲಿ 82ನೇ ಕನ್ನಡ ಸಾಹಿತ್ಯ ಸಮ್ಮೇಳನ]

sharan prakash patil

ಸಭೆಯಲ್ಲಿ ಮಾತನಾಡಿದ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ ಅವರು, ಸಮ್ಮೇಳನಕ್ಕೆ 5 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಸರ್ಕಾರ 2 ಕೋಟಿ ರೂ. ನೀಡಲಿದ್ದು, ಉಳಿದ ಮೊತ್ತವನ್ನು ನಾನಾ ಮೂಲಗಳಿಂದ ಸಂಗ್ರಹಿಸಬೇಕಾಗಿದೆ ಎಂದು ಹೇಳಿದರು. [81ನೇ ಸಾಹಿತ್ಯ ಸಮ್ಮೇಳನದ ಚಿತ್ರಗಳು]

ಶ್ರವಣಬೆಳಗೊಳದಲ್ಲಿ ನಡೆದ 81ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 82ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ರಾಯಚೂರು ನಗರದಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಕಳೆದ ಬಾರಿ ಹಾವೇರಿ­ಯಲ್ಲಿ ಎದುರಾದಂತಹ ಸಮಸ್ಯೆ ಬರಬಾರದು ಎಂಬ ಕಾರಣಕ್ಕೆ ರಾಯಚೂರು ನಗರದಲ್ಲೇ ನಡೆಸ­ಬೇಕು ಎಂದು ನಿರ್ಧಾರ ಕೈಗೊಳ್ಳಲಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+