ರಾಯಚೂರು : ಅಕ್ಟೋಬರ್ನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ
ರಾಯಚೂರು, ಜೂ.23 : ರಾಯಚೂರಿನಲ್ಲಿ ಅಕ್ಟೋಬರ್ 9ರಿಂದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಲಾಗಿದೆ. ಸಮ್ಮೇಳನಕ್ಕೆ ಸುಮಾರು ಐದು ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದ್ದು, ಸರ್ಕಾರ 2 ಕೋಟಿ ರೂ.ಗಳನ್ನು ನೀಡಲಿದೆ.
ರಾಯಚೂರು
ಜಿಲ್ಲಾ
ಉಸ್ತುವಾರಿ
ಸಚಿವ
ಡಾ.ಶರಣಪ್ರಕಾಶ
ಪಾಟೀಲ್
ಅಧ್ಯಕ್ಷತೆಯಲ್ಲಿ
ಸೋಮವಾರ
ಸಂಜೆ
ನಡೆದ
ಪೂರ್ವ
ಸಿದ್ಧತಾ
ಸಭೆಯಲ್ಲಿ
ಈ
ಕುರಿತು
ತೀರ್ಮಾನ
ಕೈಗೊಳ್ಳಲಾಗಿದೆ.
ಅಕ್ಟೋಬರ್
9,
10
ಮತ್ತು
11
ರಂದು
ಕೃಷಿ
ವಿವಿ
ಆವರಣದಲ್ಲಿ
ಸಮ್ಮೇಳನ
ನಡೆಸಲು
ಸಭೆಯಲ್ಲಿ
ಚರ್ಚೆ
ನಡೆಸಲಾಗಿದೆ.
[ರಾಯಚೂರಿನಲ್ಲಿ
82ನೇ
ಕನ್ನಡ
ಸಾಹಿತ್ಯ
ಸಮ್ಮೇಳನ]
ಸಭೆಯಲ್ಲಿ ಮಾತನಾಡಿದ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ ಅವರು, ಸಮ್ಮೇಳನಕ್ಕೆ 5 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಸರ್ಕಾರ 2 ಕೋಟಿ ರೂ. ನೀಡಲಿದ್ದು, ಉಳಿದ ಮೊತ್ತವನ್ನು ನಾನಾ ಮೂಲಗಳಿಂದ ಸಂಗ್ರಹಿಸಬೇಕಾಗಿದೆ ಎಂದು ಹೇಳಿದರು. [81ನೇ ಸಾಹಿತ್ಯ ಸಮ್ಮೇಳನದ ಚಿತ್ರಗಳು]
ಶ್ರವಣಬೆಳಗೊಳದಲ್ಲಿ ನಡೆದ 81ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 82ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ರಾಯಚೂರು ನಗರದಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಕಳೆದ ಬಾರಿ ಹಾವೇರಿಯಲ್ಲಿ ಎದುರಾದಂತಹ ಸಮಸ್ಯೆ ಬರಬಾರದು ಎಂಬ ಕಾರಣಕ್ಕೆ ರಾಯಚೂರು ನಗರದಲ್ಲೇ ನಡೆಸಬೇಕು ಎಂದು ನಿರ್ಧಾರ ಕೈಗೊಳ್ಳಲಾಗಿತ್ತು.