ರೈಲ್ವೆ ಬಜೆಟ್: 'ಪ್ರಭು' ದಯೆ ಕರ್ನಾಟಕಕ್ಕೆ ಸಿಗುವುದೇ?
ಬೆಂಗಳೂರು, ಫೆ.25: ಕನ್ನಡಿಗರಾದ ಮಲ್ಲಿಕಾರ್ಜುನ ಖರ್ಗೆ, ಸದಾನಂದ ಗೌಡ ಅವರು ಕೇಂದ್ರ ರೈಲ್ವೆ ಬಜೆಟ್ ನಲ್ಲಿ ಕರ್ನಾಟಕಕ್ಕೆ ಒಂದಷ್ಟು ಕೊಡುಗೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಘೋಷಿಸಿದ್ದರು.
ಆದರೆ, ಈ ಬಾರಿ ಎನ್ ಡಿಎ ಸರ್ಕಾರದ ಪೂರ್ಣ ಪ್ರಮಾಣದ ರೈಲ್ವೆ ಬಜೆಟ್ ನಲ್ಲಿ ಸುರೇಶ್ 'ಪ್ರಭು' ದಯೆ ನಮ್ಮ ರಾಜ್ಯದ ಮೇಲೆ ಬೀಳುವುದೇ ಕಾದು ನೋಡೋಣ.. ಫೆ.26ರಂದು ಒನ್ ಇಂಡಿಯಾದಲ್ಲಿ ಬಜೆಟ್ ಲೈವ್ ಕವರೇಜ್ ತಪ್ಪದೇ ಓದಿ...[ವಿಡಿಯೋ: ಜನರ ನಿರೀಕ್ಷೆಗಳೇನು?]
ಈ ಬಾರಿಯೂ ಕೂಡಾ ಕನ್ನಡಿಗರು ಹೆಚ್ಚಿನ ಇಂಟರ್ ಸಿಟಿ ರೈಲು, ಹೊಸ ಮಾರ್ಗಗಳು, ಸೂಪರ್ ಫಾಸ್ಟ್ ರೈಲುಗಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಪಕ್ಕದ ರಾಜ್ಯ ಆಂಧ್ರಪ್ರದೇಶ ಹಾಗೂ ತೆಲಂಗಾಣಕ್ಕೆ ಭರ್ಜರಿ ಗಿಫ್ಟ್ ಸಿಕ್ಕರೆ ಅದರಲ್ಲಿ ಸ್ವಲ್ಪ ಪಾಲು ಗಡಿಭಾಗದ ಕರ್ನಾಟಕಕ್ಕೂ ಸಿಗಲಿದೆ. ಮುಖ್ಯವಾಗಿ ಕಡಪ-ಬೆಂಗಳೂರು ಹೊಸ ರೈಲು ಮಾರ್ಗದ ಬಗ್ಗೆ ನಿರೀಕ್ಷೆ ಹೆಚ್ಚಿದೆ.[ರೈಲು ಪ್ರಯಾಣಿಕರ ಮೇಲೆ ಬೆಲೆ ಏರಿಕೆ ಹೊರೆ?]
ಹುಬ್ಬಳ್ಳಿ-ಅಂಕೋಲ, ಚಾಮರಾಜನಗರ-ಮೆಟ್ಟುಪಾಳ್ಯ, ಚಾಮರಾಜನಗರ-ಸತ್ಯಮಂಗಲ, ಕುಶಾಲನಗರ-ಮಡಿಕೇರಿ ಮತ್ತು ತಾಳಗುಪ್ಪ-ಹೊನ್ನಾವರ ನೂತನ ಮಾರ್ಗಗಳು ಹಾಗೂ ಸಕಲೇಶಪುರ-ಸುಬ್ರಹ್ಮಣ್ಯ ಜೋಡಿ ಮಾರ್ಗ ರಚನೆ ಆಗಬೇಕಿದೆ ಚಾಲ್ತಿಯಲ್ಲಿರುವ ಈ ಕಾಮಗಾರಿಗಳ ನಡುವೆ ಹೊಸ ಮಾರ್ಗಗಳ ಬೇಡಿಕೆ ಈ ಬಾರಿ ಹೆಚ್ಚಾಗಿದೆ. [ರೈಲ್ವೆ ಬಜೆಟ್ 2014 : ಕರ್ನಾಟಕಕ್ಕೆ ಸಿಕ್ಕಿದ್ದೇನು?]
ಈ ಬಾರಿಯ ಬೇಡಿಕೆಗಳನ್ನು ವಲಯವಾರು ರೀತಿಯಲ್ಲಿ ಮುಂದೆ ನೋಡಿ..

ಮೋದಿ ಕನಸಿನಂತೆ ಬಜೆಟ್ ಮಂಡನೆ
* ಮೋದಿ ಕನಸಿನ ಡೈಮಂಡ್ ಚತುಷ್ಪಥ ಯೋಜನೆ-ದೇಶದ ಮೆಟ್ರೋ ನಗರಗಳನ್ನು ಹೈ ಸ್ಪೀಡ್ ರೈಲಿನ ಮೂಲಕ ಸಂಪರ್ಕ ಸಾಧಿಸುವ ಯೋಜನೆ.
* ಬಾಕಿ ಉಳಿದಿರುವ 300 ಯೋಜನೆಗೆ 1.7 ಲಕ್ಷ ಕೋಟಿ ಸಂಗ್ರಹ
* ಪ್ರಯಾಣಿಕರ ಸುರಕ್ಷತೆಗೆ ತಂತ್ರಜ್ಞಾನ ಬಳಕೆ, ರೈಲ್ವೆ ಸುರಕ್ಷತಾ ದಳ(ಆರ್ ಪಿಎಫ್)ಕ್ಕೆ ಹೆಚ್ಚಿನ ಶಕ್ತಿ.
* ಈಶಾನ್ಯ ರಾಜ್ಯಗಳಿಗೆ ಹೆಚ್ಚಿನ ಅನುದಾನ, ಹೊಸ ಮಾರ್ಗ.
* ವೈಫೈ ಬಳಕೆ ಹೆಚ್ಚಳ, ಆರ್ ಎಫ್ ಐಡಿ ಮೂಲಕ ರೈಲುಗಳ ಸಂಚಾರ ಟ್ರ್ಯಾಕಿಂಗ್.
* ಸ್ವಚ್ಛ ಭಾರತ ಅಭಿಯಾನ ರೈಲುಗಳಿಗೂ ಅಳವಡಿಕೆ

ಉತ್ತರ ಕರ್ನಾಟಕ ಭಾಗದ ಜನರ ನಿರೀಕ್ಷೆಗಳೇನು
* ಬಾಗಲಕೋಟೆ-ಕುಡಚಿಗೆ ಹೊಸ ಮಾರ್ಗದ ನಿರೀಕ್ಷೆಯಿದೆ.
* ಬಳ್ಳಾರಿ-ಹೊಸಪೇಟೆ ಟು ಬೆಂಗಳೂರು ಇಂಟರ್ಸಿಟಿ ರೈಲು ಓಡಾಡಿದ್ರೆ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ.
* ಗುಂತಕಲ್, ಬಿಜಾಪುರ-ಬಳ್ಳಾರಿ ಇಂಟರ್ಸಿಟಿ ರೈಲು ಹಾಗೇ ಬೀದರ್ ಗುಲ್ಬರ್ಗಾ ನಡುವೆ ರೈಲು ಮಾರ್ಗ ಬೇಕಿದೆ.
* ರಾಯಚೂರಿನಲ್ಲಿ ರೈಲು ವಿಭಾಗದ ಕಚೇರಿ ಸ್ಥಾಪನೆಯಾಗಲಿ ಅನ್ನೋ ಬೇಡಿಕೆ ಉತ್ತರ ಕರ್ನಾಟಕ ಭಾಗದ ಜನರಲ್ಲಿದೆ.

ಮಲೆನಾಡು ಭಾಗದ ನಿರೀಕ್ಷೆಗಳೇನು..?
* ಶಿವಮೊಗ್ಗ-ಹೊನ್ನಾವರ ಮಾರ್ಗ
* ಶಿವಮೊಗ್ಗ-ಹರಿಹರ ಮಾರ್ಗ
* ಶಿವಮೊಗ್ಗ-ಬೆಂಗಳೂರಿಗೆ ಹೆಚ್ಚುವರಿ ರೈಲು
* ಶಿವಮೊಗ್ಗ-ಅರಸೀಕೆರೆ ಮಾರ್ಗ ಡಬ್ಲಿಂಗ್
* ಶಿವಮೊಗ್ಗ ಕಡೂರು ಚಿಕ್ಕಮಗಳೂರು ರೈಲು ಹಾಸನದವರೆಗೂ ವಿಸ್ತರಣೆ

ಮಧ್ಯ ಕರ್ನಾಟಕ ಭಾಗದ ನಿರೀಕ್ಷೆಗಳೇನು..?
* ಹೈದರಾಬಾದ್- ಚಿತ್ರದುರ್ಗ- ಮೈಸೂರು ರೈಲು
* ಯಶವಂತಪುರ- ಜೋಧಪುರ ರೈಲು ಮಾರ್ಗವನ್ನು ಖಾಯಂಗೊಳಿಸ್ಬೇಕು
* ಚಿತ್ರದುರ್ಗ ರೈಲು ನಿಲ್ದಾಣವನ್ನು " ಡಿ" ದರ್ಜೆಯಿಂದ "ಬಿ" ದರ್ಜೆಗೆ ಏರಿಸಬೇಕು
* ಹುಬ್ಬಳ್ಳಿಯಿಂದ ಬೆಂಗಳೂರಿಗೆ ಹೋಗುವ ಎಲ್ಲ ರೈಲುಗಳನ್ನು ಧಾರವಾಡದಿಂದ ಬಿಡಬೇಕು

ಹಳೇ ಮೈಸೂರು ಪ್ರಾಂತ್ಯದ ಬೇಡಿಕೆಗಳೇನು?
* ಮೈಸೂರು-ದೆಹಲಿ ಸ್ವರ್ಣ ಜಯಂತಿ ಏಕ್ಸ್ ಪ್ರೆಸ್ (ವಾರಕೊಮ್ಮೆ ಇರುವ ರೈಲು ವಾರಕ್ಕೆ 2 ಬಾರಿ ಬರಲಿ)
* ಬೆಂಗಳೂರು-ಮುಂಬೈ ಉದ್ಯಾನ್ ಏಕ್ಸ್ ಪ್ರೆಸ್ ಮೈಸೂರಿಗೆ ವಿಸ್ತರಣೆಯಾಗಲಿ
* ಮೈಸೂರಿನಿಂದ ವಾರಣಾಸಿಗೆ ಹೊಸ ರೈಲು ಓಡಾಡಬೇಕಿದೆ.
* ಹಾಸನ-ಬೆಂಗಳೂರು ರೈಲ್ವೆ ಮಾರ್ಗ ನಿರ್ಮಾಣ ಕಾಮಗಾರಿ ಪೂರ್ಣವಾಗಲಿ
* ಚನ್ನಪಟ್ಟಣ ರೇಲ್ವೆ ಗೇಟ್,ಸ್ಟೇಷನ್ ನವೀಕರಣ
* ಚಿಕ್ಕಬಳ್ಳಾಪುರದಿಂದ ಪುಟ್ಟಪರ್ತಿ, ಗೌರಿಬಿದನೂರಿಗೆ ನೂತನ ಮಾರ್ಗ.
* ಬೆಂಗಳೂರು-ಮಾರಿಕುಪ್ಪಂಗೆ ಹೆಚ್ಚುವರಿ ರೈಲು
* ಬಂಗಾರಪೇಟೆ-ಬೆಂಗಳೂರಿಗೆ ಹೆಚ್ಚುವರಿ ರೈಲು ಓಡಾಡಬೇಕು

ಸಾರ್ವಜನಿಕರಿಂದ ಬಂದಿರುವ ಇನ್ನಷ್ಟು ಬೇಡಿಕೆ-1
* ಅಹಮದಾಬಾದ್- ಮಂಗಳೂರು ಸೆಂಟ್ರಲ್ (ರಜೆ ಸಮಯದ ರೈಲು ನಿರಂತರಗೊಳಿಸಲು ಮನವಿ)
* ವಾಸ್ಕೋ-ಮಂಗಳೂರು ಸೆಂಟ್ರಲ್ ಇಂಟರ್ ಸಿಟಿ
* ಹುಬ್ಬಳ್ಳಿ- ಮಂಗಳೂರು ಸೆಂಟ್ರಲ್ ( ವಯಾ ಹಾಸನ-ಅರಸೀಕೆರೆ) ರಾತ್ರಿ ಎಕ್ಸ್ ಪ್ರೆಸ್
* ಭಟ್ಕಳ-ಮಂಗಳೂರು ಸೆಂಟ್ರಲ್ ಡಿಎಂಯು
* ವಾಸ್ಕೋ-ಮಂಗಳೂರು- ತಿರುಪತಿ
* ನವದೆಹಲಿ- ಸುಬ್ರಮಣ್ಯ ರಸ್ತೆ (ವಯಾ MAO-MAJN)

ಸಾರ್ವಜನಿಕರಿಂದ ಬಂದಿರುವ ಇನ್ನಷ್ಟು ಬೇಡಿಕೆ-2
* 16515/16 ಕಾರವಾರ- ಯಶವಂತಪುರ ಎಕ್ಸ್ ಪ್ರೆಸ್ ಪ್ರತಿದಿನ ಸಂಚಾರಕ್ಕೆ ಮನವಿ (ಸದ್ಯಕ್ಕೆ ವಾರಕ್ಕೆ ಮೂರಾವರ್ತಿ ಇದೆ)
* ಮಂಗಳೂರು- ಜಮ್ಮು ಥಾವಿ ನವ್ ಯುಗ್ ಎಕ್ಸ್ ಪ್ರೆಸ್ ಎರಡು ವಾರಕ್ಕೊಮ್ಮೆ ಸಂಚಾರಕ್ಕೆ ಮನವಿ
* ಮಂಗಳೂರು- ಹೌರಾ ವಿವೇಕ್ ಎಕ್ಸ್ ಪ್ರೆಸ್ ಎರಡು ವಾರಕ್ಕೊಮ್ಮೆ ಸಂಚಾರಕ್ಕೆ ಮನವಿ
* ಕಾರೈಕಲ್-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ವಯಾ TPJ
* ಕೊಯಮತ್ತೂರು-ಹುಬ್ಬಳ್ಳಿ ಎಕ್ಸ್ ಪ್ರೆಸ್ ಪ್ರತಿದಿನ ವಯಾ ಯಶವಂತಪುರ

ಸಾರ್ವಜನಿಕರಿಂದ ಬಂದಿರುವ ಇನ್ನಷ್ಟು ಬೇಡಿಕೆ-3
* ಮಂಗಳೂರು- ಹೌರಾ ವಯಾ ಮಡಗಾಂವ್- ಹುಬ್ಬಳ್ಳಿ
* ಕೊಯಮತ್ತೂರು-ಹುಬ್ಬಳ್ಳಿ ಎಕ್ಸ್ ಪ್ರೆಸ್ ಪ್ರತಿದಿನ ವಯಾ ಯಶವಂತಪುರ
* ಡೀಸೆಲ್ ಲೋಕೋಮೋಟಿವ್ ಘಟಕ, ಮಂಗಳೂರು
* ನೀಲಂಬುರ್-ನಂಜನಗೂಡು ರೈಲ್ವೆ ಯೋಜನೆಗೆ ಚಾಲನೆ
* ಕೊಯಮತ್ತೂರು-ಬೆಂಗಳೂರು-ಮೈಸೂರು( ಇಂಟರ್ ಸಿಟಿ ವಯಾ ತಿರುಪುರ್, ಈರೋಡ್)
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications