ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈಲ್ವೆ ಬಜೆಟ್ : ಕರ್ನಾಟಕದ ಬೇಡಿಕೆಗೆ 'ಪ್ರಭು' ಸ್ಪಂದಿಸುವರೇ?

By Mahesh
|
Google Oneindia Kannada News

ಬೆಂಗಳೂರು, ಫೆ.24: ಕನ್ನಡಿಗರಾದ ಮಲ್ಲಿಕಾರ್ಜುನ ಖರ್ಗೆ, ಸದಾನಂದ ಗೌಡ ಅವರು ಕೇಂದ್ರ ರೈಲ್ವೆ ಬಜೆಟ್ ನಲ್ಲಿ ಕರ್ನಾಟಕಕ್ಕೆ ಒಂದಷ್ಟು ಕೊಡುಗೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಘೋಷಿಸಿದ್ದರು.

ಆದರೆ, ಯಾವತ್ತಿಗೂ ಕನ್ನಡಿಗರಿಗೆ ನಿರೀಕ್ಷಿತ ಮಟ್ಟದಲ್ಲಿ ಅನುದಾನ, ಯೋಜನೆಗಳು ಸಿಕ್ಕಿಲ್ಲ. ಸಚಿವ ಸುರೇಶ್ ಪ್ರಭು ಅವರು ಈ ಬಾರಿ ಏನು ನೀಡುವರೋ ಕಾದು ನೋಡಬೇಕಿದೆ. ಗುರುವಾರ (ಫೆಬ್ರವರಿ 25) ಒನ್ ಇಂಡಿಯಾ ಕನ್ನಡ ಬಜೆಟ್ ಲೈವ್ ಕವರೇಜ್ ತಪ್ಪದೇ ಓದಿ [LIVE: ಸುರೇಶ್ ಪ್ರಭುರಿಂದ 2ನೇ ಬಾರಿ ರೈಲು ಬಜೆಟ್]

ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಪರವಾಗಿ ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಎರಡನೇ ಬಾರಿಗೆ ಪೂರ್ಣ ಪ್ರಮಾಣದ ರೈಲ್ವೆ ಬಜೆಟ್ ಮಂಡಿಸುತ್ತಿದ್ದಾರೆ. [ರೈಲ್ವೆ ಬಜೆಟ್ 2015: ಕರ್ನಾಟಕದ ನಿರೀಕ್ಷೆಗಳು]

ಈ ಬಾರಿಯೂ ಕೂಡಾ ಕನ್ನಡಿಗರು ಹೆಚ್ಚಿನ ಇಂಟರ್ ಸಿಟಿ ರೈಲು, ಹೊಸ ಮಾರ್ಗಗಳು, ಸೂಪರ್ ಫಾಸ್ಟ್ ರೈಲುಗಳ ಸಬ್ ಅರ್ಬನ್ ರೈಲಿಗೆ ಹೆಚ್ಚಿನ ಅನುದಾನದ ನಿರೀಕ್ಷೆ ಇದೆ. [ಭಾರತೀಯ ರೈಲ್ವೆ : ಅಂಕಿ ಸಂಖ್ಯೆಯಲ್ಲಿ ಚುಕು ಬುಕು]

ಪಕ್ಕದ ರಾಜ್ಯ ತಮಿಳುನಾಡು, ಆಂಧ್ರಪ್ರದೇಶ ಹಾಗೂ ತೆಲಂಗಾಣಕ್ಕೆ ಭರ್ಜರಿ ಗಿಫ್ಟ್ ಸಿಕ್ಕರೆ ಸ್ವಲ್ಪ ಪಾಲು ಗಡಿಭಾಗದ ಕರ್ನಾಟಕಕ್ಕೂ ಸಿಗಲಿದೆ. ಆದರೆ, ಒಳನಾಡು ರೈಲು ಸಂಪರ್ಕ ಬಲಗೊಳ್ಳುವ ಯೋಜನೆಗಳಿಗೆ ಬರ ಬಂದಿದೆ. [ರೈಲ್ವೆ ಬಜೆಟ್ 2015: ಪ್ರಭು ಪ್ರಥಮ ಚುಂಬನ ಅನುಭವ]

ಹುಬ್ಬಳ್ಳಿ-ಅಂಕೋಲ, ಚಾಮರಾಜನಗರ-ಮೆಟ್ಟುಪಾಳ್ಯ, ಚಾಮರಾಜನಗರ-ಸತ್ಯಮಂಗಲ, ಕುಶಾಲನಗರ-ಮಡಿಕೇರಿ ಮತ್ತು ತಾಳಗುಪ್ಪ-ಹೊನ್ನಾವರ ನೂತನ ಮಾರ್ಗಗಳು ಹಾಗೂ ಸಕಲೇಶಪುರ-ಸುಬ್ರಹ್ಮಣ್ಯ ಜೋಡಿ ಮಾರ್ಗ ರಚನೆ ಆಗಬೇಕಿದೆ ಚಾಲ್ತಿಯಲ್ಲಿರುವ ಈ ಕಾಮಗಾರಿಗಳ ನಡುವೆ ಹೊಸ ಮಾರ್ಗಗಳ ಬೇಡಿಕೆ ಈ ಬಾರಿ ಹೆಚ್ಚಾಗಿದೆ.

ರೈಲ್ವೆ ಬಜೆಟಲ್ಲಿ ಯಾವುದಕ್ಕೆ ಹೆಚ್ಚಿನ ಆದ್ಯತೆ ಸಿಗಲಿದೆ

ರೈಲ್ವೆ ಬಜೆಟಲ್ಲಿ ಯಾವುದಕ್ಕೆ ಹೆಚ್ಚಿನ ಆದ್ಯತೆ ಸಿಗಲಿದೆ

* ಮೋದಿ ಕನಸಿನ ಡೈಮಂಡ್ ಚತುಷ್ಪಥ ಯೋಜನೆ-ದೇಶದ ಮೆಟ್ರೋ ನಗರಗಳನ್ನು ಹೈ ಸ್ಪೀಡ್ ರೈಲು, ಪಾರ್ಸೆಲ್ ರೈಲು, ವಿಶೇಷ ರೈಲುಗಳ ಮೂಲಕ ಸಂಪರ್ಕ ಸಾಧಿಸುವ ಯೋಜನೆ.
* ಬಾಕಿ ಉಳಿದಿರುವ 300 ಯೋಜನೆಗೆ ಹಣ ಸಂಗ್ರಹ ಗುರಿ. ಆದಾಯ 136,079.26 ಕೋಟಿ ರು ನಷ್ಟಿದೆ. 141,416.05 ಕೋಟಿ ರು ನಿರೀಕ್ಷೆ ಇತ್ತು. ಶೇ 3.77 ರಷ್ಟು ಆದಾಯ ಕುಸಿತವಾಗಿದೆ.

ಸಬ್ ಅರ್ಬನ್ ರೈಲಿಗೆ ಆದ್ಯತೆ

ಸಬ್ ಅರ್ಬನ್ ರೈಲಿಗೆ ಆದ್ಯತೆ

* ಪ್ರಯಾಣಿಕರ ಸುರಕ್ಷತೆಗೆ ತಂತ್ರಜ್ಞಾನ ಬಳಕೆ, ರೈಲ್ವೆ ಸುರಕ್ಷತಾ ದಳ (ಆರ್ ಪಿಎಫ್)ಕ್ಕೆ ಹೆಚ್ಚಿನ ಶಕ್ತಿ.
* ಸಬ್ ಅರ್ಬನ್ ರೈಲಿಗೆ ಆದ್ಯತೆ. ಮುಂಬೈನಲ್ಲಿ ಎಸಿ ಸಬ್ ಅರ್ಬನ್ ರೈಲಿಗೆ ಚಾಲನೆ ನಂತರ ಇತರೆ ನಗರಗಳಿಗೆ ಸಿಗಲಿದೆ.
* ವೈಫೈ ಬಳಕೆ ಹೆಚ್ಚಳ, ಆರ್ ಎಫ್ ಐಡಿ ಮೂಲಕ ರೈಲುಗಳ ಸಂಚಾರ ಟ್ರ್ಯಾಕಿಂಗ್.
* ಸ್ವಚ್ಛ ಭಾರತ ಅಭಿಯಾನ, ಪ್ರಯಾಣಿಕರ ಆಹಾರ ವ್ಯವಸ್ಥೆ ಬಗ್ಗೆ ಹೆಚ್ಚಿನ ಕಾಳಜಿ.
* 400ಕ್ಕೂ ಅಧಿಕ ಗ್ರೀನ್ ಸ್ಟೇಷನ್ ಸ್ಥಾಪನೆ.

ಉತ್ತರ ಕರ್ನಾಟಕ ಭಾಗದ ಜನರ ನಿರೀಕ್ಷೆಗಳೇನು

ಉತ್ತರ ಕರ್ನಾಟಕ ಭಾಗದ ಜನರ ನಿರೀಕ್ಷೆಗಳೇನು

* ಬಾಗಲಕೋಟೆ-ಕುಡಚಿಗೆ ಹೊಸ ಮಾರ್ಗದ ನಿರೀಕ್ಷೆಯಿದೆ.
* ಬಳ್ಳಾರಿ-ಹೊಸಪೇಟೆ ಟು ಬೆಂಗಳೂರು ಇಂಟರ್ ಸಿಟಿ ರೈಲು ಓಡಾಡಿದ್ರೆ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ.
* ಗುಂತಕಲ್, ಬಿಜಾಪುರ-ಬಳ್ಳಾರಿ ಇಂಟರ್ ಸಿಟಿ ರೈಲು ಹಾಗೇ ಬೀದರ್ ಕಲಬುರಗಿ ನಡುವೆ ರೈಲು ಮಾರ್ಗ ಬೇಕಿದೆ.
* ರಾಯಚೂರಿನಲ್ಲಿ ರೈಲು ವಿಭಾಗದ ಕಚೇರಿ ಸ್ಥಾಪನೆಯಾಗಲಿ.
* ಬೀದರ್-ಕಲಬುರಗಿ, ಕಲಬುರಗಿ-ಗಬ್ಬೂರು ತನಕ ಸರ್ವೇ ಕಾರ್ಯ,
* ಬಳ್ಳಾರಿ ರಾಯದುರ್ಗ ಬ್ರಾಡ್ ಗೇಜ್ ಪರಿವರ್ತನೆ.

ಮಲೆನಾಡು ಭಾಗದ ನಿರೀಕ್ಷೆಗಳೇನು..?

ಮಲೆನಾಡು ಭಾಗದ ನಿರೀಕ್ಷೆಗಳೇನು..?

* ಸಕಲೇಶಪುರ-ಮೂಡಿಗೆರೆ-ಶೃಂಗೇರಿ ಮಾರ್ಗ ಯೋಜನೆ ಜಾರಿ
* ಕಡೂರು ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲಿನ ನಿಲುಗಡೆ
* ಶಿವಮೊಗ್ಗ-ಹೊನ್ನಾವರ ಮಾರ್ಗ
* ಶಿಕಾರಿಪುರ ರಾಣೆ ಬೆನ್ನೂರು-ತಾಳಗುಪ್ಪ
* ಶಿವಮೊಗ್ಗ-ಹರಿಹರ ಮಾರ್ಗ
* ಶಿವಮೊಗ್ಗ-ಬೆಂಗಳೂರಿಗೆ ಮತ್ತೊಂದು ಎಕ್ಸ್ ಪ್ರೆಸ್
* ಶಿವಮೊಗ್ಗ-ತಿರುಪತಿ ರೈಲು
* ಶಿವಮೊಗ್ಗ-ಬೆಂಗಳೂರಿಗೆ ಹೆಚ್ಚುವರಿ ರೈಲು
* ಶಿವಮೊಗ್ಗ-ಅರಸೀಕೆರೆ ಮಾರ್ಗ ಡಬ್ಲಿಂಗ್
* ಶಿವಮೊಗ್ಗ ಕಡೂರು ಚಿಕ್ಕಮಗಳೂರು ರೈಲು ಹಾಸನದವರೆಗೂ ವಿಸ್ತರಣೆ
* ಚಿಕ್ಕಮಗಳೂರು -ಸಕಲೇಶಪುರ ಮಾರ್ಗ
* ಯಶವಂತಪುರ-ಚಿಕ್ಕಮಗಳೂರು ಹಗಲು ರೈಲು
* ಬೀರೂರು-ಶಿವಮೊಗ್ಗ ಡಬ್ಬಲ್ ಲೈನ್ ಸರ್ವೇ

ಮಧ್ಯ ಕರ್ನಾಟಕ ಭಾಗದ ನಿರೀಕ್ಷೆಗಳೇನು..?

ಮಧ್ಯ ಕರ್ನಾಟಕ ಭಾಗದ ನಿರೀಕ್ಷೆಗಳೇನು..?

* ಹೈದರಾಬಾದ್- ಚಿತ್ರದುರ್ಗ- ಮೈಸೂರು ರೈಲು
* ಯಶವಂತಪುರ- ಜೋಧಪುರ ರೈಲು ಮಾರ್ಗವನ್ನು ಖಾಯಂಗೊಳಿಸ್ಬೇಕು
* ಚಿತ್ರದುರ್ಗ ರೈಲು ನಿಲ್ದಾಣವನ್ನು " ಡಿ" ದರ್ಜೆಯಿಂದ "ಬಿ" ದರ್ಜೆಗೆ ಏರಿಸಬೇಕು
* ಹುಬ್ಬಳ್ಳಿಯಿಂದ ಬೆಂಗಳೂರಿಗೆ ಹೋಗುವ ಎಲ್ಲ ರೈಲುಗಳನ್ನು ಧಾರವಾಡದಿಂದ ಬಿಡಬೇಕು
* ಹೈದರಾಬಾದ್- ಚಿತ್ರದುರ್ಗ-ಮೈಸೂರು
* ಬಳ್ಳಾರಿ ಮಾರ್ಗವಾಗಿ ಹೊಸಪೇಟೆ- ಬೆಂಗಳೂರು ಇಂಟರ್ ಸಿಟಿ ರೈಲು

ಹಳೇ ಮೈಸೂರು ಪ್ರಾಂತ್ಯದ ಬೇಡಿಕೆಗಳೇನು?

ಹಳೇ ಮೈಸೂರು ಪ್ರಾಂತ್ಯದ ಬೇಡಿಕೆಗಳೇನು?

* ನಿಲಂಬೂರ್-ನಂಜನಗೂಡು ನೂತನ ಮಾರ್ಗ ಆರಂಭ.
* ಮೈಸೂರು-ದೆಹಲಿ ಸ್ವರ್ಣ ಜಯಂತಿ ಏಕ್ಸ್ ‍ಪ್ರೆಸ್ (ವಾರಕೊಮ್ಮೆ ಇರುವ ರೈಲು ವಾರಕ್ಕೆ 2 ಬಾರಿ ಬರಲಿ)
* ಬೆಂಗಳೂರು-ಮುಂಬೈ ಉದ್ಯಾನ್ ಏಕ್ಸ್ ಪ್ರೆಸ್ ಮೈಸೂರಿಗೆ ವಿಸ್ತರಣೆ
* ಮೈಸೂರಿನಿಂದ ವಾರಣಾಸಿಗೆ ಹೊಸ ರೈಲು ಓಡಾಡಬೇಕಿದೆ.
* ಹಾಸನ-ಬೆಂಗಳೂರು ರೈಲ್ವೆ ಮಾರ್ಗ ನಿರ್ಮಾಣ ಕಾಮಗಾರಿ ಪೂರ್ಣವಾಗಲಿ
* ಚನ್ನಪಟ್ಟಣ ರೇಲ್ವೆ ಗೇಟ್, ಸ್ಟೇಷನ್ ನವೀಕರಣ ‍
* ಚಿಕ್ಕಬಳ್ಳಾಪುರದಿಂದ ಪುಟ್ಟಪರ್ತಿ, ಗೌರಿಬಿದನೂರಿಗೆ ನೂತನ ಮಾರ್ಗ.
* ಬೆಂಗಳೂರು-ಮಾರಿಕುಪ್ಪಂಗೆ ಹೆಚ್ಚುವರಿ ರೈಲು
* ಬಂಗಾರಪೇಟೆ-ಬೆಂಗಳೂರಿಗೆ ಹೆಚ್ಚುವರಿ ರೈಲು ಓಡಾಡಬೇಕು

ಸಾರ್ವಜನಿಕರಿಂದ ಬಂದಿರುವ ಇನ್ನಷ್ಟು ಬೇಡಿಕೆ

ಸಾರ್ವಜನಿಕರಿಂದ ಬಂದಿರುವ ಇನ್ನಷ್ಟು ಬೇಡಿಕೆ

* ವಾಸ್ಕೋ-ಮಂಗಳೂರು ಸೆಂಟ್ರಲ್ ಇಂಟರ್ ಸಿಟಿ
* ಹುಬ್ಬಳ್ಳಿ- ಮಂಗಳೂರು ಸೆಂಟ್ರಲ್ ( ವಯಾ ಹಾಸನ-ಅರಸೀಕೆರೆ) ರಾತ್ರಿ ಎಕ್ಸ್ ಪ್ರೆಸ್
* ಭಟ್ಕಳ-ಮಂಗಳೂರು ಸೆಂಟ್ರಲ್ ಡಿಎಂಯು
* ವಾಸ್ಕೋ-ಮಂಗಳೂರು- ತಿರುಪತಿ
* ನವದೆಹಲಿ- ಸುಬ್ರಮಣ್ಯ ರಸ್ತೆ (ವಯಾ MAO-MAJN)
* 16515/16 ಕಾರವಾರ- ಯಶವಂತಪುರ ಎಕ್ಸ್ ಪ್ರೆಸ್ ಪ್ರತಿದಿನ ಸಂಚಾರಕ್ಕೆ ಮನವಿ (ಸದ್ಯಕ್ಕೆ ವಾರಕ್ಕೆ ಮೂರಾವರ್ತಿ ಇದೆ)
* ಮಂಗಳೂರು- ಜಮ್ಮು ಥಾವಿ ನವ್ ಯುಗ್ ಎಕ್ಸ್ ಪ್ರೆಸ್ ಎರಡು ವಾರಕ್ಕೊಮ್ಮೆ ಸಂಚಾರಕ್ಕೆ ಮನವಿ

ಸಾರ್ವಜನಿಕರಿಂದ ಬಂದಿರುವ ಇನ್ನಷ್ಟು ಬೇಡಿಕೆ-2

ಸಾರ್ವಜನಿಕರಿಂದ ಬಂದಿರುವ ಇನ್ನಷ್ಟು ಬೇಡಿಕೆ-2

* ಮಂಗಳೂರು- ಹೌರಾ ವಿವೇಕ್ ಎಕ್ಸ್ ಪ್ರೆಸ್ ಎರಡು ವಾರಕ್ಕೊಮ್ಮೆ ಸಂಚಾರಕ್ಕೆ ಮನವಿ
* ಕಾರೈಕಲ್-ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ವಯಾ TPJ
* ಕೊಯಮತ್ತೂರು-ಹುಬ್ಬಳ್ಳಿ ಎಕ್ಸ್ ಪ್ರೆಸ್ ಪ್ರತಿದಿನ ವಯಾ ಯಶವಂತಪುರ
* ಡೀಸೆಲ್ ಲೋಕೋಮೋಟಿವ್ ಘಟಕ, ಮಂಗಳೂರು
* ಕೊಯಮತ್ತೂರು-ಬೆಂಗಳೂರು-ಮೈಸೂರು( ಇಂಟರ್ ಸಿಟಿ ವಯಾ ತಿರುಪುರ್, ಈರೋಡ್)
* ಮಂಗಳೂರು- ಹೌರಾ ವಯಾ ಮಡಗಾಂವ್- ಹುಬ್ಬಳ್ಳಿ

English summary
Railway Minister Suresh Prabhakar Prabhu set to present the Railway Budget 2015-16 on Feb.25, 2016. What will be the Karnataka share in the budget? What are the expectations? here are the details.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X