Railway New Line: ಕರ್ನಾಟಕದ ಹೊಸ ರೈಲ್ವೆ ಮಾರ್ಗದ ಸರ್ವೆಗೆ ಕೇಂದ್ರ ಸಚಿವರ ನಿರ್ದೇಶನ
ಬೆಂಗಳೂರು, ಮೇ 01: ಕರ್ನಾಟಕದ ವಿವಿಧ ರೈಲು ಯೋಜನೆಗಳ ಪ್ರಾಥಮಿಕ ಕೆಲಸ, ನಿರ್ಮಾಣ ಕೆಲಸ ಬರದಿಂದ ಸಾಘಿದೆ. ಈ ಮಧ್ಯೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಉತ್ತರ ಕರ್ನಾಟಕದ ಪ್ರಮುಖ 'ಲೋಕಾಪೂರ - ರಾಮದುರ್ಗ - ಸವದತ್ತಿ - ಧಾರವಾಡ' ಮಧ್ಯದ ರೈಲ್ವೆ ಯೋಜನೆ ಕುರಿತು ರಾಜ್ಯದ ಸಂಸದರಿಗೆ ಪತ್ರ ಬರೆದಿದ್ದಾರೆ. ಈ ಮಾರ್ಗದಲ್ಲಿ ರೈಲು ಮಾರ್ಗ ನಿರ್ಮಾಣ ತೀರಾ ಅತ್ಯಗತ್ಯವಾಗಿದೆ ಎಂದು ಸಂದರು ಮಾಹಿತಿ ನೀಡಿದ್ದಾರೆ.
ಉತ್ತರ ಕರ್ನಾಟಕದ ಲೋಕಾಪೂರ - ರಾಮದುರ್ಗ - ಸವದತ್ತಿ - ಧಾರವಾಡ ನಡುವೆ ನೂತನ ರೈಲು ಮಾರ್ಗ ನಿರ್ಮಾಣ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ನಡೆಸಲಾದ ಯೋಜನೆ ಬಗೆಗಿನ "ಸಾಮಾನ್ಯ ಸಮೀಕ್ಷೆ"ಯನ್ನು ಮತ್ತೊಮ್ಮೆ ಅಂದರೆ ಪುನರ್ ಪರಿಶೀಲನೆ ಮಾಡುವಂತೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಈ ಕುರಿತು ತಮಗೆ ಪತ್ರದ ಮೂಲಕ ತಿಳಿಸಿದ್ದಾರೆ ಎಂದು ಬೆಳಗಾವಿ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದರು, ಪ್ರಸ್ತಾಪಿತ ಲೋಕಾಪೂರ - ರಾಮದುರ್ಗ - ಸವದತ್ತಿ - ಧಾರವಾಡ ನಡುವೆ ನೂತನ ರೈಲು ಮಾರ್ಗ ನಿರ್ಮಿಸಲು ಯೋಜಿಸಲಾಗಿದೆ. ಈ ಸಂಬಂಧ ರೇಲ್ವೆ ಅಧಿಕಾರಿಗಳು ಕರೋನಾ-19 (ಕೋವಿಡ್ ರೋಗ) ದೇಶಕ್ಕೆ ಕಾಲಿಡುವ ಮೊದಲು ಸಾಮಾನ್ಯ ಸಮೀಕ್ಷೆ ನಡೆಸಿದ್ದರು. ಇತ್ತೀಚೆಗೆ ಈ ಸಮೀಕ್ಷೆಯ ಪ್ರಕಾರ, ಮಾರ್ಗ ನಿರ್ಮಾಣ ಕಾರ್ಯಸಾಧ್ಯತೆ ಅನುಮಾನದಾಯಕವೆಂದು ಉಲ್ಲೇಖಿಸಿ, ವರದಿ ನೀಡಿದ್ದಾರೆ ಎಂದು ಅವರು ಹರ್ಷ ವ್ಯಕ್ತಪಡಿಸಿದರು.
ಇಲ್ಲಿ ರೈಲ್ವೆ ಮಾರ್ಗ ನಿರ್ಮಾಣ ಅತ್ಯಗತ್ಯ
ಬೆಳಗಾವಿ ಸಂಸದರಾಗಿ ನಾನು ಚುನಾಯಿತಗೊಂಡ ನಂತರದಲ್ಲಿ ಈ ನೂತನ ಮಾರ್ಗ ನಿರ್ಮಾಣದ ಕುರಿತು ಸತ್ಯಾಸತ್ಯತೆಯ ಬಗ್ಗೆ ಸಾಕಷ್ಟು ಮಾಹಿತಿ ಪಡೆದಿದ್ದೇನೆ. ಈ ಭಾಗದಲ್ಲಿ ಹೊಸ ರೈಲ್ವೆ ಮಾರ್ಗ ನಿರ್ಮಾಣ ಅತೀ ಅವಶ್ಯಕವಾಗಿದೆ. ಇಲ್ಲಿನ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದರ್ಶನಕ್ಕೆಂದು ಪ್ರತಿ ವರ್ಷ ಆಗಮಿಸುವ ಲಕ್ಷಾಂತರ ಭಕ್ತಾದಿಗಳಿಗೆ ಇದು ಖಂಡಿತವಾಗಿ ಅನುಕೂಲಕರವಾಗಲಿದೆ.
ಯಲ್ಲಮ್ಮನ ದೇಗುಲಕ್ಕೆ ಬರುವ ಅಪಾರ ಭಕ್ತರಿಗೆ, ಈ ಭಾಗದ ನಾಗರಿಕರಿಗೆ ಇಲ್ಲಿ ರೈಲ್ವೆ ನಿರ್ಮಿಸುವ ಅಗತ್ಯತೆಯನ್ನು ಈಗಾಗಲೇ ಕೇಂದ್ರ ರೇಲ್ವೆ ಸಚಿವರಾದ ಮಾನ್ಯ ಅಶ್ವಿನಿ ವೈಷ್ಣವ್ ಹಾಗೂ ಕೇಂದ್ರ ರೇಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರಿಗೆ ತಿಳಿಸಲಾಗಿದೆ. ಅಷ್ಟೇ ಅಲ್ಲದೇ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಪ್ರಹ್ಲದ್ ಜೋಶಿಯವರಿಗೂ ಮಾಹಿತಿ ನೀಡಿದ್ದಾರೆ.

ಶೀಘ್ರವೇ ಸಮೀಕ್ಷೆ ಕಾರ್ಯ ಆರಂಭ
ಇದೆಲ್ಲ ಮುಗಿದ ಬಳಿಕ ಇದೀದ ಅಶ್ವಿನಿ ವೈಷ್ಣವ್ ಅವರು, ರೇಲ್ವೆ ಬೋರ್ಡ್ಗೆ ಸಂಬಂಧಿಸಿದ ವಿಭಾಗದ ಅಧಿಕಾರಿಗಳಿಗೆ ಈ ಲೋಕಾಪೂರ - ರಾಮದುರ್ಗ - ಸವದತ್ತಿ - ಧಾರವಾಡ ನಡುವೆ ಪ್ರಸ್ತಾಪಿತ ಮಾರ್ಗದಲ್ಲಿ ಸಾಮಾನ್ಯ ಸಮೀಕ್ಷೆ ನಡೆಸುವಂತೆ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಸಮೀಕ್ಷೆ ಕಾರ್ಯವನ್ನು ರೇಲ್ವೆ ಅಧಿಕಾರಿಗಳು ಆದಷ್ಟು ಬೇಗನೇ ಆರಂಭಿಸುವಂತೆ ಅವರು ತಿಳಿಸಿ ಪತ್ರ ಬರೆದಿರುವುದು ಹರ್ಷವೆನಿಸಿದೆ. ಶೀಘ್ರವೇ ಮತ್ತೊಮ್ಮೆ ಸಮೀಕ್ಷೆ ನಡೆಯುವ ವಿಶ್ವಾಸ ಇದೆ ಎಂದರು..
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications