Karnataka Rain Report: ಮುಂದಿನ 5 ದಿನ ಬಿರುಗಾಳಿ ಸಹಿತ ಆರ್ಭಟಿಸಲಿದೆ ಭಾರಿ ಮಳೆ, ಎಲ್ಲೆಲ್ಲಿ?
ರಾಜ್ಯದಲ್ಲಿ ಬೇಸಿಗೆಯಲ್ಲೂ ಭರ್ಜರಿ ಮಳೆ ಸುರಿಯುತ್ತಿದೆ. ರಾಜ್ಯದಾದ್ಯಂತ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-60 ಕಿ.ಮೀ ತಲುಪುವ ಸಾಧ್ಯತೆಯಿದ್ದು ಚದುರಿದಿಂದ ವ್ಯಾಪಕವಾಗಿ ಮಳೆಯಾಗಲಿದೆ. ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗಲಿದೆ. ಇನ್ನುಳಿದ ದಿನಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಮುಂದಿನ 5 ದಿನಗಳ ಕಾಲ ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇದೆ.
ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಇಂದು ವ್ಯಾಪಕವಾಗಿ ಅಲ್ಲಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆ ಇದೆ. ದಕ್ಷಿಣ ಅಂಡಮಾನ್ ಮತ್ತು ನೆರೆಹೊರೆಗಳಲ್ಲಿ ಚಂಡಮಾರುತದ ಪರಿಚಲನೆಯು ಈಗ ಬಂಗಾಳಕೊಲ್ಲಿಯ ಆಗ್ನೇಯ ಮತ್ತು ನೆರೆಹೊರೆ ಪ್ರದೇಶದ ಮೇಲೆ ಇದ್ದು, ಇದು ಸರಾಸರಿ ಸಮುದ್ರ ಮಟ್ಟದಿಂದ 3.1 ಕಿ.ಮೀ.ವರೆಗೆ ವಿಸ್ತರಿಸಿದೆ. ಉತ್ತರ-ದಕ್ಷಿಣ ತಗ್ಗು ಉತ್ತರ ಮಧ್ಯ ಮಹಾರಾಷ್ಟ್ರದಿಂದ ಉತ್ತರ ತಮಿಳುನಾಡಿನವರೆಗೆ ಕರ್ನಾಟಕದ ಒಳಭಾಗದವರೆಗೆ ಸಮುದ್ರ ಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿ ಇದು ಸಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಶನಿವಾರ ಭಾರಿ ಮಳೆಯಾಗಿದೆ. ಚಾಮರಾಜನಗರದ ಬೇಗೂರು 9 ಸೆಂ.ಮೀ ಮಳೆಯಾಗಿದೆ. ಕೃಷ್ಣರಾಜಸಾಗರ 8, ಗುಂಡ್ಲುಪೇಟೆ 7, ಬಂಡೀಪುರ 5, ಭಾಗಮಂಡಲ 3, ಕೃಷ್ಣರಾಜಪೇಟೆ 3, ಎಚ್ ಡಿ ಕೋಟೆ 3, ಮಂಡ್ಯ ಪಿಟಿಒ 3, ಕೋಲಾರ 2, ಶ್ರೀರಂಗಪಟ್ಟಣ 2, ರಾಯಲ್ಪಾಡು 2, ಶಿಗ್ಗಾಂವ್ 1, ಹುಬ್ಬಳ್ಳಿ 1, ಕೆ ಆರ್ ನಗರದಲ್ಲಿ ತಲಾ 1 ಸೆಂ.ಮೀ ಮಳೆ ವರದಿಯಾಗಿದೆ.
ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು, ಕೊಡಗು, ಮೈಸೂರು, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರು ಭಾಗದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಇದರ ಜೊತೆಗೆ ಹಗುರದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34 ಡಿಗ್ರಿ ಸೆಲ್ಸಿಯಸ್ನಿಂದ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಎಲ್ಲೆಲ್ಲಿ ತಾಪಮಾನ ಕುಸಿತ?
ಬೆಳಗಾವಿ, ಬೀದರ್, ಕೊಪ್ಪಳ, ಉತ್ತರ ಒಳನಾಡಿನ ರಾಯಚೂರಿನಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯ ಮಟ್ಟಕ್ಕಿಂತ ಕಡಿಮೆಯಾಗಿದೆ. ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದ ಚಿತ್ರದುರ್ಗ, ವಿಜಯಪುರ, ಬಾಗಲಕೋಟೆಯಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಇದೆ. ಧಾರವಾಡ, ಗದಗ, ಕಲಬುರಗಿ, ಉತ್ತರ ಆಂತರಿಕ ಕರ್ನಾಟಕದ ಹಾವೇರಿ ಮತ್ತು ಬೆಂಗಳೂರು ಎಚ್ಎಎಲ್, ಕೆಂಪೇಗೌಡ ಏರ್ಪೋರ್ಟ್, ಹಾಸನ, ಚಿಂತಾಮಣಿ, ಮಂಡ್ಯ ಮತ್ತು ದಕ್ಷಿಣ ಒಳ ಕರ್ನಾಟಕದ ಶಿವಮೊಗ್ಗದಲ್ಲಿ ಗರಿಷ್ಠ ತಾಪಮಾನ ಇತ್ತು. ಉಳಿದಂತೆ ಕರಾವಳಿ ಕರ್ನಾಟಕದ ಕಾರವಾರದಲ್ಲಿ ಸಾಮಾನ್ಯಕ್ಕಿಂತ ತಾಪಮಾನ ಹೆಚ್ಚಾಗಿದ್ದು, ರಾಜ್ಯದ ಇತರ ಭಾಗಗಳಲ್ಲಿ ಸಾಮಾನ್ಯವಾಗಿದೆ.












Click it and Unblock the Notifications