ಮುಂದಿನ 3 ದಿನ ಕರ್ನಾಟಕದ ವಿವಿಧೆಡೆ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು, ಸೆಪ್ಟೆಂಬರ್ 19: ಇನ್ನೊಂದು ವಾರ ಕರ್ನಾಟಕದ ವಿವಿಧೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ 21 ಹಾಗೂ 22 ರಂದು ಕರ್ನಾಟಕದ ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಕೊಡಗಿನಲ್ಲಿ ಮತ್ತೆ ಭಾರಿ ಮಳೆಯ ಎಚ್ಚರಿಕೆ

ಕೊಡಗಿನಲ್ಲಿ ಮತ್ತೆ ಭಾರಿ ಮಳೆಯ ಎಚ್ಚರಿಕೆ

ಆಶ್ಲೇಷ ಮಳೆಗೆ ನಲುಗಿದ್ದ ಕೊಡಗಿನಲ್ಲಿ ನಾಳೆಯಿಂದ ಮತ್ತೆ ವರುಣ ಆರ್ಭಟಿಸಲಿದ್ದು, ರೆಡ್​ ಆಲರ್ಟ್​ ಘೋಷಣೆ ಮಾಡಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ನಾಳೆಯಿಂದ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. 19 ರಿಂದ 21ರವರೆಗೆ ಮೂರು ದಿನಗಳ ಕಾಲ 115 ಮಿಲಿ ಮೀಟರ್​ನಿಂದ 204 ಮಿಲಿ ಮೀಟರ್​ವರೆಗೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ನದಿ ಪಾತ್ರ, ಬೆಟ್ಟ ಪ್ರದೇಶದ ಜನರಿಗೆ ಎಚ್ಚರಿಕೆ

ನದಿ ಪಾತ್ರ, ಬೆಟ್ಟ ಪ್ರದೇಶದ ಜನರಿಗೆ ಎಚ್ಚರಿಕೆ

ಈ ಹಿನ್ನೆಲೆ ನದಿ ಪಾತ್ರ ಹಾಗೂ ಬೆಟ್ಟ ಪ್ರದೇಶದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಕಳೆದೆರಡು ದಿನಗಳಿಂದ ಮಡಿಕೇರಿ, ನಾಪೋಕ್ಲು, ಭಾಗಮಂಡಲ, ತಲಕಾವೇರಿ ಸೇರಿದಂತೆ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ. ನಾಳೆಯಿಂದ ಈ ಮಳೆ ಮತ್ತಷ್ಟು ವ್ಯಾಪಕವಾಗಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ರಾಜ್ಯದ ಇತರೆ ಭಾಗದಲ್ಲಿ ಮುಂದುವರೆದ ಮಳೆ

ರಾಜ್ಯದ ಇತರೆ ಭಾಗದಲ್ಲಿ ಮುಂದುವರೆದ ಮಳೆ

ಕಳೆದ ಮೂರುದಿನಗಳಿಂದ ಬೀದರ್​, ರಾಯಚೂರು ಕಲಬುರಗಿಯಲ್ಲಿ ಧಾರಾಕಾರಣ ಮಳೆಯಾಗುತ್ತಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬೀದರ್​ನ ಮಾಜ್ರಾ, ಕಲಬುರಗಿಯ ಕಾಗಿಣಾ ನದಿಗಳು ಒಉಕ್ಕಿ ಹರಿಯುತ್ತಿದ್ದು, ಚಿತ್ತಾಪುರ ಸೇಡ., ಕಾಳಗಿ, ಚಿಂಚೋಳಿ, ಭಾಲ್ಕಿ , ಔರಾದ್​ನ ಅನೇಕ ಕಡೆ ಸಂಚಾರ ವ್ಯವಸ್ಥೆ ಕಡಿತಗೊಂಡಿದೆ. ನದಿ, ಕೆರೆ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿದ್ದು, ಹಲವು ಸೇತುವೆ ಮುಳುಗಿವೆ.

ದಾವಣಗೆರೆ, ಚಿತ್ರದುರ್ಗು, ಉಡುಪಿ, ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾಗಿದೆ. ಈ ನಡುವೆ ಬೆಂಗಳೂರು ಸೇರಿದಂತೆ ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಕೆಎಸ್​ಎನ್​ಡಿಎಂಸಿ ಟ್ವೀಟ್​ ಮೂಲಕ ತಿಳಿಸಿದೆ.

Recommended Video

    ಶಾಲಾ ಕಾಲೇಜು ಶುರುವಾಗೋದು ಯಾವಾಗ ಗೊತ್ತಾ ? | Oneindia Kannada
    ಜುಲೈನಲ್ಲಿ ಸಾಕಷ್ಟು ಅವಾಂತರ

    ಜುಲೈನಲ್ಲಿ ಸಾಕಷ್ಟು ಅವಾಂತರ

    ಜುಲೈನಲ್ಲಿ ಸುರಿದ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿತ್ತು. ಗುಡ್ಡ ಕುಸಿತಕ್ಕೆ ಅರ್ಚಕರ ಕುಟುಂಬ ಬಲಿಯಾಗಿತ್ತು. ಭಾಗಮಂಡಲ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಹಲವಾರು ಮನೆ ಕುಸಿದಿದ್ದವು. ಈ ಹಿನ್ನೆಲೆ ಈ ಬಾರಿ ಕೂಡ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸ್ಥಳೀಯರಲ್ಲಿ ಮನವಿ ಮಾಡಿದ್ದು, ತುರ್ತು ದೂರುವಾಣಿ ಸಂಪರ್ಕಿಸುವಂತೆ ತಿಳಿಸಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+