ಉತ್ತರ ಕರ್ನಾಟಕದಲ್ಲಿ ಏ.10ರವರೆಗೂ ಮಳೆ ಮುನ್ಸೂಚನೆ
ಬೆಂಗಳೂರು, ಏ.6: ಈಗಾಗಲೇ ಸೂರ್ಯನ ತಾಪದಿಂದ ಕಾದಿದ್ದ ಭೂಮಿಗೆ ಮಳೆರಾಯ ತಂಪೆರೆದಿದ್ದಾನೆ. ಕಲಬುರಗಿ, ವಿಜಯಪುರ, ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಮೈಸುಡುವ ಝಳದ ನಡುವೆಯೇ ಅಕಾಲಿಕ ಮಳೆ ತಂಪು ನೀಡಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಹಾಗೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮತ್ತು ಹುಕ್ಕೇರಿ ತಾಲೂಕಿನಲ್ಲಿ ಶುಕ್ರವಾರ ಗಾಳಿ, ಗುಡುಗು ಮಿಂಚಿನ ಆರ್ಭಟದೊಂದಿಗೆ ಮಳೆ ಸುರಿದಿದೆ. ಏ.10ರವರೆಗೂ ದಕ್ಷಿಣ ಒಳನಾಡು ಹಾಗೂ ಉತ್ತರ ಕರ್ನಾಟಕದಲ್ಲಿ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ ಕಲಬುರಗಿಯಲ್ಲಿ 41.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ವಿವಿಧ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಜಮಖಂಡಿಯ ಕೊಣ್ಣೂರು ಗ್ರಾಮದಲ್ಲಿ ಗಾಳಿ ಮಿಶ್ರಿತ ಆಲಿಕಲ್ಲು ಮಳೆಯಾಗಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.











Click it and Unblock the Notifications