ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆ.17ರ ತನಕ ಮಳೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 14 : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 17ರ ತನಕ ಮಳೆಯಾಗುವ ನಿರೀಕ್ಷೆ ಇದೆ. ವೇಗವಾಗಿ ಗಾಳಿಯೂ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಯಾದಗಿರಿ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಬಳ್ಳಾರಿಯಲ್ಲಿ ಧಾರಾಕಾರ ಮಳೆ: ಜೀವಕಳೆ ಪಡೆದ 'ಮಾನಸ ಸರೋವರ'ಬಳ್ಳಾರಿಯಲ್ಲಿ ಧಾರಾಕಾರ ಮಳೆ: ಜೀವಕಳೆ ಪಡೆದ 'ಮಾನಸ ಸರೋವರ'

ಬೆಂಗಳೂರು ನಗರದಲ್ಲಿ ಭಾನುವಾರವೂ ಮೋಡ ಕವಿದ ವಾತಾವರಣವಿತ್ತು. ಆಗಾಗ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ನಗರದಲ್ಲಿ ಉಷ್ಣಾಂಶ ಕುಸಿತವಾಗಿದೆ. ಮುಂದಿನ 24 ಗಂಟೆಗಳ ಕಾಲ ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

 ಮಂಗಳೂರಿನಲ್ಲಿ ಭಾರೀ ಮಳೆ; ಕೊಂಚಾಡಿಯ ಫ್ಲಾಟ್ ಹಿಂಭಾಗದ ಧರೆ ಕುಸಿತ ಮಂಗಳೂರಿನಲ್ಲಿ ಭಾರೀ ಮಳೆ; ಕೊಂಚಾಡಿಯ ಫ್ಲಾಟ್ ಹಿಂಭಾಗದ ಧರೆ ಕುಸಿತ

Rain In Karnataka Kravali Toll September 17

ಕೊಡಗು ಜಿಲ್ಲೆಯಲ್ಲಿ ಶುಕ್ರವಾರದಿಂದ ಉತ್ತಮ ಮಳೆ ಸುರಿಯುತ್ತಿದೆ. ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ನಾಪೋಕ್ಲು, ಚೇರಂಬಾಣೆ ಭಾಗದಲ್ಲಿ ಹಳ್ಳಗಳು ತುಂಬಿ ಹರಿಯುತ್ತಿವೆ. ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿರುವುದಿಂದ ಕಾವೇರಿ ನದಿಯಲ್ಲಿನ ಒಳಹರಿವು ಹೆಚ್ಚಾಗಿದೆ.

ರಾಜ್ಯದಲ್ಲಿ ಮಳೆ ಮುನ್ಸೂಚನೆ, ಪ್ರಮುಖ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ ರಾಜ್ಯದಲ್ಲಿ ಮಳೆ ಮುನ್ಸೂಚನೆ, ಪ್ರಮುಖ ಅಣೆಕಟ್ಟುಗಳಲ್ಲಿನ ನೀರಿನ ಮಟ್ಟ

Recommended Video

Karnataka ಯಾವ ಪ್ರದೇಶದಲ್ಲಿ ಭಾರಿ ಮಳೆ ನಿರೀಕ್ಷೆ | Oneindia Kannada

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಸೆಪ್ಟೆಂಬರ್ 17ರ ತನಕ ಮಳೆ ಮುಂದುವರೆಯಲಿದೆ. ಈ ಭಾಗದಲ್ಲಿ ಗಂಟೆಗೆ 50 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

English summary
The India Meteorological Department (IMD) has issued rain alert in Karnataka Karavali districts till September 17, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X