Rain in Karnataka: ಜುಲೈನಲ್ಲಿ ಮಳೆ ಕೊರತೆ, ಬರಿದಾಗುತ್ತಿರುವ ಜಲಾಶಯಗಳು- ತಮಿಳುನಾಡಿನಿಂದ ಕಾವೇರಿ ನೀರಿನ ಬೇಡಿಕೆ
ಬೆಂಗಳೂರು, ಜುಲೈ 22: ಕರ್ನಾಟಕದಲ್ಲಿ ಮಳೆ ಕೊರತೆ ಉಂಟಾಗಿದ್ದು, ನಾಡಿನ ಜಲಾಶಯಗಳು ಬರಿದಾಗುತ್ತಿವೆ. ಆದರೆ, ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ 72 ಗಂಟೆಗಳಲ್ಲಿ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ.
ಈ ಮಳೆಯು ಸ್ಪಲ್ಪ ಮಟ್ಟಿಗಿನ ಮಳೆ ಕೊರತೆಯನ್ನು ತಗ್ಗಿಸುತ್ತದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ. ಆದರೂ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ತಿಂಗಳ ಮಳೆ ಕೊರತೆಯು ಶೇ 18ರಷ್ಟಿದೆ ಎಂದು ತಿಳಿದುಬಂದಿದೆ.
ಬೀದರ್, ಬೆಳಗಾವಿ, ಕಲಬುರಗಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ವಾರದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಜ್ಞರು ಭವಿಷ್ಯ ನುಡಿದಿದ್ದಾರೆ.

ಕರಾವಳಿ ಕರ್ನಾಟಕ, ಘಟ್ಟ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ಸ್ವಲ್ಪ ಹೆಚ್ಚು ಮಳೆಯಾಗುತ್ತದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.
ಆದರೆ, ಕಾವೇರಿ ನದಿಯ ಜಲಾನಯನ ಪ್ರದೇಶವು ತೀವ್ರ ಮಳೆ ಕೊರತೆಯನ್ನು ಎದುರಿಸುತ್ತಿದೆ, ಅದರಲ್ಲೂ ವಿಶೇಷವಾಗಿ ಕೊಡಗು ಜಿಲ್ಲೆಯಲ್ಲಿ ಅತ್ಯಂತ ಕಡಿಮೆ ಮಳೆಯಾಗಿದೆ.
'ಮಳೆ ಕೊರತೆ ತೀವ್ರವಾಗಿದೆ. ಒಟ್ಟಾರೆ ಕರ್ನಾಟಕಕ್ಕೆ ಕೊರತೆಯು ಶೇ 18 ರಷ್ಟಿದೆ. ಅಂದರೆ, ಜುಲೈ ವೇಳೆಗೆ ಕರ್ನಾಟಕವು ಸುಮಾರು 70 ಪ್ರತಿಶತ ಮಳೆ ಪಡೆದಿದೆ' ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಕೊಡಗು ಜಿಲ್ಲೆಯು ಕಾವೇರಿ ಜಲಾನಯನ ಪ್ರದೇಶಕ್ಕೆ ನೀರಿನ ಕೊಡುಗೆ ನೀಡುತ್ತದೆ. ಆದರೆ ಕೊರತೆಯು ಆತಂಕಕ್ಕೆ ಕಾರಣವಾಗಿದೆ.
'ಕೊಡಗಿನಲ್ಲಿ ಮಳೆಯಾಗುತ್ತಿಲ್ಲ. ಇದು ಕಾವೇರಿ ನದಿಯ ಮೂಲವಾಗಿದೆ. ಇಲ್ಲಿ 55 ರಷ್ಟು ಕಡಿಮೆ ಮಳೆಯಾಗಿದೆ' ಎಂದು ಐಎಂಡಿ ವಿಜ್ಞಾನಿ ಹೇಳಿದ್ದಾರೆ.
ಕರಾವಳಿ ಕರ್ನಾಟಕವು ಶೇ 12 ರಷ್ಟು ಮಳೆ ಕೊರತೆಯನ್ನು ಎದುರಿಸುತ್ತಿದೆ. ಉತ್ತರ ಒಳಭಾಗದಲ್ಲಿ ಶೇ 7 ಮತ್ತು ಬೆಂಗಳೂರು, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಶೇ 29 ರಷ್ಟು ಕೊರತೆಯಿದೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮಧ್ಯಪ್ರವೇಶದ ಹೊರತಾಗಿಯೂ ಕರ್ನಾಟಕ ಸರ್ಕಾರವು ಕಾವೇರಿ ನೀರನ್ನು ಬಿಡುಗಡೆ ಮಾಡುತ್ತಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಆರೋಪಿಸಿದ್ದಾರೆ. ಈ ಕುರಿತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಪತ್ರ ಬರೆದಿದ್ದಾರೆ.
ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಕರ್ನಾಟಕ ಕೂಡಲೇ ನೀರು ಬಿಟ್ಟರೆ ಮಾತ್ರ ಬೆಳೆದು ನಿಂತಿರುವ ಕುರುವಾಯಿ (ಅಲ್ಪಾವಧಿ ಭತ್ತ) ಬೆಳೆಯನ್ನು ಉಳಿಸಬಹುದು ಎಂದು ಸ್ಟಾಲಿನ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್












Click it and Unblock the Notifications