ಕರ್ನಾಟಕ; ಸತತ ಮಳೆ, ತರಕಾರಿ ಬೆಲೆಗಳಲ್ಲಿ ಏರಿಕೆ
ಬೆಂಗಳೂರು, ಅಕ್ಟೋಬರ್ 12; ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಜನರಿಗೆ ಸಂಕಷ್ಟ ತಂದಿದೆ. ಮಳೆ ಹಾನಿ ಒಂದು ಕಡೆ ಮತ್ತೊಂದು ಕಡೆ ತರಕಾರಿಗಳ ಬೆಲೆಗಳು ಏರಿಕೆಯಾಗಿವೆ.
ಸೆಪ್ಟೆಂಬರ್ನಲ್ಲಿಯೇ ನೈಋತ್ಯ ಮುಂಗಾರು ಅಂತ್ಯಗೊಂಡಿದೆ. ಆದರೆ ಚಂಡಮಾರುತದ ಪ್ರಭಾವದಿಂದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅಕ್ಟೋಬರ್ 16ರ ತನಕ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ಕೊಟ್ಟಿದೆ.
ಕಲಬುರಗಿ, ಶಿವಮೊಗ್ಗ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತರಕಾರಿಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಮಳೆಯಿಂದಾಗಿ ತರಕಾರಿ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಆದ್ದರಿಂದ ಬೆಲೆ ಏರಿಕೆಯಾಗಿದೆ.

ಭಾನುವಾರವೇ ಬೆಂಗಳೂರು ನಗರದಲ್ಲಿ ಟೊಮೆಟೋ ಬೆಲೆ 60ರ ಗಡಿ ದಾಟಿತ್ತು. ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗ ರೈತರಿಗೂ ನಷ್ಟವಾಗುತ್ತಿದೆ. ಮಳೆ ನೀರು ಹೊಲಗಳಿಗೆ ನುಗ್ಗಿ ವಿವಿಧ ಬೆಳೆಗಳು ಜಲಾವೃತಗೊಂಡು ನಷ್ಟ ಉಂಟಾಗಿದೆ.
ಕಲಬುರಗಿಯ ತರಕಾರಿ ವ್ಯಾಪಾರಿ ಸಲಾವುದ್ದೀನ್ ಈ ಕುರಿತು ಮಾತನಾಡಿದ್ದಾರೆ, "ಭಾರೀ ಮಳೆಯ ಕಾರಣ ನಮಗೆ ತರಕಾರಿ ಸರಬರಾಜು ಆಗುತ್ತಿಲ್ಲ. ಇದರಿಂದಾಗಿ ಬೆಲೆಗಳು ಏರಿಕೆಯಾಗಿವೆ. ರೈತರು ಸಹ ಇಂತಹ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ" ಎಂದು ಹೇಳಿದ್ದಾರೆ.
Delhi: Vegetable prices increase in the national capital. A seller at Okhla vegetable market says, "The price of tomatoes in wholesale has increased from Rs 10-20 per kg to Rs 30-40 per kg. Due to heavy rains in Maharashtra & Karnataka crops got damaged & hence prices are high." pic.twitter.com/DgrbupGAfz
— ANI (@ANI) October 12, 2021
ತರಕಾರಿ ಕೊಳ್ಳಲು ಕಲಬುರಿಗೆ ಆಗಮಿಸಿದ್ದ ಚಂದ್ರ ಪಾಟೀಲ್ ಮಾತನಾಡಿ, "ಟೊಮೆಟೋ 60 ರೂ. ಕೆಜಿಯಾಗಿದೆ. ಈರುಳ್ಳಿ ಬೆಲೆ 50 ರೂ. ಆಗಿದೆ. ನಾವು 10 ತರಕಾರಿ ತೆಗೆದುಕೊಳ್ಳುವವರು ಈಗ 2.5 ಕೆಜಿ ಖರೀದಿ ಮಾಡುತ್ತಿದ್ದೇವೆ" ಎಂದು ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸಹ ತರಕಾರಿಗಳ ಬೆಲೆಗಳು ಹೆಚ್ಚಾಗಿವೆ. ಮಳೆಯಿಂದಾಗಿ ಬೆಳೆ ಹಾನಿಯಾಗಿದೆ. ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಈರುಳ್ಳಿ ಬೆಲೆ 40 ರಿಂದ 50 ರೂ.ಗೆ ಏರಿಕೆಯಾಗಿದೆ. ಆಲೂಗೆಡ್ಡೆ ಬೆಲೆ 25 ರಿಂದ 30 ರೂ.ಗೆ ಏರಿಕೆಯಾಗಿದೆ ಎಂದು ಗಾಂಧಿ ಬಜಾರ್ನ ವ್ಯಾಪಾರಿಗಳು ಹೇಳಿದ್ದಾರೆ.
ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯ ಕಾರಣ ನವದೆಹಲಿಯಲ್ಲಿ ತರಕಾರಿ ದರ ಏರಿಕೆಯಾಗಿದೆ. ಓಕ್ಲಾ ಮಾರುಕಟ್ಟೆಯಲ್ಲಿ ಟೊಮೆಟೋ ದರ 10 ರಿಂದ 20 ಇದ್ದದ್ದು ಈಗ 30 ರಿಂದ 40 ರೂ.ಗೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿಯೂ ಬೆಳೆಗಳಿಗೆ ಹಾನಿಯಾಗಿದೆ.
ದಸರಾ ಸಂದರ್ಭದಲ್ಲಿ ಅನೇಕ ಕಾರ್ಯಕ್ರಮಗಳು ನಡೆಯುತ್ತಿವೆ. ಆದರೆ ತರಕಾರಿಗಳ ಬೆಲೆ ಏರಿಕೆಯಿಂದಾಗಿ ಹೆಚ್ಚು ದರ ನೀಡಿ ಖರೀದಿ ಮಾಡುವುದು ಅನಿವಾರ್ಯವಾಗಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಕಂಗಾಲಾಗಿರುವ ಜನರಿಗೆ ತರಕಾರಿ ಬೆಲೆ ಏರಿಕೆ ಹೊಸ ಸಂಕಷ್ಟ ತಂದಿದೆ.
ಅರಬ್ಬಿ ಸಮುದ್ರದ ಪೂರ್ವ ಮಧ್ಯಭಾಗ ಮತ್ತು ಉತ್ತರ ಅಂಡಮಾನ್ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳು ಸೇರಿದಂತೆ ರಾಜ್ಯದ 23 ಜಿಲ್ಲೆಗಳಲ್ಲಿ ಅಕ್ಟೋಬರ್ 12 ಮತ್ತು 13ರಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 16ರ ತನಕ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ಕೊಡಲಾಗಿದೆ. ಸೋಮವಾರ ರಾತ್ರಿ ಮತ್ತು ಮಂಗಳವಾರ ಮಧ್ಯಾಹ್ನ ಬೆಂಗಳೂರು ನಗರದಲ್ಲಿ ಭಾರೀ ಮಳೆಯಾಗಿದೆ.
ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ 14.66 ಮಿ. ಮೀ. ಮಳೆಯಾಗಿದೆ.
ಮಡಿಕೇರಿ ತಾಲ್ಲೂಕಿನಲ್ಲಿ 25.78 ಮಿ. ಮೀ., ವಿರಾಜಪೇಟೆ ತಾಲ್ಲೂಕಿನಲ್ಲಿ 11.18 ಮಿ. ಮೀ. ಸೋಮವಾರಪೇಟೆ ತಾಲ್ಲೂಕಿನಲ್ಲಿ 7.03 ಮಿ. ಮೀ ಮಳೆಯಾಗಿದೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.7 ಅಡಿಗಳು. ಒಳಹರಿವು 1478 ಕ್ಯುಸೆಕ್ ಆಗಿದೆ.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications