Breaking: ಕರ್ನಾಟಕದ ದಕ್ಷಿಣ ಒಳನಾಡಿಗೆ ಮಳೆ ಇಳಿಕೆ, ಬೇರೆಡೆ ಹೆಚ್ಚು
ಬೆಂಗಳೂರು ಸೆಪ್ಟಂಬರ್ 08: ಕೆಲವು ದಿನಗಳಿಂದ ಅಬ್ಬರದ ಮಳೆ ಕಂಡಿದ್ದ ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಈ ಭಾಗದಲ್ಲಿ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಸಾಧಾರಣದಿಂದ ಭಾರಿ ಮಳೆ ಆಗಿ ನಂತರ ಮಳೆ ಕಡಿಮೆ ಆಗುವ ಸಾಧ್ಯತೆ ದಟ್ಟವಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ.
ಒಟ್ಟು 16 ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಎರಡು ವಾರದಿಂದ ನಿರಂತರವಾಗಿ ಗುಡುಗ ಸಹಿತಿ ಅತ್ಯಧಿಕ ಭಾರಿ ಮಳೆ ಸುರಿದಿತ್ತು. ಇದರಿಂದ ಕೆರೆ, ಕಟ್ಟೆಗಳ ಕೋಡಿ ಒಡೆದು ಸಾಕಷ್ಟು ಹಾನಿ ಸಂಭವಿಸಿದ್ದು, ಇನ್ನು ಸಹಜ ಸ್ಥಿತಿಗೆ ಬಂದಿಲ್ಲ. ಈ ಮಧ್ಯೆ ಭಾರತೀಯ ಹವಾಮಾನ ಇಲಾಖೆ ಈ ಭಾಗದ ಜಿಲ್ಲೆಗಳ ಜನರಿಗೆ ಸಿಹಿ ಸುದ್ದಿ ನೀಡಿದೆ.
ಗುರುವಾರದ ಮುನ್ಸೂಚನೆ ವರದಿ ಪ್ರಕಾರ ದಕ್ಷಿಣ ಒಳನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಶಿವಮೊಗ್ಗ, ತುಮಕೂರು, ಬಳ್ಳಾರಿಯ ಒಂದೆರಡು ಕಡೆಗಳಲ್ಲಿ ಮಾತ್ರ ಸೆ.11ರವರೆಗೆ ಸಾಧಾರಣದಿಂದ ಭಾರಿ ಮಳೆ ಆಗಲಿದೆ. ಇಷ್ಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದೇ ಭಾಗದ ಉಳಿದೆಡೆ ತುಂತುರು ಮಳೆ ಆಗಬಹುದು ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಕರಾವಳಿಗೆ, ಉ.ಒಳನಾಡಿಗೆ ಭಾರಿ ಮಳೆ
ಕರ್ನಾಟಕದ ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗುವಂತೆ ಕಾಣುತ್ತಿಲ್ಲ. ಈ ಭಾಗದ ಜಿಲ್ಲೆಗಳಲ್ಲಿ ಮುಂದಿನ 4-5ದಿನ ಭಾರಿಯಿಂದ ಅತಿ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಗದಗ ಹಾವೇರಿಗೆ ಸೆ.10ರಂದು ಶನಿವಾರ ಒಂದು ದಿನ ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಉಳಿದ ದಿನಗಳಲ್ಲಿ ಈ ಜಿಲ್ಲೆಗಳು ಸೇರಿದಂತೆ ಬೀದರ್, ಕಲಬುರಗಿ, ಕೊಪ್ಪಳ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ದಿನಬಿಟ್ಟು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ವರದಿ ತಿಳಿಸಿದೆ.
ಎರಡು ವಾರದಿಂದ ನಿರಂತರವಾಗಿ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳು ನಿರಂತರವಾಗಿ ಆರೆಂಜ್ ಅಲರ್ಟ್ ಮತ್ತು ರೆಡ್ ಅಲರ್ಟ್ ಪಡೆದಿದ್ದವು. ಇದೀಗ ಈ ಭಾಗದ ಪ್ರದೇಶಗಳು ಸಹಜ ಸ್ಥಿತಿಯತ್ತ ಮರಳುತ್ತಿದೆ. ಇಲ್ಲಿನ ಜನರು ನಿಟ್ಟುಸಿರುವ ಬಿಟ್ಟು ಯಥಾ ಸ್ಥಿತಿಯ ಬದುಕು ಕಟ್ಟಿಕೊಳ್ಳಲು ಪರಿತಪಿಸುತ್ತಿದ್ದಾರೆ.
ಕರ್ನಾಟಕ ಕರಾವಳಿ ತೀರದಲ್ಲಿ ಬೀರುಗಾಳಿಯ ವೇಗವು ಪ್ರತಿ ಘಂಟೆಗೆ ಅಂದಾಜು 45ರಿಂದ 55ರವರೆಗೆ ಇರಲಿದೆ. ಕೆಲವೊಮ್ಮೆ ಇಲ್ಲಿ ಗಾಳಿಯ ವೇಗ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications