Karnataka Rain Report: ಕರ್ನಾಟಕದಲ್ಲಿ ಶೇ 23 ರಷ್ಟು ಮಳೆ ಕೊರತೆ- ಯಾವ ಜಿಲ್ಲೆಗಳಲ್ಲಿ ಎಷ್ಟು ತಿಳಿಯಿರಿ
ಬೆಂಗಳೂರು, ಜುಲೈ 20: ಕರ್ನಾಟಕದಲ್ಲಿ ಜೂನ್ 1 ರಿಂದ ಜುಲೈ 19 ರ ವರೆಗೆ 27.3 ಸೆಂ.ಮೀ ಮಳೆಯಾಗಿದೆ. ಸಾಮಾನ್ಯವಾಗಿ 35.35 ಸೆಂ.ಮೀ ಮಳೆಯಾಗುತ್ತಿತ್ತು. ಅಂಕಿಅಂಶಗಳ ಪ್ರಕಾರ ನೋಡುವುದಾದರೆ, ಕರ್ನಾಟಕವು ಈ ಬಾರಿ ಶೇ 23 ನಷ್ಟು ಮಳೆ ಕೊರತೆಯನ್ನು ಎದುರಿಸುತ್ತಿದೆ ಎಂದು ಹವಾಮಾನ ಇಲಾಖೆ ದೃಢಪಡಿಸಿದೆ.
ಹವಾಮಾನ ಇಲಾಖೆ ಪ್ರಕಾರ, ಎರಡು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ದಾಖಲಾಗಿದೆ. ಅವುಗಳೆಂದರೆ, ಚಿತ್ರದುರ್ಗ ಮತ್ತು ವಿಜಯನಗರ. ಆದರೆ, ಕೊಡಗಿನಲ್ಲಿ ಅತಿ ಹೆಚ್ಚು ಮಳೆ ಕೊರತೆ ವರದಿಯಾಗಿದೆ. ಆ ನಂತರದ ಸ್ಥಾನದಲ್ಲಿ ಹಾಸನ, ರಾಮನಗರ ಮತ್ತು ಶಿವಮೊಗ್ಗ ಮತ್ತು ಬಾಗಲಕೋಟೆ ಜಿಲ್ಲೆಗಳಿವೆ. ಇದೇ ಅವಧಿಯಲ್ಲಿ ಬೆಂಗಳೂರು ಗ್ರಾಮಾಂತರದಲ್ಲಿ ಶೇ 7 ಮತ್ತು ಬೆಂಗಳೂರು ನಗರದಲ್ಲಿ ಶೇ 17 ಅಧಿಕ ಮಳೆ ದಾಖಲಾಗಿದೆ.

ಕೆಲವು ಪ್ರದೇಶಗಳಲ್ಲಿ ಮಳೆಯ ಕೊರತೆ ಹೆಚ್ಚು ಕಾಡುತ್ತಿದೆ. ರಾಜ್ಯ ಸರ್ಕಾರ ಮತ್ತು ಖಾಸಗಿ ಏಜೆನ್ಸಿ ಮೋಡ ಬಿತ್ತನೆ ಕೈಗೊಳ್ಳಲು ಹವಾಮಾನ ಇಲಾಕೆಯನ್ನು ಸಂಪರ್ಕಿಸಿವೆ ಎಂದು ಹೇಳಲಾಗುತ್ತಿದೆ.
'ಅವರು ( ರಾಜ್ಯ ಸರ್ಕಾರ ) ನಮ್ಮಿಂದ ವರದಿ ಕೇಳಿದರು. ಆದರೆ, ನಾವು ಸಾಮಾನ್ಯವಾಗಿ ಮೋಡ ಬಿತ್ತನೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ. ಈ ಕಾರಣ, ಮೋಡ ಬಿತ್ತನೆ ವಿಚಾರವಾಗಿ ಪುಣೆಯ ಖಾಸಗಿ ಏಜೆನ್ಸಿಯೊಂದಕ್ಕೆ ರೆಫರ್ ಮಾಡಿದ್ದೇವೆ. ಹಾಸನ ಮತ್ತು ರಾಣೆಬೆನ್ನೂರಿನಲ್ಲಿ ಮೋಡ ಬಿತ್ತನೆ ಕೈಗೊಳ್ಳಲು ಸರ್ಕಾರ ಬಯಸಿದೆ. ಈ ಎರಡು ಕ್ಷೇತ್ರಗಳನ್ನೇ ಅವರು ಏಕೆ ಆರಿಸಿಕೊಂಡಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ' ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಕಳೆದ ವರ್ಷ ಈ ಸಮಯದಲ್ಲಿ ಕಾವೇರಿ ಜಲಾನಯನ ಪ್ರದೇಶಗಳು ಮತ್ತು ಘಟ್ಟ ಪ್ರದೇಶಗಳು ಅತಿ ಹೆಚ್ಚು ಮಳೆ ಮತ್ತು ಪ್ರವಾಹವನ್ನು ಕಂಡಿದ್ದವು ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

ದಕ್ಷಿಣ ಒಳನಾಡು ಕರ್ನಾಟಕ, ಬೀದರ್, ಬೆಳಗಾವಿ, ಕೊಪ್ಪಳ, ಕಲಬುರಗಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ಭಾರತೀಯ ಹವಾಮಾನ ಇಲಾಖೆ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಕರಾವಳಿ ಜಿಲ್ಲೆಗಳಲ್ಲಿ ಸೋಮವಾರ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ಐದು ದಿನಗಳಲ್ಲಿ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆಯಾಗಿದ್ದು, ಸಿದ್ದಾಪುರ ತಾಲೂಕಿನ ನಿಲ್ಕುಂದ, ಸೂಪಾ ತಾಲೂಕಿನ ಕ್ಯಾಸಲ್ರಾಕ್ ಮತ್ತು ಸಿದ್ದಾಪುರ ತಾಲೂಕಿನ ಕೋಡ್ಕಣಿಯಲ್ಲಿ ಕ್ರಮವಾಗಿ 87, 81 ಮತ್ತು 77.5 ಮಿಮೀ ಮಳೆಯಾಗಿದೆ ಎಂದು ಕೆಎಸ್ಎನ್ಡಿಎಂಸಿ ತಿಳಿಸಿದೆ.

ಕುಡಿಯುವ ನೀರಿನ ಕೊರತೆ ನೀಗಿಸಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರತಿ ಕ್ಷೇತ್ರಕ್ಕೆ ₹1 ಕೋಟಿ ಅನುದಾನ ನೀಡಬೇಕೆಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ರಾಜ್ಯದ ಉತ್ತರ ಭಾಗಗಳಲ್ಲಿ ಮುಂಗಾರು ಹಂಗಾಮು ಇನ್ನೂ ಪ್ರಾರಂಭವಾಗದ ಕಾರಣ ಹಲವಾರು ರೈತರು ಬಿತ್ತನೆಯನ್ನು ಕಡಿಮೆ ಮಾಡಿದ್ದಾರೆ ಎಂದು ವರದಿಯಾಗಿದೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು












Click it and Unblock the Notifications