ಹಲವು ಜಿಲ್ಲೆಗಳಲ್ಲಿ ಮಳೆ, ಸಿಡಿಲು ಬಡಿದು ಇಬ್ಬರು ಅಸ್ವಸ್ಥ
ಬೆಂಗಳೂರು, ನವೆಂಬರ್ 20 : ಕರಾವಳಿ, ಉತ್ತರ ಕನ್ನಡ, ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾನುವಾರ ಮಳೆಯಾಗಿದೆ. ಉತ್ತರ ಕನ್ನಡದಲ್ಲಿ ಸಿಡಿಲು ಬಡಿದು ಇಬ್ಬರು ಅಸ್ವಸ್ಥಗೊಂಡಿದ್ದಾರೆ.
ಹಿಂಗಾರು ಮಳೆಯ ಭಾಗವಾಗಿ ಕರಾವಳಿ ಭಾಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ನಗರದಲ್ಲಿಯೂ ಮೋಡ ಕವಿದ ವಾತಾವರಣವಿದ್ದು, ಸುಡುವ ಬಿಸಿಲಿಲ್ಲ.
ಕೊಚ್ಚಿಹೋಗುವಷ್ಟು ಮಳೆಯಾದರೂ ಯಾದಗಿರಿಯ ಈ ಪ್ರದೇಶದಲ್ಲಿ ಕುಡಿವ ನೀರಿಲ್ಲ!
ಮುಂದಿನ ಎರಡು-ಮೂರು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. 'ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣ ವಾಗುತ್ತಿದೆ. ಆದ್ದರಿಂದ, ಚಳಿಯ ಅನುಭವವಾಗುತ್ತಿಲ್ಲ' ಎಂದು ಹವಾಮಾನ ಇಲಾಖೆ ಹಂಗಾಮಿ ನಿರ್ದೇಶಕ ಸುಂದರ್ ಎಂ.ಮೇತ್ರಿ ಹೇಳಿದ್ದಾರೆ.
ದುರ್ಗದ ಹೊಂಡ, ಕೆರೆ ಭರ್ತಿ, ಪ್ರವಾಸಿಗರೇ ಬನ್ನಿ ಒಂದ್ಸರ್ತಿ!
ಸಿಡಿಲು ಬಡಿದು ಇಬ್ಬರು ಅಸ್ವಸ್ಥ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅಳ್ಳಂಕಿ ಗ್ರಾಮದಲ್ಲಿ ಸಿಡಿಲು ಬಡಿದು ನರಸಿಂಹ ಮಾಳು ನಾಯ್ಕ, ರಾಜೇಶ್ವರಿ ಎಂಬುವವರು ಅಸ್ವಸ್ಥಗೊಂಡಿದ್ದಾರೆ.
ಮಳೆಯಿಲ್ಲದೆ ಬರಡಾಗಿದ್ದ ಮಂಡ್ಯದ ನದಿಗಳಿಗೆ ಜೀವಕಳೆ
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ, ಶಿರಸಿ, ಮುಂಡಗೋಡದಲ್ಲಿ ಭಾನುವಾರ ಮಳೆಯಾಗಿದೆ. ಧಾರವಾಡ ನಗರ, ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿಯೂ ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ನೆರಿಯದಲ್ಲಿ 39 ಮಿ.ಮೀ., ಪಣಂಬೂರಿನಲ್ಲಿ 38.5 ಮಿ.ಮೀ.ಮಳೆಯಾಗಿದೆ.