ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 31ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

|
Google Oneindia Kannada News

ಬೆಂಗಳೂರು, ಮೇ 27: ಮೇ 31ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೀದರ್, ಕಲಬುರಗಿ,ಚಿತ್ರದುರ್ಗ, ದಾವಣಗೆರೆ, ಬಳ್ಳಾರಿಯಲ್ಲಿ ಒಣಹವೆ ಮುಂದುವರೆಯಲಿದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ರಾಜ್ಯದ ಕರಾವಳಿ ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆರಾಜ್ಯದ ಕರಾವಳಿ ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ರಾಯಚೂರಿನಲ್ಲಿ 38.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

 ಬೆಂಗಳೂರು ಹವಾಮಾನ ವರದಿ

ಬೆಂಗಳೂರು ಹವಾಮಾನ ವರದಿ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಅಲ್ಲಲ್ಲಿ ಮಳೆ ಬರುವ ಸಾಧ್ಯತೆ ಹೆಚ್ಚಿದೆ, 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕೆಐಎಎಲ್‌ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ಹಲವೆಡೆ ಮಳೆ

ಹಲವೆಡೆ ಮಳೆ

ಮಂಗಳೂರು, ಮಂಡ್ಯ, ಕಾರ್ಕಳ, ಬೇಲೂರು, ಗುಬ್ಬಿ, ರಾಮನಗರ, ಮಾಣಿ, ಸುಳ್ಯ, ಸುಬ್ರಹ್ಮಣ್ಯ, ವಿಟ್ಲ, ಮೂಡುಬಿದಿರೆ, ಅಥಣಿ, ಮದ್ದೂರು, ಹುಂಚದಕಟ್ಟೆ, ಭದ್ರಾವತಿ, ಭಾಗಮಂಡಲ, ಕುಷ್ಟಗಿ, ಶ್ರವಣಬೆಳಗೊಳ, ಧರ್ಮಸ್ಥಳ, ಚಿಂತಾಮಣಿ, ಹೊಸಪೇಟೆ, ಗದಗ, ಕುಣಿಗಲ್,ಮಾಗಡಿ, ಪಾಂಡವಪುರ, ಮಲವಳ್ಳಿ, ಬಂಡೀಪುರ, ಆಗುಂಬೆ, ಕೊಟ್ಟಿಗೆಹಾರದಲ್ಲಿ ಮಳೆಯಾಗಿದೆ.

 ಒಡಿಶಾದಲ್ಲಿ ಭಾರಿ ಮಳೆ

ಒಡಿಶಾದಲ್ಲಿ ಭಾರಿ ಮಳೆ

ಯಾಸ್ ಚಂಡಮಾರುತದ ಪರಿಣಾಮ ಒಡಿಶಾ ಹಾಗೂ ಪಶ್ಚಿಮ ಬಂಗಾಳದ ಕೆಲ ಭಾಗಗಳಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರಿ ಮಳೆಯಾಗಿದೆ. ಭದ್ರಕ ಚಾಂದ್‌ಬಾಲಿಯಲ್ಲಿ 288.3 ಮಿ.ಮೀ ಮಳೆಯಾಗಿದೆ.ರಾಜ್ಯದ ಒಟ್ಟು 314ರಲ್ಲಿ 36 ತಾಲೂಕುಗಳಲ್ಲಿ ಕನಿಷ್ಠ 110 ಮಿ.ಮೀನಿಂದ ಗರಿಷ್ಠ 304 ಮಿ.ಮೀವರೆಗೆ ಮಳೆಯಾಗಿದೆ. 37 ತಾಲೂಕುಗಳಲ್ಲಿ 50 ರಿಂದ 100 ಮಿ.ಮೀನಷ್ಟು ಮಳೆಯಾಗಿದೆ ಎಂದು ಒಡಿಶಾದ ವಿಶೇಷ ಪರಿಹಾರ ಆಯುಕ್ತ ಪಿಕೆ ಜೇನ ತಿಳಿಸಿದ್ದಾರೆ.ಮುಂದಿನ 48 ಗಂಟೆಗಳಲ್ಲಿ 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

 ರಾಜ್ಯದ ಎಲ್ಲೆಲ್ಲಿ ಮಳೆಯ ಮುನ್ಸೂಚನೆ

ರಾಜ್ಯದ ಎಲ್ಲೆಲ್ಲಿ ಮಳೆಯ ಮುನ್ಸೂಚನೆ

ಬೀದರ್, ಕಲಬುರಗಿ,ಚಿತ್ರದುರ್ಗ, ದಾವಣಗೆರೆ, ಬಳ್ಳಾರಿಯಲ್ಲಿ ಒಣಹವೆ ಮುಂದುವರೆಯಲಿದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

Recommended Video

Yaas Cyclone: ಈ ಚಂಡಮಾರುತದಿಂದ ರಾಜ್ಯದಲ್ಲಿ ಮಳೆ ಆಗುವ ಸಾಧ್ಯತೆ!! | Oneindia Kannada

English summary
Rain/thundershowers very likely to occur at many places over Coastal Karnataka at a few places over South Interior Karnataka and at isolated places over North Interior Karnataka Till May 31.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X