ರಾಜ್ಯಾದ್ಯಂತ ಮಳೆ; ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ಕೊಟ್ಟ ಸಿಎಂ
ಬೆಂಗಳೂರು, ಆಗಸ್ಟ್ 06 : ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹಲವು ಪ್ರದೇಶಗಳಲ್ಲಿ ಭೂ ಕುಸಿತವಾಗಿದೆ. ಜನರು ಆತಂಕಗೊಂಡಿದ್ದಾರೆ.
Recommended Video
ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಸ್ಪತ್ರೆಯಲ್ಲಿದ್ದಾರೆ. ಕೋವಿಡ್ ಸೋಂಕಿತರಾಗಿರುವ ಮುಖ್ಯಮಂತ್ರಿಗಳು ಜಿಲ್ಲೆಗಳ ಪರಿಸ್ಥಿತಿಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.
ಆಸ್ಪತ್ರೆಯಿಂದಲೇ ಅಧಿಕಾರಿಗಳಿಗೆ ಪರಿಸ್ಥಿತಿಯನ್ನು ನಿಭಾಯಿಸಲು ಬೇಕಾದ ಸಲಹೆಗಳನ್ನು ನೀಡುತ್ತಿದ್ದಾರೆ. ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸೂಚನೆ ಕೊಟ್ಟಿದ್ದಾರೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಈ ಕುರಿತು ಗುರುವಾರಟ ಟ್ವೀಟ್ ಮಾಡಿದ್ದಾರೆ. ಕ್ಷೇತ್ರ ಬಿಟ್ಟು ಹೋಗದೆ, ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಬೇಕು ಎಂದು ತಿಳಿಸಿದ್ದಾರೆ.
ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಮುಖ್ಯಮಂತ್ರಿ ಶ್ರೀ @BSYBJP ರವರು ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಇಂದು ಸೂಚನೆ ನೀಡಿದ್ದಾರೆ. ಕ್ಷೇತ್ರ ಬಿಟ್ಟು ಹೋಗದೆ, ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಬೇಕು ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. (1/2)
— CM of Karnataka (@CMofKarnataka) August 6, 2020
ಪರಿಹಾರ ವಿತರಣೆ ಸೇರಿದಂತೆ ಇತರೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿರುವ ಅವರು, ಈಗಾಗಲೇ 50 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಅಗತ್ಯವಿದ್ದರೆ ಇನ್ನಷ್ಟು ಹಣ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಅತಿ ತುರ್ತು ಕೆಲಸಗಳಿಗೆ ಉಸ್ತುವಾರಿ ಸಚಿವರುಗಳೇ ತೀರ್ಮಾನ ತೆಗೆದುಕೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.












Click it and Unblock the Notifications