ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏಪ್ರಿಲ್ 14ರವರೆಗೂ ರಾಜ್ಯದ ಹಲವೆಡೆ ಮಳೆ; ಕರಾವಳಿಯಲ್ಲಿ ಜೋರು ಮಳೆ ಸೂಚನೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 12: ಏಪ್ರಿಲ್ 14ರವರೆಗೂ ದಕ್ಷಿಣ ಭಾರತದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರ್ನಾಟಕದಲ್ಲಿಯೂ ಸೋಮವಾರದಿಂದ ಮೂರು ದಿನಗಳ ಕಾಲ ಮಳೆಯಾಗುವುದಾಗಿ ತಿಳಿಸಿದೆ.

ನೈಋತ್ಯ ಮಧ್ಯಪ್ರದೇಶದಿಂದ ಚಂಡಮಾರುತ ತಮಿಳುನಾಡಿನ ಕನ್ಯಾಕುಮಾರಿ ಹಾದುಹೋಗುವ ಪರಿಣಾಮ ದಕ್ಷಿಣ ಭಾರತದ ಕೆಲವೆಡೆ ಮಳೆಯಾಗಲಿದೆ. ಬುಧವಾರದವರೆಗೂ ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಸೂಚನೆ ನೀಡಿದೆ. ಮುಂದೆ ಓದಿ...

ಏಪ್ರಿಲ್ 11ರಿಂದ ರಾಜ್ಯದಲ್ಲಿ ಜೋರು ಮಳೆ, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಏಪ್ರಿಲ್ 11ರಿಂದ ರಾಜ್ಯದಲ್ಲಿ ಜೋರು ಮಳೆ, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

 ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಏಪ್ರಿಲ್ 13 ಹಾಗೂ 14ರಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವುದಾಗಿ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುವುದಾಗಿ ತಿಳಿದುಬಂದಿದೆ. ಈ ಎರಡು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಅಬ್ಬರದ ಮಳೆಯಾಗಿದ್ದು, ಕೆಲವೆಡೆ ಹಾನಿ ಸಂಭವಿಸಿದೆ.

 ರಾಜ್ಯದ ಈ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

ರಾಜ್ಯದ ಈ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

ಏಪ್ರಿಲ್ 14ರವರೆಗೂ ಚಿಕ್ಕಮಗಳೂರು, ಕೊಡಗು, ಮಂಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವುದೆಂದು ತಿಳಿದುಬಂದಿದೆ. ಈಗಾಗಲೇ ದಕ್ಷಿಣ ಕನ್ನಡದಲ್ಲಿ ಮಳೆಯಾಗಿದೆ. ಹಾಸನ, ವಿಜಯಪುರ, ಕಲಬುರಗಿ, ಧಾರವಾಡ, ಬೆಳಗಾವಿ, ಮೈಸೂರು ಜಿಲ್ಲೆಗಳಲ್ಲಿಯೂ ಚದುರಿದ ಮಳೆಯಾಗುವುದಾಗಿ ತಿಳಿದುಬಂದಿದೆ.

 ಕೇರಳ, ತಮಿಳುನಾಡಿನಲ್ಲಿ ಗುಡುಗು ಸಹಿತ ಮಳೆ

ಕೇರಳ, ತಮಿಳುನಾಡಿನಲ್ಲಿ ಗುಡುಗು ಸಹಿತ ಮಳೆ

ಏಪ್ರಿಲ್ 12ರಿಂದ ಮುಂದಿನ ಐದು ದಿನಗಳ ಕಾಲ ಕೇರಲ ಹಾಗೂ ತಮಿಳುನಾಡಿನಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಇದರ ಪ್ರಭಾವ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕಾಣಿಸಿಕೊಳ್ಳಲಿರುವುದಾಗಿ ತಿಳಿದುಬಂದಿದೆ. ಸೋಮವಾರ ಅರುಣಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶದಲ್ಲಿ ಮಳೆಯಾಗಲಿರುವುದಾಗಿ ಸೂಚನೆ ನೀಡಿದೆ.

Recommended Video

Maharashtra LockDown : ದಿನೇ ದಿನೇ corona ಕಾಟ ಜಾಸ್ತಿ ಆಗ್ತಿದೆ! | Oneindia Kannada
 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆ ದಾಖಲು

ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಕಳೆದ 24 ಗಂಟೆಗಳ ಕರ್ನಾಟಕದ ಮಳೆ ನಕ್ಷೆ ನೀಡಿದ್ದು, ಅತ್ಯಧಿಕ 80ಮಿ.ಮೀ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಜ್ಪೆ ಎಂಬಲ್ಲಿ ದಾಖಲಾಗಿದೆ.

English summary
IMD issued rain alert next five days in south india. Karnataka karavali district to get rain till april 14,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X