ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಡಿಸೆಂಬರ್ 31ರಂದು ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ, ಉಳಿದೆಡೆ ಒಣಹವೆ
ಬೆಂಗಳೂರು, ಡಿಸೆಂಬರ್ 27: ಕರ್ನಾಟಕದ ಕೆಲವೆಡೆ ಡಿಸೆಂಬರ್ 31ರಂದು ಮಳೆಯಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರಿನಲ್ಲಿ ಸಾಧಾರಣ ಮಳೆಯಾಗಲಿದೆ.
ರಾಜ್ಯದ ಉತ್ತರ ಒಳನಾಡಿಗೆ ಮಳೆಯ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ
2.5 ಮಿ.ಮೀನಿಂದ 64.4 ಮಿ.ಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಆಕಾಶ ಶುಭ್ರವಾಗಿದೆ. 29 ಡಿಗ್ರಿ ಗರಿಷ್ಠ ಉಷ್ಣಾಂಶ, 15 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದೆಲ್ಲೆಡೆ ಉಣಹವೆ ಮುಂದುವರೆಯಲಿದೆ. ಬೀದರ್ನಲ್ಲಿ 9.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಜಮ್ಮು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಲ್ಟಿಸ್ತಾನ, ಮುಜಾಫರಾಬಾದ್ನಲ್ಲಿ ಮಳೆಯಾಗಲಿದೆ. ಉತ್ತರಾಖಂಡ, ಪಂಜಾಬ್, ಹರ್ಯಾಣ, ಚಂಡೀಗಢದಲ್ಲಿ ಡಿಸೆಂಬರ್ 27-28ರಂದು ಹಿಮಪಾತದ ಜತೆಗೆ ಮಳೆಯಾಗಲಿದೆ ಎಂದು ಹೇಳಲಾಗಿದೆ.
Recommended Video
ಚಾಮರಾಜನಗರ:
ವಕ್ಫ್
ಮಂಡಳಿಗೆ
ಸೇರಬೇಕಾದ
ಆಸ್ತಿಗಳ
ಪತ್ತೆ
ಹಾಗೂ
ತೆರವು
ಕಾರ್ಯ
ಆರಂಭಿಸಿದ
ಅಧಿಕಾರಿಗಳು
|
Oneindia
Comments
English summary
The Meteorological department has forecast that some parts of Karnataka will experience rainfall on December 31.