ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಜೂನ್ 2ರವರೆಗೂ ಅಧಿಕ ಮಳೆಯ ಮುನ್ಸೂಚನೆ

|
Google Oneindia Kannada News

ಬೆಂಗಳೂರು, ಮೇ 29: ರಾಜ್ಯದಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 29 ಹಾಗೂ 30ರಂದು ಹಲವೆಡೆ ಮೋಡಕವಿದ ವಾತಾವರಣವಿರಲಿದ್ದು, ಒಂಹವೆ ಮುಂದುವರೆಯಲಿದೆ, ಮೇ 31 ರಿಂದ ಮೂರುದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಈ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ನಿರಂತರವಾಗಿ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಒಣಹವೆ ಮುಂದುವರೆಯಲಿದೆ.

ಯಾಸ್ ಚಂಡ ಮಾರುತದಿಂದ ಪಶ್ಚಿಮ ಬಂಗಾಳ ಮತ್ತು ಒಡಿಶಾ ಕರಾವಳಿ ಪ್ರದೇಶದಲ್ಲಿ ಮಾನ್ಸೂನ್ ಗಾಳಿಯ ತೀವ್ರತೆ ಹೆಚ್ಚಾಗಿದೆ. ಮುಂದಿನ ವಾರ ಕೇರಳದಲ್ಲಿ ಮಾನ್ಸೂನ್ ಪ್ರವೇಶಿಸಲಿದ್ದು, ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮೇ 30ರಿಂದ ಎರಡು ದಿನ ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆಮೇ 30ರಿಂದ ಎರಡು ದಿನ ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ

ಗುರುವಾರ ಕೇರಳದ ಕಾಯಂಕುಳಂ ಮತ್ತು ಅಲಪ್ಪುಳದಲ್ಲಿ 9 ಸೆಂಟಿ ಮೀಟರ್ ಮಳೆಯಾಗಿದೆ. ನೆಡುಮಂಗದ್ ಮತ್ತು ಥಿರುವಿಲ್ಲಾದಲ್ಲಿ 8 ಸೆಂ.ಮೀ ಮಳೆ, ಪೀರ್ಮಡೆ ಮತ್ತು ಕುಮಾರಕಮ್ ಪ್ರದೇಶದಲ್ಲಿ 8 ಸೆಂ.ಮೀ ಮಳೆ ಸುರಿದಿದೆ. ಒಡಿಶಾದ ಮಾಯೂರ್ ಬಂಜ್ 28 ಸೆಂ.ಮೀ, ಕಿಯೊಂಜಿಘರ್ 27 ಸೆಂ.ಮೀ, ಸುಂದರ್ ಘರ್ 21 ಸೆಂ.ಮೀ, ಮಳೆಯಾಗಿದೆ. ಜಾರ್ಖಂಡ ಪಶ್ಚಿಮ ಸಿಂಘುಮ್ 21 ಸೆಂ.ಮೀ ಮತ್ತು ರಾಂಚಿಯಲ್ಲಿ 18 ಸೆಂಟಿ ಮೀಟರ್ ಮಳೆ ಸುರಿದಿದೆ.

ಮೂರು ದಿನ ಅಧಿಕ ಮಳೆ

ಮೂರು ದಿನ ಅಧಿಕ ಮಳೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಕೇರಳಕ್ಕೆ ಮುಂಗಾರು ಪ್ರವೇಶ

ಕೇರಳಕ್ಕೆ ಮುಂಗಾರು ಪ್ರವೇಶ

ನೈಋತ್ಯ ಮಾನ್ಸೂನ್ ಮಾರುತಗಳು ನೈಋತ್ಯ ಮತ್ತು ಪೂರ್ವಕೇಂದ್ರದ ಬಂಗಾಳ ಕೊಲ್ಲಿಯತ್ತ ಸಾಗಿದ್ದು, ಮೇ 31ರ ಹೊತ್ತಿಗೆ ಕೇರಳ ಪ್ರವೇಶ ಮಾಡಲಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯಕ್ಕೆ ಮುಂಗಾರು ಪ್ರವೇಶ

ರಾಜ್ಯಕ್ಕೆ ಮುಂಗಾರು ಪ್ರವೇಶ

ಮುಂಗಾರು ಮಳೆ ಸುರಿಸುವ ನೈಋುತ್ಯ ಮಾನ್ಸೂನ್ ಮಾರುತಗಳು ಮೇ 31ರಂದು ಕೇರಳ ಪ್ರವೇಶಿಸಲಿದ್ದು, ಜೂನ್ ಮೊದಲ ವಾರದ ಕೊನೆಗೆ ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗುವ ಸಾಧ್ಯತೆಯಿದೆ. ಇತ್ತೀಚೆಗೆ ಸೃಷ್ಟಿಯಾದ 2 ಚಂಡಮಾರುತಗಳೇ ಮಾನ್ಸೂನ್ ಮಾರುತಗಳ ಈ ಚಲನೆಗೆ ಕಾರಣ ಎನ್ನಲಾಗಿದೆ. ಕಳೆದ ವಾರವಷ್ಟೇ ಟೌಕ್ಟೇ ಚಂಡಮಾರುತದಿಂದಾಗಿ ಸಾಕಷ್ಟು ರಾಜ್ಯಗಳು ನಲುಗಿ ಹೋಗಿದ್ದವು. ಇದೀಗ ಅದರ ಬೆನ್ನಲ್ಲೇ ಯಾಸ್ ಚಂಡಮಾರುತ ಕೂಡ ಅಪ್ಪಳಿಸಿದೆ. ಹೀಗಾಗಿ ಮಾನ್ಸೂನ್ ಮಾರುತಗಳ ಚಲನೆಯಲ್ಲಿ ಪರಿಣಾಮ ಬೀರಿದೆ ಎಂದು ಹೇಳಲಾಗಿದೆ.
ಮಾಲ್ಡೀವ್ಸ್-ಕೊಮೊರಿನ್ ಪ್ರದೇಶದ ಕೆಲವು ಭಾಗಗಳಲ್ಲಿ ಮಾನ್ಸೂನ್ ಈಗಾಗಲೇ ಪ್ರವೇಶಿಸಿದೆ. ಪಶ್ಚಿಮ ಬಂಗಾಳದ ನೈಋತ್ಯ ಮತ್ತು ಪೂರ್ವ ಕೇಂದ್ರ, ಆಗ್ನೇಯ ಕೊಲ್ಲಿಯ ಹೆಚ್ಚಿನ ಭಾಗ ಹಾಗೂ ಪಶ್ಚಿಮ ಕೇಂದ್ರ ಕೊಲ್ಲಿಯ ಕೆಲವು ಭಾಗಗಳಿಗೆ ಗುರುವಾರದ ವೇಳೆಗೆ ಮಾನ್ಸೂನ್ ಪ್ರವೇಶಿಸಿದೆ.

Recommended Video

UT Khader Exclusive Interview with lavanya | ಜನ BJP ಅವರಿಗೆ ಬುದ್ಧಿ ಕಲಿಸುತ್ತಾರೆ! | Oneindia Kannada
ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

English summary
Meteorological Department Predicted that Rainfall Will Continue Till June 2 In Karnataka
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X