Raita Sankranti: ಜನವರಿ 16ರಂದು ಹೆಚ್.ಡಿ.ಕುಮಾರಸ್ವಾಮಿ ಅವರಿಂದ ರೈತ ಸಂಕ್ರಾಂತಿ
ಕಲಬುರಗಿ,ಜನವರಿ11: ರೈತರ ಸಮಗ್ರ ಕಲ್ಯಾಣಕ್ಕಾಗಿ ಪಂಚರತ್ನ ಯೋಜನೆಗಳಲ್ಲಿ ರೈತ ಚೈತನ್ಯ ಕಾರ್ಯಕ್ರಮ ರೂಪಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇದೇ ತಿಂಗಳ 16ರಂದು ಕೃಷಿ ಸಮಸ್ಯೆಗಳ ಬಗ್ಗೆ ಅನ್ನದಾತರ ಜತೆ ಮುಕ್ತವಾಗಿ ಚರ್ಚೆ ನಡೆಸಲು ' ರೈತ ಸಂಕ್ರಾಂತಿ ' ಎಂಬ ಅನ್ ಲೈನ್ ಸಂವಾದ ಹಮ್ಮಿಕೊಂಡಿದ್ದಾರೆ.
ಈ ಬಗ್ಗೆ ಕಲಬುರಗಿ ಜಿಲ್ಲೆಯ ಸೇಡಂ ವಿಧಾನಸಭೆ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಸುತ್ತಿರುವ ಅವರು, ಸುಲೇಪೇಟ ಸಮೀಪದ ಜಮೀನೊಂದರ ಪಕ್ಕದ ಕಟ್ಟೆಯ ಮೇಲೆ ಮಾಧ್ಯಮಗಳ ಜತೆ ಮಾತನಾಡುತ್ತಾ ಈ ವಿಷಯವನ್ನು ತಿಳಿಸಿದರು.
ಮಹತ್ವದ ಈ ಸಂವಾದದಲ್ಲಿ ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಭಾಗಿಯಾಗಲಿದ್ದಾರೆ. ಕೃಷಿ ವಲಯದ ಪರಿಪೂರ್ಣ ಪುನಚ್ಚೇತನಕ್ಕೆ ನಮಗೆ ಮಾಜಿ ಪ್ರಧಾನಿ ಅವರ ಮಾರ್ಗದರ್ಶನ ಇರುತ್ತದೆ ಎಂದು ಹೇಳಿದರು.

ಕಳೆದ 40ಕ್ಕೂ ಹೆಚ್ಚು ದಿನಗಳಿಂದ ನಾನು ರಾಜ್ಯದ ಉದ್ದಗಲಕ್ಕೂ ಪಂಚರತ್ನ ರಥಯಾತ್ರೆ ನಡೆಸುತ್ತಿದ್ದೇನೆ. ನಾನು ಮುಖ್ಯಮಂತ್ರಿ ಆಗಿದ್ದಾಗ 2006 ಮತ್ತು 2018ರಲ್ಲಿ ಎರಡು ಬಾರಿ ಸಾಲ ಮನ್ನಾ ಮಾಡಿದರೂ ರೈತರ ಸಮಸ್ಯೆಗಳು ನಿವಾರಣೆ ಆಗಿಲ್ಲ. ಕೆಲ ದಿನಗಳಿಂದ ಈಚೆಗೆ ಮತ್ತೆ ರೈತರು ಜೀವ ಕಳೆದುಕೊಳ್ಳುತ್ತಿದ್ದಾರೆ. ಇದು ನನಗೆ ಅತೀವ ನೋವು ಉಂಟು ಮಾಡಿದೆ ಎಂದರು ಅವರು. ರೈತರು ಶಾಶ್ವತವಾಗಿ ಸಾಲಗಾರರಾಗದಂತೆ ಹಾಗೂ ಅವರಿಗೆ ಆರ್ಥಿಕ ಚೈತನ್ಯ ನೀಡುವ ಉದ್ದೇಶದಿಂದ ರೂಪಿಸಿರುವ ರೈತ ಚೈತನ್ಯ ಕಾರ್ಯಕ್ರಮದ ಬಗ್ಗೆ ಅನ್ನದಾತರಿಗೆ ಮನವರಿಕೆ ಮಾಡಿಕೊಡುವುದು ಹಾಗೂ ಕೃಷಿ ಸಮಸ್ಯೆಗಳ ಬಗ್ಗೆ ಇನ್ನಷ್ಟು ಪರಿಣಾಮಕಾರಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಾನು ರೈತರ ಜತೆ ಸಂವಾದ ನಡೆಸುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.
ಬಿಡದಿಯ ನನ್ನ ತೋಟದಲ್ಲಿ ರೈತ ಸಂಕ್ರಾಂತಿ ಸಂವಾದ ಹಮ್ಮಿಕೊಳ್ಳಲಾಗಿದ್ದು, ಸಂಜೆ 4ರಿಂದ 6 ಗಂಟೆವರೆಗೂ ರೈತರ ಜತೆ ಸಂವಾದ ನಡೆಸುತ್ತೇನೆ. ಸುಮಾರು 50ಕ್ಕೂ ಹೆಚ್ಚು ವಿಧಾನಸಭೆ ಕ್ಷೇತ್ರಗಳ ರೈತರ ಜತೆ ನಾನು ಅನ್ ಲೈನ್ ವೇದಿಕೆ ಮೂಲಕ ನೇರ ಸಂವಾದ ನಡೆಸುತ್ತೇನೆ. ಆದರೆ, ಯಾವುದೇ ಭಾಗದ ರೈತರು ಈ ಸಂವಾದದಲ್ಲಿ ಭಾಗಿಯಾಗಬಹುದು ಹಾಗೂ ಸಮಸ್ಯೆಗಳು, ಪರಿಹಾರಗಳನ್ನು ತಿಳಿಸಬಹುದು ಎಂದರು ಅವರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಶ್ರೀ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಶ್ರೀ ಭೋಜೇಗೌಡ, ಮಾಜಿ ಸದಸ್ಯ ಶ್ರೀ ರಮೇಶ್ ಗೌಡ, ಸೇಡಂ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀ ಬಾಲರಾಜ್ ಗುತ್ತೇದಾರ್, ಜಿಲ್ಲಾಧ್ಯಕ್ಷ ಶ್ರೀ ಸುರೇಶ್ ಮಾಗಾವಂಕರ್ ಇತರರು ಹಾಜರಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications