ಸಂಘ ಪರಿವಾರ Vs ನೆಹರೂ ಬದ್ಧತೆ, ಇಂದಿರಾ ದಿಟ್ಟತನ, ರಾಜೀವ್ ದೂರದೃಷ್ಟಿ
ಬೆಂಗಳೂರು, ಆ 20: ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ದಿವಂಗತ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸ್ ಅವರ ಜನ್ಮದಿನದ ಸ್ಮರಣಾರ್ಥ, ಕೆಪಿಸಿಸಿ ಕಾರ್ಯಕ್ರಮವನ್ನು ನಗರದಲ್ಲಿ ಮಂಗಳವಾರ ಆಯೋಜಿಸಿತ್ತು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಎಚ್ ಕೆ ಪಾಟೀಲ್, ಡಿ ಕೆ ಶಿವಕುಮಾರ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಸಭೆಯಲ್ಲಿ ಮಾತನಾಡುತ್ತಿದ್ದ ದಿನೇಶ್ ಗುಂಡೂರಾವ್, " ಭಾರತ ಸ್ವಾತಂತ್ರ್ಯವಾದ ಸಂದರ್ಭದಲ್ಲಿ ಹಲವರು ಈ ದೇಶ ಒಂದಾಗಿರಲು ಸಾಧ್ಯವಿಲ್ಲ ಎಂದಿದ್ದರು, ಇಂದಿಗೂ ಈ ದೇಶ ಒಗ್ಗಟ್ಟಾಗಿದೆ. ಅದಕ್ಕೆ ಕಾರಣ ಸ್ವಯಂ ಘೋಷಿತ ದೇಶಭಕ್ತರು ಅಥವಾ ಸಂಘ ಪರಿವಾರವಲ್ಲ, ನೆಹರೂ ಅವರ ಬದ್ಧತೆ, ಇಂದಿರಾ ಗಾಂಧಿಯವರ ದಿಟ್ಟತನ, ರಾಜೀವ್ ಗಾಂಧಿಯವರ ದೂರದೃಷ್ಟಿ ಹಾಗೂ ಅವರ ತ್ಯಾಗ ಬಲಿದಾನಗಳು" ಎಂದು ದಿನೇಶ್ ಹೇಳಿದರು.

" ರಾಜೀವ್ ಗಾಂಧಿಯವರು, ಮೌಲ್ಯಾಧಾರಿತ ರಾಜಕಾರಣವನ್ನು ಪ್ರತಿಪಾದಿಸುತ್ತಿದ್ದರು, ದೂರದೃಷ್ಟಿ ಉಳ್ಳ ಮಹಾನ್ ನಾಯಕರಾಗಿದ್ದರು, ಆಧುನಿಕ ಭಾರತ ಅವರ ಕನಸಾಗಿತ್ತು, ಡಿಜಿಟಲ್ ಇಂಡಿಯಾ ನಿರ್ಮಾಣಕ್ಕೆ ಅವರ ಪರಿಶ್ರಮ ಅಪಾರ. ಅವರ ತ್ಯಾಗ, ಬಲಿದಾನ, ದೂರದೃಷ್ಟಿ, ದೇಶಪ್ರೇಮ ನಮ್ಮೆಲ್ಲರಿಗೂ ಸ್ಪೂರ್ತಿ" ಎಂದು ದಿನೇಶ್ ಗುಂಡೂರಾವ್ ಅಭಿಪ್ರಾಯ ಪಟ್ಟರು.
" ರಾಜ್ಯದಲ್ಲಿ ಉಳುವವನೇ ಹೊಲದೊಡೆಯ ಕಾಯ್ದೆಯನ್ನು ಸಮರ್ಥವಾಗಿ ಜಾರಿಗೆ ತಂದು, ವೃದ್ಧಾಪ್ಯ ವೇತನ, ಸ್ಟೈಫೆಂಡರಿ, ಭಾಗ್ಯಜ್ಯೋತಿ, ಉಚಿತ ನಿವೇಶನ ಯೋಜನೆಗಳನ್ನು ಜಾರಿಗೆ ತಂದ, ಸಾಮಾಜಿಕ ನ್ಯಾಯದ ಹರಿಕಾರ ಶ್ರೀ ಡಿ.ದೇವರಾಜ ಅರಸು ಅವರ ಜಯಂತಿಯಂದು ಅವರನ್ನು ಗೌರವ, ಕೃತಜ್ಞತಾ ಪೂರ್ವಕವಾಗಿ ನೆನೆಯುತ್ತೇವೆ " ಎಂದು ದಿನೇಶ್ ಗುಂಡೂರಾವ, ದಿವಂಗತ ಮಾಜಿ ಸಿಎಂ ದೇವರಾಜ ಅರಸ್ ಅವರನ್ನು ನೆನೆದರು.
ದೇವರಾಜ ಅರಸು ಅವರ 104ನೇ ಮತ್ತು ರಾಜೀವ್ ಗಾಂಧಿಯವರ 75ನೇ ಜಯಂತಿ ಕಾರ್ಯಕ್ರಮವನ್ನು ಅಂಬೇಡ್ಕರ್ ಭವನದಲ್ಲಿ ಕೆಪಿಸಿಸಿ ಆಯೋಜಿಸಿತ್ತು.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications