Aero India 2025: ಸಿದ್ದರಾಮಯ್ಯ ಗೈರು: ಬೆಂಗಳೂರಿನಲ್ಲಿ ಏರೋ ಶೋ ಉದ್ಘಾಟಿಸಿದ ರಾಜನಾಥ್ ಸಿಂಗ್
ಬೆಂಗಳೂರು, ಫೆಬ್ರವರಿ 10: ಬೆಂಗಳೂರಿನ ಯಲಹಂಕ ವಾಯುನೆಯಲೆಯಲ್ಲಿ 15ನೇ ಆವೃತ್ತಿಯ ಏರೋ ಇಂಡಿಯಾ ಕಾರ್ಯಕ್ರಮವನ್ನ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಲಿದ್ದಾರೆ. ಆನಾರೋಗ್ಯದ ಕಾರಣದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರೋ ಇಂಡಿಯಾ ಉದ್ಘಾಟನಾ ಕಾರ್ಯಕ್ರಮದಿಂದ ದೂರ ಉಳಿಯಲಿದ್ದಾರೆ. ಸರ್ಕಾರದ ಪ್ರತಿನಿಧಿಯಾಗಿ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭಾಗಿಯಾಗಿದ್ದಾರೆ.
ಬೆಂಗಳೂರು ಏರ್ ಶೋ 2025 ರ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ, ಬೆಂಗಳೂರು, ಏರೋಸ್ಪೇಸ್ ಉದ್ಯಮದಲ್ಲಿ ಅತ್ಯುತ್ತಮ ಪ್ರತಿಭೆಗಳನ್ನು ಹೊಂದಿದೆ. ಇದು ವಿಮಾನ ಮತ್ತು ಹೆಲಿಕಾಪ್ಟರ್ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸಲು ಸೂಕ್ತ ಸ್ಥಳವಾಗಿದೆ. ತಯಾರಕರಿಗೆ ಪ್ರೋತ್ಸಾಹ ನೀಡುವ ಮೂಲಕ, ಪ್ರತಿಭಾ ಪಲಾಯನವನ್ನು ತಡೆದು ನಮ್ಮ ದೇಶದ ಪ್ರತಿಭೆಗಳನ್ನು ಭಾರತದೊಳಗೆ ಉಳಿಸಿಕೊಳ್ಳಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು.

ರಕ್ಷಣಾ ಸಚಿವರು ಕರ್ನಾಟಕದಲ್ಲಿ ಏರೋಸ್ಪೇಸ್ ಉದ್ಯಮವನ್ನು ಸ್ಥಾಪಿಸಲು ಹಾಗೂ ವಿಮಾನ ಮತ್ತು ಹೆಲಿಕಾಪ್ಟರ್ಗಳ ತಯಾರಕರನ್ನು ಹೆಚ್ಚು, ಹೆಚ್ಚು ಬೆಂಗಳೂರಿನ ಕಡೆಗೆ ಗಮನ ಹರಿಸುವಂತೆ ಪ್ರೋತ್ಸಾಹ ನೀಡಬೇಕಾಗಿ ಮನವಿ ಮಾಡುತ್ತೇನೆ. ಕರ್ನಾಟಕ ಭಾರತದ ತಾಂತ್ರಿಕ ಮತ್ತು ಕೈಗಾರಿಕಾ ಪ್ರಗತಿಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ವಿಶ್ವ ದರ್ಜೆಯ ಸಂಶೋಧನಾ ಸಂಸ್ಥೆಗಳು, ಅತ್ಯಾಧುನಿಕ ಏರೋಸ್ಪೇಸ್ ಕಂಪನಿಗಳನ್ನು ಹೊಂದಿರುವ ಕೌಶಲ್ಯಪೂರ್ಣ ಕಾರ್ಯಪಡೆಯೇ ನಮ್ಮಲ್ಲಿದೆ ಎಂದರು.
ಇತ್ತೀಚಿನ ವರ್ಷಗಳಲ್ಲಿ, ಕರ್ನಾಟಕವು ದೇಶದ ಒಟ್ಟು ದೇಶೀಯ ಉತ್ಪನ್ನ, ಕೈಗಾರಿಕಾ ಬೆಳವಣಿಗೆ ಮತ್ತು ಹೂಡಿಕೆಯ ಒಳಹರಿವು ಸೇರಿದಂತೆ ಪ್ರಮುಖ ಆರ್ಥಿಕ ಕ್ಷೇತ್ರಗಳಲ್ಲಿ ಅಗಾಧ ಬೆಳವಣಿಗೆ ಕಂಡಿದೆ. ಸಂಶೋಧನೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಉದ್ದಿಮೆಗೆ ಪ್ರೋತ್ಸಾಹಿಸುವ ಭವಿಷ್ಯದ ದೃಷ್ಟಿಯಿಂದ ಕೈಗಾರಿಕಾ ನೀತಿಯನ್ನು ಪೋಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ಆಕಾಶಕ್ಕೆ ಮಿತಿಯಿಲ್ಲ ಎಂಬುದನ್ನು ಈ ಏರ್ ಶೋ ಮೂಲಕ ನಾವು ಕಂಡುಕೊಳ್ಳಬಹುದು. ಬೆಂಗಳೂರು ಏರ್ ಶೋ ನಾಗರಿಕ ಮತ್ತು ಮಿಲಿಟರಿ ವಾಯುಯಾನ ಎರಡರಲ್ಲೂ ಭಾರತದ ಪ್ರಗತಿಯನ್ನು ಎತ್ತಿ ತೋರಿಸುವ ದೊಡ್ಡ ಕಾರ್ಯಕ್ರಮ ಎಂದು ತಿಳಿಸಿದರು.
ಏರೋ ಇಂಡಿಯಾ ಕೇವಲ ಪ್ರದರ್ಶನವಲ್ಲ. ಇದು ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಭಾರತದ ಸಾಮರ್ಥ್ಯ ಬೆಳೆಯುತ್ತಿರುವುದಕ್ಕೆ ಸಾಕ್ಷಿ ಮತ್ತು ಅಂತರರಾಷ್ಟ್ರೀಯ ಪಾಲುದಾರಿಕೆಗಳನ್ನು ಬೆಳೆಸುವ ವೇದಿಕೆ ಎಂದರು.
2013 ರಲ್ಲಿ ಏರೋಸ್ಪೇಸ್ ನೀತಿಯನ್ನು ಘೋಷಿಸಿದ ಮೊದಲ ರಾಜ್ಯ ಕರ್ನಾಟಕ. ನಮ್ಮ ರಾಜ್ಯವು ದೇವನಹಳ್ಳಿ ಬಳಿ ಏರೋಸ್ಪೇಸ್ ಕಂಪನಿಗಳಿಗಾಗಿ 1 ಸಾವಿರ ಎಕರೆ ಪ್ರದೇಶವನ್ನು ಮೀಸಲಿಟ್ಟು ಏರೋಸ್ಪೇಸ್ ಪಾರ್ಕ್ ಸ್ಥಾಪಿಸಿದೆ ಎಂದರು.
ಇಂದು ಏರೋಸ್ಪೇಸ್ ಉದ್ಯಮವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಬೆಂಗಳೂರು ಅತ್ಯುತ್ತಮ ನಗರವಾಗಿದೆ. ಅನೇಕ ಬ್ರ್ಯಾಂಡ್ಗಳು ಮತ್ತು ಅತ್ಯುತ್ತಮ ತಂತ್ರಜ್ಞಾನಗಳನ್ನು ಪ್ರದರ್ಶಿಸಲು ಬೆಂಗಳೂರು ಸೂಕ್ತ ಸ್ಥಳವಾಗಿದೆ ಎಂದರು. ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಳ್ಳಲು, ಉದ್ದಿಮೆಗಳ ಅತ್ಯುತ್ತಮ ಉತ್ಪನ್ನಗಳನ್ನು ಪರೀಕ್ಷಿಸಲು ಇದು ಸೂಕ್ತ ಸ್ಥಳವಾಗಿದೆ. ಏರೋಸ್ಪೇಸ್ ಭವಿಷ್ಯವು ರೂಪುಗೊಳ್ಳುತ್ತಿರುವ ಸ್ಥಳವೇ ಬೆಂಗಳೂರು" ಎಂದು ಹೇಳಿದರು.
ಬೆಂಗಳೂರು ಭಾರತದ ಏರೋಸ್ಪೇಸ್ ರಾಜಧಾನಿ. ದೇಶದ ಏರೋಸ್ಪೇಸ್ ಉತ್ಪಾದನೆ ಮತ್ತು ರಕ್ಷಣಾ ಸಂಶೋಧನೆಯ ಶೇ. 60 ಕ್ಕಿಂತ ಹೆಚ್ಚು ಕೊಡುಗೆಯನ್ನು ನಮ್ಮ ರಾಜ್ಯ ನೀಡುತ್ತಿದೆ ಎಂದರು. ಎಚ್ ಎಎಲ್, ಇಸ್ರೋ ಮತ್ತು ಬೋಯಿಂಗ್ ಇಂಡಿಯಾದಂತಹ ಪ್ರಮುಖ ಸಂಸ್ಥೆಗಳು ಭಾರತದ ರಕ್ಷಣಾ ಮತ್ತು ಬಾಹ್ಯಾಕಾಶ ಸಾಮರ್ಥ್ಯಗಳಿಗೆ ಸಾಕಷ್ಟು ಕೊಡುಗೆಗಳನ್ನು ನೀಡುತ್ತಿವೆ. ಬೆಂಗಳೂರಿನ ಏರೋಸ್ಪೇಸ್ ವಲಯದಲ್ಲಿ 1,50,000 ಕ್ಕೂ ಹೆಚ್ಚು ಜನರು ಕೆಲಸ ಮಾಡುತ್ತಿದ್ದಾರೆ, ಇದು ನಗರವನ್ನು ವಾಯುಯಾನ ಮತ್ತು ರಕ್ಷಣಾ ತಂತ್ರಜ್ಞಾನದಲ್ಲಿ ಜಗತ್ತಿನಲ್ಲಿಯೇ ಸಾಕಷ್ಟು ಹೆಸರು ಮಾಡಿದೆ ಎಂದರು.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications