ನರೇಂದ್ರ ಮೋದಿಗೆ ದೇವೇಗೌಡರು ಬರೆದ ಭಾವನಾತ್ಮಕ ಪತ್ರದಲ್ಲೇನಿದೆ?
ಬೆಂಗಳೂರು, ಮೇ 09: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಮಿಲಿಟರಿ ಕಾರ್ಯಾಚರಣೆ ನಡೆಸಿರುವ ಭಾರತ ಸರ್ಕಾರದ ಕ್ರಮವನ್ನು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮುಕ್ತಕಂಠದಿಂದ ಸ್ವಾಗತಿಸಿದ್ದಾರೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗುರುವಾರ ಪತ್ರ ಬರೆದಿರುವ ದೇವೇಗೌಡರು, ಮೇ 7 ರಂದು ಪಹಲ್ಗಾಮ್ ನಲ್ಲಿ ನಡೆದಿರುವ ಭಯೋತ್ಪಾದಕ ದಾಳಿಗೆ ಭಾರತದ ಪ್ರಬುದ್ಧ ಮತ್ತು ಸಂಯಮದ ಮಿಲಿಟರಿ ಪ್ರತಿಕ್ರಿಯೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ನಾನು ನಿಮ್ಮನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ. ಸೌದಿ ಅರೇಬಿಯಾ ಭೇಟಿಯಲ್ಲಿದ್ದ ನೀವು ಭಯೋತ್ಪಾದಕ ದಾಳಿ ವಿಷಯ ಗೊತ್ತಾಗುತ್ತದ್ದಂತೆಯೇ ಭೇಟಿಯನ್ನು ಮೊಟಕುಗೊಳಿಸಿ ಕೂಡಲೇ ಸ್ವದೇಶಕ್ಕೆ ವಾಪಸ್ ಬಂದಿರಿ. ತಕ್ಷಣದಿಂದಲೇ ದೇಶದಲ್ಲಿ ಸೃಷ್ಟಿಯಾಗಿದ್ದ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುವುದರ ಜೊತೆಗೆ, ವ್ಯೂಹಾತ್ಮಕ ಸಭೆಗಳನ್ನು ನಡೆಸಿ ಜಾಗತಿಕ ಬೆಂಬಲವನ್ನು ಸಜ್ಜುಗೊಳಿಸಲು ಮಹತ್ವದ ಪಾತ್ರ ವಹಿಸಿದಿರಿ ಎಂದರು.

ಸಶಸ್ತ್ರ ಪಡೆಗಳಿಗೆ ಸ್ಫೂರ್ತಿ ನೀಡಲು ತಾವು ಮೊದಲ ದಿನದಿಂದಲೇ ನೀವು ತೆಗೆದುಕೊಂಡ ದೃಢ ನಿರ್ಧಾರದ ಕ್ರಮಗಳನ್ನು ನಾನು ಗಮನಿಸುತ್ತಿದ್ದೇನೆ. ನಂತರ ನೀವು ಎಲ್ಲಾ ತುರ್ತು ಪರಿಸ್ಥಿತಿಗಳ ಮೇಲ್ವಿಚಾರಣೆ ನಡೆಸಲು ಯುರೋಪ್ ಪ್ರವಾಸವನ್ನು ರದ್ದುಗೊಳಿಸಿದ್ದೀರಿ" ಎಂದು ಮಾಜಿ ಪ್ರಧಾನಿಗಳು ಮೋದಿ ಅವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ವಾರಗಳಿಂದ ನೀವು ಬಹಳ ಒತ್ತಡ ಮತ್ತು ಸಂಯಮದಿಂದ ಕರ್ತವ್ಯ ನಿರ್ವಹಿಸುತ್ತಿದ್ದೀರಿ. ದೇವರು ನಿಮಗೆ ದುಷ್ಟರನ್ನು ಹತ್ತಿಕ್ಕುವ ಸರ್ವಶಕ್ತಿಯನ್ನು ನೀಡಲಿ. ದೇಶ ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳನ್ನೂ ನಿವಾರಿಸುವ ಶಕ್ತಿಯೂ ನಿಮಗೆ ಸಿಗಲಿ. ಕಠಿಣ ಸಂದರ್ಭದಲ್ಲಿ ದೇಶದ ನಾಯಕತ್ವ ವಹಿಸಿರುವ ನಿಮ್ಮ ಹೆಸರು ಇತಿಹಾಸದಲ್ಲಿ ಪ್ರಕಾಶಮಾನವಾಗಿ ದಾಖಲಾಗಲಿದೆ ಎಂದು ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರದಲ್ಲಿ ಹೇಳಿದ್ದಾರೆ.
ಆಧ್ಯಾತ್ಮಿಕ ಪ್ರಜ್ಞೆ, ಆಳವಾದ ಚಿಂತನೆ ಮತ್ತು ನಿರಂತರ ಪ್ರಾರ್ಥನೆ ಇಲ್ಲದೆ ಸಮತೋಲನ ಮತ್ತು ಸಮಚಿತ್ತತೆಯನ್ನು ಕಂಡುಕೊಳ್ಳುವುದು ಸುಲಭವಲ್ಲ ಎಂದು ನನಗೆ ತಿಳಿದಿದೆ. ಕಳೆದ ಕೆಲವು ದಿನಗಳಲ್ಲಿ ನೀವು ಎಲ್ಲವನ್ನೂ ಉತ್ತಮ ರೀತಿಯಲ್ಲಿ ಸಾಧಿಸಿದ್ದೀರಿ. ನಿಮ್ಮ ಇಚ್ಛಾಶಕ್ತಿಯನ್ನು ಸಶಕ್ತವಾಗಿ ಪ್ರದರ್ಶಿಸಿದ್ದೀರಿ. ಹಿಂದೆಯೂ ಹಲವಾರು ಸಂದರ್ಭಗಳಲ್ಲಿ ನಿಮ್ಮ ಈ ರೀತಿಯ ನಾಯಕತ್ವ ಗುಣ ಸ್ಪಷ್ಟವಾಗಿ ಗೋಚರಿಸಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಭಯೋತ್ಪಾದನೆಯಂತಹ ಅಧರ್ಮದ ವಿರುದ್ಧ ನಾವು ಈ ಧರ್ಮದ ಯುದ್ಧವನ್ನು ನಡೆಸುತ್ತಿರುವಾಗ ದೇವರು ನಿಮ್ಮ ಜೊತೆಯಲ್ಲಿಯೇ ಇರಲಿ. ನಮ್ಮ ಮಹಾನ್ ರಾಷ್ಟ್ರವನ್ನು ರಕ್ಷಿಸಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಭಾರತವು ಶಾಂತಿಪ್ರಿಯ ರಾಷ್ಟ್ರವಾಗಿದೆ ಮತ್ತು ಯಾವಾಗಲೂ ಜಗತ್ತಿನಲ್ಲಿ ಸಕಾರಾತ್ಮಕತೆಯ ಬೆಳಕನ್ನು ಹರಡಿದೆ. ಆದರೆ ಯಾರಾದರೂ ರಾಷ್ಟದ ಶಾಂತಿಪ್ರಿಯತೆಯನ್ನೇ ನಮ್ಮ ದೌರ್ಬಲ್ಯವೆಂದು ನೋಡಿದರೆ, ನಾವು ಎಂತಹ ಸಮರ್ಥರು ಎಂಬುದನ್ನು ಅವರಿಗೆ ತೋರಿಸಿ ಕೊಟ್ಟಿದ್ದೀರಿ ಎಂದು ಮಾಜಿ ಪ್ರಧಾನಿಗಳು ಮೋದಿ ಅವರನ್ನು ಕೊಂಡಾಡಿದ್ದಾರೆ.
ನಾವು ಎದುರಿಸುತ್ತಿರುವ ಸವಾಲುಗಳು ಖಂಡಿತವಾಗಿಯೂ ಇಲ್ಲಿಗೆ ಕೊನೆಗೊಳ್ಳದಿರಬಹುದು, ಆದರೆ ನಾವು ಒಂದು ರಾಷ್ಟ್ರವಾಗಿ ಒಗ್ಗಟ್ಟಿನಿಂದ ಇರುವುದರಲ್ಲಿ ಅಪಾರ ಸಮಾಧಾನವಿದೆ. ನಾವು ಒಟ್ಟಿಗೆ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ ಹಾಗೂ ಒಂದು ರಾಷ್ಟ್ರವಾಗಿ ಮುನ್ನಡೆಯುತ್ತೇವೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications