ಸ್ಟಿಂಗ್ ಆಪರೇಶನ್: ರಾಜ್ಯಸಭಾ ಚುನಾವಣೆಗೆ ತಡೆ ಇಲ್ಲ
ನವದೆಹಲಿ, ಜೂನ್, 09: ಕರ್ನಾಟಕ್ಕೆ ಸಂಬಂಧಿಸಿದ ರಾಜ್ಯಸಭಾ ಚುನಾವಣೆ ನಿಗದಿಯಂತೆ ಜೂನ್ 11 ರಂದು ನಡೆಯಲಿದೆ. ಶಾಸಕರ ಹಣ ಬೇಡಿಕೆ ಸ್ಟಿಂಗ್ ಆಪರೇಶನ್ ಸಂಬಂಧ ಕೇಂದ್ರ ಚುನಾವಣಾ ಆಯೋಗ ನಡೆಸಿದ ಸಭೆಯಲ್ಲಿ ಚುನಾವಣೆ ಮೊದಲಿನಂತೆ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ.
ನವದೆಹಲಿಯಲ್ಲಿ ಗುರುವಾರ ಮುಖ್ಯ ಚುನಾವಣಾ ಆಯುಕ್ತ ಡಾ.ನಸಿಮ್ ಜೈದಿ ನೇತೃತ್ವದಲ್ಲಿ ಸಭೆ ನಡೆಯಿತು. ಕುಟುಕು ಕಾರ್ಯಾಚರಣೆ ಬಗ್ಗೆ ವರದಿ ನೀಡುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚನೆ ನೀಡಲಾಗಿತ್ತು. ಅಂತಿಮವಾಗಿ ಶಾಸಕರ ಹಣದ ಬೇಡಿಕೆ ಬಗ್ಗೆ ಸಾಕ್ಷಿ ಆಧಾರಗಳು ಲಭ್ಯವಾಗದ ಕಾರಣ ಚುನಾವಣೆ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ.[ಸ್ಟಿಂಗ್ ಆಪರೇಷನ್: ಮೂರು ಕಾಸಿಗೆ ಹರಾಜಾದ ರಾಜ್ಯ ಶಾಸಕರ ಮರ್ಯಾದೆ!]

ರಾಜ್ಯಕ್ಕೆ ಸಂಬಂಧಿಸಿದ ರಾಜ್ಯಸಭಾ ಚುನಾವಣೆಯನ್ನು ಮುಂದೂಡಬೇಕೋ? ಬೇಡವೋ? ಎಂಬ ವಿಚಾರದ ಮೇಲೆ ಚರ್ಚೆ ನಡೆಯಿತು. ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ, ಜೆಡಿಎಸ್, ಬಿಜೆಪಿ ತಲಾ ಒಂದು ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿವೆ
ಕರ್ನಾಟಕದ ಶಾಸಕರಾದ ಜಿ ಟಿ ದೇವೇಗೌಡ, ಮಲ್ಲಿಕಾರ್ಜುನ ಖೂಬಾ, ವರ್ತೂರು ಪ್ರಕಾಶ್ ಮತ್ತು ಬಿ ಆರ್ ಪಾಟೀಲ್ ರಾಜ್ಯಸಭೆ ಮತ ನೀಡಲು ಐದರಿಂದ ಹತ್ತು ಕೋಟಿ ರೂಪಾಯಿ ಬೇಡಿಕೆಯಿಟ್ಟಿದ್ದಾರೆ ಎಂದು ಕುಟುಕು ಕಾರ್ಯಾಚರಣೆಯಲ್ಲಿ ಹೇಳಲಾಗಿದ್ದು ವಾಹಿನಿಗಳು ನಿರಂತರವಾಗಿ ಸುದ್ದಿ ಬಿತ್ತರಿಸಿದ್ದವು.[ಟೈಮ್ಸ್ ನೌ ವರದಿಗಾರ್ತಿಯನ್ನು 'ಸಾಲೀ' ಎಂದ ಟೀಕಿಸಿದ ಅಶೋಕ್ ಖೇಣಿ]
ಮಲ್ಲಿಕಾರ್ಜುನ ಖೂಬಾ ವಿರುದ್ಧ ಎಫ್ ಐಆರ್
ಕುಟುಕು ಕಾರ್ಯಾಚರಣೆಯಲ್ಲಿ ಕಂಡುಬಂದಿರುವ ಬಸವ ಕಲ್ಯಾಣದ ಶಾಸಕ ಮಲ್ಲಿಕಾರ್ಜುನ ಖೂಬಾ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ನಡೆಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಸಿಬಿಐ ತನಿಖೆ ನಡೆಯುವ ಸಾಧ್ಯತೆಗಳು ಇವೆ.
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ











Click it and Unblock the Notifications