ಕಾಂಗ್ರೆಸ್, ಜೆಡಿಎಸ್ನಿಂದ ರಾಜ್ಯಸಭೆಗೆ ಅಭ್ಯರ್ಥಿ ಯಾರು?
ಬೆಂಗಳೂರು, ಮೇ 24 : ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆ ಸದಸ್ಯರ ಆಯ್ಕೆಗೆ ನಡೆಯುವ ಚುನಾವಣೆ ಕಾವು ಏರುತ್ತಿದೆ. ಬಿಜೆಪಿ ಅಭ್ಯರ್ಥಿಯನ್ನು ಅಂತಿಗೊಳಿಸಿದೆ. ಆದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೂ ಅಂತಿಮಗೊಳಿಸಿಲ್ಲ.
ಜೂನ್ 11ರಂದು ರಾಜ್ಯಸಭಾ ಚುನಾವಣೆ ನಡೆಯಲಿದೆ. ಬಿಜೆಪಿ ಈಗಾಗಲೇ ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯ ನಾಯ್ಡು ಅವರನ್ನು ಅಭ್ಯರ್ಥಿ ಎಂದು ನಿರ್ಧರಿಸಿದ್ದು, ಹೈಕಮಾಂಡ್ ನಾಯಕರಿಗೆ ಈ ಕುರಿತು ಪ್ರಸ್ತಾವನೆಯನ್ನು ಕಳಿಸಿದೆ. [ಕರ್ನಾಟಕದಿಂದ ರಾಜ್ಯಸಭೆಗೆ ಮತ್ತೆ ಎಂ ವೆಂಕಯ್ಯನಾಯ್ಡು]

ಕಾಂಗ್ರೆಸ್ ಇಬ್ಬರು ಸದಸ್ಯರನ್ನು ಆಯ್ಕೆ ಮಾಡಿ ಕಳಿಸುವ ಶಕ್ತಿ ಹೊಂದಿದೆ. ಜೆಡಿಎಸ್ ಪಕ್ಷದಿಂದ ಒಬ್ಬರು ಆಯ್ಕೆಯಾಗಬಹುದು. ಕಾಂಗ್ರೆಸ್ನಿಂದ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಸೇರಿದಂತೆ ಹಲವು ನಾಯಕರ ಹೆಸರುಗಳು ಕೇಳಿಬರುತ್ತಿವೆ. ಜೆಡಿಎಸ್ನಿಂದ ಉದ್ಯಮಿಯೊಬ್ಬರು ಆಯ್ಕೆಯಾಗುವ ಸೂಚನೆ ಸಿಕ್ಕಿದೆ. [ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸಿನಲ್ಲಿ ಪೈಪೋಟಿ]
ಯಾರ ಹೆಸರು ಕೇಳಿಬರುತ್ತಿದೆ : ಕಾಂಗ್ರೆಸ್ ಪಕ್ಷದಿಂದ ರಾಜ್ಯಸಭಾ ಸದಸ್ಯರಾಗಲು ಐವರ ಹೆಸರು ಕೇಳಿಬರುತ್ತಿದೆ. ಮಾಜಿ ಕೇಂದ್ರ ಸಚಿವರಾದ ಪಿ.ಚಿದಂಬರಂ, ಆಸ್ಕರ್ ಫರ್ನಾಂಡೀಸ್, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ್, ಮಾಜಿ ಸಚಿವೆ ರಾಣಿ ಸತೀಶ್ ಹೆಸರು ಕೇಳಿ ಬರುತ್ತಿದೆ. [ಕುಮಾರಸ್ವಾಮಿ ರಾಜ್ಯಸಭೆಗೆ, ಗೌಡರ ಸ್ಪಷ್ಟನೆಗಳು]
ನಾಯ್ಡು ಅಂತಿಮವೇ? : ಕರ್ನಾಟಕದಿಂದ ರಾಜ್ಯಸಭೆಗೆ ಹೊರರಾಜ್ಯದವರನ್ನು ಆಯ್ಕೆ ಮಾಡಬಾರದು ಎಂದು ಸಾಮಾಜಿಕ ಜಾಲ ತಾಣದಲ್ಲಿ ದೊಡ್ಡ ಅಭಿಯಾನ ನಡೆದಿತ್ತು. ಅದರಲ್ಲೂ ವೆಂಕಯ್ಯ ನಾಯ್ಡು ಅವರಿಗೆ 4ನೇ ಬಾರಿಗೆ ಅವಕಾಶ ನೀಡಬಾರದು ಎಂದು ಆಕ್ರೋಶ ವ್ಯಕ್ತವಾಗಿತ್ತು. [#VenkayyaSakayya ಎಂದ ರೊಚ್ಚಿಗೆದ್ದ ಕನ್ನಡಿಗರು]
ಆದರೆ, ಬಿಜೆಪಿ ನಾಯಕರು ವೆಂಕಯ್ಯ ನಾಯ್ಡು ಅವರ ಹೆಸರನ್ನು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಿದ್ದಾರೆ. ಅಂತಿಮ ನಿರ್ಧಾರವನ್ನು ಹೈಕಮಾಂಡ್ ನಾಯಕರು ತೆಗೆದುಕೊಳ್ಳಲಿದ್ದಾರೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.
ಉದ್ಯಮಿ ರಾಜ್ಯಸಭೆಗೆ : ಇನ್ನೂ ಒಬ್ಬರು ಸದಸ್ಯರನ್ನು ಆಯ್ಕೆ ಮಾಡಿ ಕಳಿಸುವ ಶಕ್ತಿ ಹೊಂದಿರುವ ಜೆಡಿಎಸ್ ಉದ್ಯಮಿಯೊಬ್ಬರಿಗೆ ರಾಜ್ಯಸಭೆ ಟಿಕೆಟ್ ನೀಡುವ ಸಾಧ್ಯತೆ ಇದೆ. ಮಂಗಳೂರು ಮೂಲದ ಉದ್ಯಮಿ ಎಂ.ಎ.ಫಾರೂಕ್ ಅವರು ಈಗಾಗಲೇ ಕುಮಾರಸ್ವಾಮಿ ಅವರು ಜೊತೆ ಮಾತುಕತೆ ನಡೆಸಿದ್ದಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್ನಿಂದ ಉಚ್ಛಾಟನೆಗೊಂಡ ದಯಾನಂದ ರೆಡ್ಡಿ ಅವರಿಗೆ ಜೆಡಿಎಸ್ ಅವಕಾಶ ನೀಡಲಿದೆ ಎಂಬ ಸುದ್ದಿಗಳು ಇವೆ.
ಆಸ್ಕರ್ ಫರ್ನಾಂಡೀಸ್ (ಕಾಂಗ್ರೆಸ್), ಆಯನೂರು ಮಂಜುನಾಥ್ (ಬಿಜೆಪಿ), ಎಂ. ವೆಂಕಯ್ಯ ನಾಯ್ಡು (ಬಿಜೆಪಿ) ಅವರ ಅವಧಿ ಮುಗಿಯಲಿದ್ದು, ಮೂರು ಸ್ಥಾನಗಳು ತೆರವಾಗಲಿವೆ. ಉದ್ಯಮಿ ವಿಜಯ್ ಮಲ್ಯ ಅವರ ರಾಜೀನಾಮೆಯಿಂದ
ಒಂದು ಸ್ಥಾನ ಖಾಲಿಯಾಗಿದ್ದು, ಒಟ್ಟು 4 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.
-
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
HPCL Recruitment 2026: HPCL ನಿಂದ 731 ಹುದ್ದೆಗಳಿಗೆ ಬೃಹತ್ ನೇಮಕಾತಿ, ವಾರ್ಷಿಕ 60 ಲಕ್ಷ ರೂ. ವರೆಗೆ ಸಂಬಳ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
"ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ, ಕಾಂಗ್ರೆಸ್ನಿಂದ ಪ್ರಜಾಪ್ರಭುತ್ವದ ಹತ್ಯೆ": ಆರ್ ಅಶೋಕ್ -
ಎಲ್ಪಿಜಿ ಪೂರೈಕೆಯಲ್ಲಿ ತೊಂದರೆ ಇಲ್ಲ, ಕೇಂದ್ರ ಸಚಿವರಿಂದ ಭರವಸೆ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ -
KAS ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ KPSC: 384 ಗೆಜೆಟೆಡ್ ಪ್ರೊಬೇಷನರ್ಸ್ ಸಂದರ್ಶನ ಮುಂದೂಡಿಕೆ -
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
ಒಡಿಶಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ












Click it and Unblock the Notifications