Get Updates
Get notified of breaking news, exclusive insights, and must-see stories!

Breaking news: ರಾಯರ ಕೃಪೆಯಿಂದ ರಾಜ್ಯಸಭಾ ಟಿಕೆಟ್ - ಜಗ್ಗೇಶ್ ಮೊದಲ ಪ್ರತಿಕ್ರಿಯೆ

ಬೆಂಗಳೂರು, ಮೇ30: ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೇ 31 (ಮಂಗಳವಾರ) ಕೊನೆಯ ದಿನವಾಗಿದೆ. ಬಿಜೆಪಿ ಈಗಾಗಲೇ ರಾಜ್ಯದಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಮತ್ತು ನವರಸನಾಯಕ ಬಿಜೆಪಿ ಮುಖಂಡ ಜಗ್ಗೇಶ್‌ಗೆ ರಾಜ್ಯಸಭೆಯ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಈ ಬಗ್ಗೆ ಜಗ್ಗೇಶ್ ಸಂತಸದ ಜೊತೆಗೆ ಅಚ್ಚರಿಯನ್ನು ವ್ಯಕ್ತಪಡಿಸಿದ್ದಾರೆ. ನನಗೆ ಯಾವುದೇ ನಿರೀಕ್ಷೆ ಇರಲಿಲ್ಲ. ಬಹಳ ನಿಷ್ಠೆಯಿಂದ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನು ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಶಾಸಕರು, ಸಂಘದ ಹಿರಿಯರು ಸೇರಿ ಈ ನಿರ್ಧಾರವನ್ನು ಮಾಡಿ ಟಿಕೆಟ್ ಕೊಟ್ಟಿದ್ದಾರೆ. ಪಕ್ಷ ಮತ್ತು ಸಂಘಟನೆಗೆ ಧನ್ಯವಾದಗಳು. ಹಿರಿಯರು ನನಗೆ ಫೋನ್ ಮಾಡಿ ದಾಖಲೆ ರೆಡಿ ಮಾಡಿಕೊಳ್ಳಲು ಹೇಳಿದರು ಅಚ್ಚರಿಯಾಯಿತು. ನಿಜಕ್ಕೂ ಇದು ರಾಯರ ಪವಾಡ. ರಾಯರ ಸಂಪೂರ್ಣ ಆಶೀರ್ವಾದದಿಂದ ಟಿಕೆಟ್ ಸಿಕ್ಕಿದೆ. ಮೇ31 ರಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದ್ದಾರೆ.

 Rajyasabha election; Bjp candidate jaggesh first reaction

ನನಗೆ ಟಿಕೆಟ್ ಸಿಗಲಿದೆ ಎಂಬ ನಿರೀಕ್ಷೆಗಳು ಇರಲಿಲ್ಲ. ನಿರೀಕ್ಷೆ ಇಲ್ಲದ್ದರಿಂದ ದಾಖಲೆ ಸಂಗ್ರಹಕ್ಕೆ ಸ್ವಲ್ಪ ವಿಳಂಬವಾಗಿದೆ. ಎಲ್ಲಾ ದಾಖಲೆಗಳನ್ನು ಸಂಗ್ರಹಿಸಲಾಗುತ್ತಿದೆ. ನಾಳೆ(ಮೇ31) ರಂದು ನಾಮಪತ್ರವನ್ನು ಸಲ್ಲಿಸುತ್ತೇನೆ ಎಂದು ಜಗ್ಗೇಶ್‌ರವರು ಬಿಜೆಪಿಯ ಕಚೇರಿಯಲ್ಲಿ ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+