Rajyotsava Award 2023 Winners: 68 ಜನರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ಇಲ್ಲಿದೆ ವಿಜೇತರ ಪಟ್ಟಿ!
ಬೆಂಗಳೂರು, ಅಕ್ಟೋಬರ್ 31: 2023 ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ರಾಜ್ಯ ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದೆ. ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಒಟ್ಟು 68 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ಘೋಷಣೆ ಮಾಡಲಾಗಿದೆ.
ರಾಜ್ಯೋತ್ಸವ ಪ್ರಶಸ್ತಿ 2023ರ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, 2023ನೇ ಸಾಲಿನಲ್ಲಿ 68 ಜನರಿಗೆ ವೈಯಕ್ತಿಕ ವಿಭಾಗದಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲಿ ಎಲ್ಲಾ ಜಿಲ್ಲೆಗಳಿಗೆ ಪ್ರತಿನಿತ್ಯ ನೀಡಲಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಸಂಭ್ರಮ-50'ರ ಪ್ರಯುಕ್ತ ವಿಶೇಷವಾಗಿ 10 ಸಂಘ ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಇಸ್ರೋ ಮುಖ್ಯಕ್ತ ಸೋಮನಾಥ ಅವರಿಗೂ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, 100 ವರ್ಷ ದಾಟಿದ ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ. ಒಬ್ಬರು ದಾವಣಗೆರೆ ಹಾಗೂ ಒಬ್ಬರು ಉತ್ತರ ಕನ್ನಡ ಜಿಲ್ಲೆಯವರಿಗೆ ನೀಡಲಾಗಿದೆ. 13 ಮಹಿಳೆಯರು ಮತ್ತು 54 ಪುರುಷರು ಹಾಗೂ ಮತ್ತು ಒಬ್ಬರು ಮಂಗಳ ಮುಖಿ ಗೆ ರಾಜ್ಯೋತ್ಸವ ಪ್ರಶಸ್ತಿಯನ್ನ ಘೋಷಿಸಲಾಗಿದ್ದು, ಪ್ರಶಸ್ತಿ ಪಡೆದವರಿಗೆ ರೂ 5 ಲಕ್ಷ ನಗದು ಹಾಗೂ 25 ಗ್ರಾಂ ಚಿನ್ನದ ಪದಕ ನೀಡಲಾಗುವುದು ಎಂದು ಹೇಳಿದ್ದಾರೆ.
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆದವರ ಪಟ್ಟಿ ಇಲ್ಲಿದೆ ನೋಡಿ.
ಚಲನಚಿತ್ರ ಕ್ಷೇತ್ರ
ಡಿಂಗ್ರಿ ನಾಗರಾಜ್
ಬಿ. ಜನಾರ್ಧನ್ (ಬ್ಯಾಂಕ್ ಜನಾರ್ಧನ್)
ರಂಗಭೂಮಿ ಕ್ಷೇತ್ರ
ಎ.ಜಿ. ಚಿದಂಬರ ರಾವ್ ಜಂಬೆ
ಪಿ. ಗಂಗಾಧರ ಸ್ವಾಮಿ
ಹೆಚ್.ಬಿ.ಸರೋಜಮ್ಮ
ತಯ್ಯಬಖಾನ್ ಎಂ.ಇನಾಮದಾರ
ಡಾ.ವಿಶ್ವನಾಥ್ ವಂಶಾಕೃತ ಮಠ
ಪಿ.ತಿಪ್ಪೇಸ್ವಾಮಿ

ಸಂಗೀತ ಕ್ಷೇತ್ರ
ಡಾ.ನಯನ ಎಸ್.ಮೋರೆ
ನೀಲಾ ಎಂ ಕೊಡ್ಲಿ
ಶಬ್ಬೀರ್ ಅಹಮದ್
ಡಾ.ಎಸ್ ಬಾಳೇಶ ಭಜಂತ್ರಿ
ಶಿಲ್ಪ ಕಲೆ ಮತ್ತು ಚಿತ್ರಕಲೆ ಕ್ಷೇತ್ರ
ಟಿ.ಶಿವಶಂಕರ್
ಕಾಳಪ್ಪ ವಿಶ್ವಕರ್ಮ
ಮಾರ್ಥಾ ಜಾಕಿಮೋವಿಚ್
ಪಿ.ಗೌರಯ್ಯ
ಯಕ್ಷಗಾನ & ಬಯಲಾಟ ಕ್ಷೇತ್ರ
ಅರ್ಗೋಡು ಮೋಹನದಾಸ ಶೆಣೈ
ಕೆ. ಲೀಲಾವತಿ ಬೈಪಾಡಿತ್ತಾಯ
ಕೇಶಪ್ಪ ಶಿಳ್ಳಿಕ್ಯಾತರ
ದಳವಾಯಿ ಸಿದ್ದಪ್ಪ
ಜಾನಪದ ಕ್ಷೇತ್ರ
ಹುಸೇನಾಬಿ ಬುಡೆನ್ ಸಾಬ್ ಸಿದ್ದಿ
ಶಿವಂಗಿ ಶಣ್ಮರಿ
ಮಹದೇವು
ನರಸಪ್ಪಾ
ಶಕುಂತಲಾ ದೇವಲಾನಾಯಕ
ಎಚ್.ಕೆ ಕಾರಮಂಚಪ್ಪ
ಶಂಭು ಬಳಿಗಾರ
ವಿಭೂತಿ ಗುಂಡಪ್ಪ
ಚೌಡಮ್ಮ
ಸಮಾಜಸೇವೆ ಕ್ಷೇತ್ರ
ಹುಚ್ಚಮ್ಮ ಬಸಪ್ಪ ಚೌದ್ರಿ
ಚಾರ್ಮಾಡಿ ಹಸನಬ್ಬ
ಕೆ.ರೂಪ್ಲಾ ನಾಯಕ್
ಪೂಜ್ಯ ನಿಜಗುಣಾನಂದ ಮಹಾಸ್ವಾಮಿ ನಿಷ್ಕಲ ಮಂಟಪ
ನಾಗರಾಜು.ಜಿ
ಆಡಳಿತ ಕ್ಷೇತ್ರ
ಬಲರಾಮ್, ತುಮಕೂರು
ವೈದ್ಯಕೀಯ ಕ್ಷೇತ್ರ
ಡಾ.ಸಿ. ರಾಮಚಂದ್ರ, ಬೆಂಗಳೂರು
ಡಾ.ಪ್ರಶಾಂತ್, ದ.ಕನ್ನಡ
ಸಾಹಿತ್ಯ ಕ್ಷೇತ್ರ
ಪ್ರೊ. ಸಿ.ನಾಗಣ್ಣ, ಚಾಮರಾಜನಗರ
ಸುಬ್ಬು ಹೊಲೆಯಾರ್, ಹಾಸನ
ಸತೀಶ್ ಕುಲಕರ್ಣಿ, ಹಾವೇರಿ
ಲಕ್ಷ್ಮೀಪತಿ ಕೋಲಾರ
ಪರಪ್ಪ ಗುರುಪಾದಪ್ಪ ಸಿದ್ದಾಪುರ
ಡಾ. ಕೆ ಷರೀಫಾ
ಶಿಕ್ಷಣ ಕ್ಷೇತ್ರ
ರಾಮಪ್ಪ, ರಾಯಚೂರು
ಕೆ.ಚಂದ್ರಶೇಖರ್, ಕೋಲಾರ
ಕೆ.ಟಿ ಚಂದು, ಮಂಡ್ಯ
ಕ್ರೀಡಾ ಕ್ಷೇತ್ರ
ಟಿ.ಎಸ್. ದಿವ್ಯಾ
ಅದಿತಿ ಅಶೋಕ್
ಅಶೋಕ್ ಗದಿಗೆಪ್ಪ ಏಣಗಿ
ಪರಿಸರ ಕ್ಷೇತ್ರ
ಸೋಮನಾಥ ರೆಡ್ಡಿ ಪೂರ್ಮಾ
ದ್ಯಾವನಗೌಡ ಟಿ ಪಾಟೀಲ
ಶಿವರೆಡ್ಡಿ ಹನುಮರೆಡ್ಡಿ ವಾಸನ
ನ್ಯಾಯಾಂಗ ಕ್ಷೇತ್ರ
ಜ. ವಿ ಗೋಪಾಲ ಗೌಡ
ಸಂಕೀರ್ಣ ಕ್ಷೇತ್ರ
ಎಂಎಂ ಮದರಿ
ಹಾಜಿ ಅಬ್ದುಲ್ಲಾ, ಪರ್ಕಳ
ಮಿಮಿಕ್ರಿ ದಯಾನಂದ್
ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್
ಲೆ. ಜ. ಕೊಡನ ಪೂವಯ್ಯ ಕಾರ್ಯಪ್ಪ
ಮಾಧ್ಯಮ ಕ್ಷೇತ್ರ
ದಿನೇಶ ಅಮೀನ್ಮಟ್ಟು
ಜವರಪ್ಪ
ಮಾಯಾ ಶರ್ಮ
ರಫೀ ಭಂಡಾರಿ
ವಿಜ್ಞಾನ ಮತ್ತು ತಂತ್ರಜ್ಞಾನ
ಎಸ್. ಸೋಮನಾಥನ್ ಶ್ರೀಧರ್ ಪನಿಕರ್
ಪ್ರೊ. ಗೋಪಾಲನ್ ಜಗದೀಶ್
ಹೊರನಾಡು ಮತ್ತು ಹೊರದೇಶ
ಸೀತಾರಾಮ ಅಯ್ಯಂಗಾರ್
ದೀಪಕ್ ಶೆಟ್ಟಿ
ಶಶಿಕಿರಣ್ ಶೆಟ್ಟಿ
ಸ್ವಾತಂತ್ರ್ಯ ಹೋರಾಟಗಾರ
ಪುಟ್ಟಸ್ವಾಮಿ ಗೌಡ
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ 10 ಸಂಘ-ಸಂಸ್ಥೆಗಳು
ಕರ್ನಾಟಕ ಸಂಘ, ಶಿವಮೊಗ್ಗ
ಬಿ.ಎನ್.ಶ್ರೀರಾಮ ಪುಸ್ತಕ ಪ್ರಕಾಶನ, ಮೈಸೂರು
ಮಿಥಿಕ್ ಸೊಸೈಟಿ, ಬೆಂಗಳೂರು
ಕರ್ನಾಟಕ ಸಾಹಿತ್ಯ ಸಂಘ, ಯಾದಗಿರಿ
ಮೌಲಾನಾ ಆಜಾದ್ ಶಿಕ್ಷಣ & ಸಮಾಜ ಕಲ್ಯಾಣ ಸಾಂಸ್ಕೃತಿಕ ಸಂಘ, ದಾವಣಗೆರೆ
ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ, ದಕ್ಷಿಣ ಕನ್ನಡ
ಸ್ನೇಹರಂಗ ಹವ್ಯಾಸಿ ಕಲಾ ಸಂಸ್ಥೆ, ಬಾಗಲಕೋಟೆ
ಚಿಣ್ಣರಬಿಂಬ, ಮುಂಬೈ
ಮಾರುತಿ ಜನಸೇವಾ ಸಂಘ, ದಕ್ಷಿಣ ಕನ್ನಡ
ವಿದ್ಯಾದಾನ ಸಮಿತಿ, ಗದಗ
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications