ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮತ್ತೆ ಮುಂದೂಡಿಕೆ?
ಬೆಂಗಳೂರು, ನವೆಂಬರ್ 13: ಉಪಚುನಾವಣೆ ಇದ್ದು ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಈ ಬಾರಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿತರಣೆಯನ್ನು ಮುಂದೂಡಲಾಗಿತ್ತು. ಆದರೆ ಈಗ ಅದು ಮತ್ತಷ್ಟು ಮುಂದಕ್ಕೆ ಹೋಗುವ ಸಾಧ್ಯತೆ ಇದೆ.
ಚುನಾವಣೆ ನೀತಿ ಸಂಹಿತೆ: ರಾಜ್ಯೋತ್ಸವ ಪ್ರಶಸ್ತಿ ನ.3ನಂತರ ಪ್ರಕಟ
ಉಪಚುನಾವಣೆ ಮುಗಿದ ನಂತರ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ ಮಾಡುವುದಾಗಿ ಸರ್ಕಾರ ಹೇಳಿತ್ತು. ನವೆಂಬರ್ 15 ರಂದು ಸಮಾರಂಭವೂ ನಡೆಯಲಿದೆ ಎನ್ನಲಾಗಿತ್ತು ಆದರೆ ಅದು ಮತ್ತಷ್ಟು ಮುಂದೆ ಹೋಗಿದೆ.
ಕನ್ನಡ ಸಂಸ್ಕೃತಿ ಇಲಾಖೆ ಎಡವಟ್ಟು: ರಾಜ್ಯೋತ್ಸವ ಪ್ರಶಸ್ತಿಗೇ ಮುಜುಗರ!
ನಿನ್ನೆ ಕೇಂದ್ರ ಮಂತ್ರಿ ಅನಂತ್ಕುಮಾರ್ ಅವರು ನಿಧನ ಹೊಂದಿರುವ ಕಾರಣ ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ. ಹಾಗಾಗಿ ನಾಳೆ ಸಹ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸುವುದು ಅನುಮಾನ.
6 ಪ್ರತಿಭಾವಂತ ಸಂಶೋಧಕರಿಗೆ ಇನ್ಫೋಸಿಸ್ ಪ್ರಶಸ್ತಿ
ನವೆಂಬರ್ 15ರಂದು ಮಾಡಲು ಉದ್ದೇಶಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭವು ಮುಂದೂಡಲಾಗಿದೆ. 63 ವರ್ಷದ ಕನ್ನಡ ರಾಜ್ಯೋತ್ಸವ ಇದಾಗಿದ್ದು, 63 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ ಎನ್ನಲಾಗಿದೆ. ಆದರೆ ಸರ್ಕಾರವು ಪಟ್ಟಿ ಬಿಡುಗಡೆಗೆ ಆಲಸ್ಯ ತೋರುತ್ತಿದೆ.