ರಕ್ಷಾ ಬಂಧನ; ಸ್ಪೀಡ್ ಪೋಸ್ಟ್, ಆನ್ಲೈನ್ ಮೂಲಕವೂ ರಾಖಿ ಕಳುಹಿಸಿ
ಬೆಂಗಳೂರು, ಜುಲೈ 30 : ಕೋವಿಡ್ -19 ಪರಿಸ್ಥಿತಿ ಹಿನ್ನಲೆಯಲ್ಲಿ ಸಹೋದರನಿಗೆ ಮನೆಯಲ್ಲಿ ಕುಳಿತುಕೊಂಡೇ ರಾಖಿಯನ್ನು ಕಳಿಸಬಹುದಾಗಿದೆ. ಇದಕ್ಕಾಗಿ ಭಾರತೀಯ ಅಂಚೆ ಇಲಾಖೆ ವಿಶೇಷ ಸೇವೆಯನ್ನು ಆರಂಭಿಸಿದೆ.
Recommended Video
ಕರ್ನಾಟಕದಲ್ಲಿನ ಜನರು ಭಾರತದ ಯಾವುದೇ ಪ್ರದೇಶಕ್ಕೇ ಬೇಕಾದರೂ ರಾಖಿಯನ್ನು ಸ್ಪೀಡ್ ಪೋಸ್ಟ್ ಮುಖಾಂತರ ಸುಲಭವಾಗಿ ಕಳಿಸಬಹುದಾಗಿದೆ. ಇದಕ್ಕಾಗಿ ಕೇವಲ 100 ರೂ. ವೆಚ್ಚವಾಗಲಿದೆ. ಈ ಸೇವೆಗೆ ಕರ್ನಾಟಕ ವೃತ್ತದ ಪೋಸ್ಟ್ ಮಾಸ್ಟರ್ ಜನರಲ್ ಶಿರ್ತಾಡಿ ರಾಜೇಂದ್ರ ಕುಮಾರ್ ಬೆಂಗಳೂರಿನಲ್ಲಿ ಚಾಲನೆ ನೀಡಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಭಾರತೀಯ ಅಂಚೆ ಇಲಾಖೆಯಲ್ಲಿ ದೊರೆಯುತ್ತಿದ್ದ ರಾಖಿ ಲಕೋಟೆಗಳಿಗೆ ಈಗ ಹೊಸ ಆಯಾಮ ನೀಡಲಾಗಿದೆ. ಸಹೋದರರಿಗೆ ಮಾತ್ರವಲ್ಲ ಲಡಾಖ್ ಗಡಿ ಪ್ರದೇಶದಲ್ಲಿರುವ ಸೇನಾ ಯೋಧರಿಗೂ ರಾಖಿ ತಲುಪಿಸುವ ಅವಕಾಶವಿದೆ.

ಯೋಧರಿಗಾಗಿಯೇ ಮುದ್ರಿತ ಸಂದೇಶವನ್ನು ಆಯ್ಕೆ ಮಾಡಿ ರವಾನಿಸಬಹುದಾಗಿದೆ. ಬಲು ಸರಳವಾದ ಪ್ರಕ್ರಿಯೆ ಇದಾಗಿದೆ. ಜನರು www.karnatakapost.gov.in/Rakhi_Postಗೆ ಲಾಗಿನ್ ಆಗಿ ಕಳುಹಿಸುವವರ ಪೂರ್ಣ ವಿವರಗಳನ್ನು ನೀಡಬೇಕು.
ಇಲ್ಲಿ ಸುಮಾರು 11 ವಿವಿಧ ಆಕರ್ಷಕ ವಿನ್ಯಾಸವುಳ್ಳ ರಾಖಿಗಳು ಲಭ್ಯವಿದೆ. ಪ್ರತಿಯೊಂದು ವಿನ್ಯಾಸದ ಎದುರು ವಿನ್ಯಾಸದ ಅಂಕಿ ನಮೂದಿಸಿದ್ದು, ನಮಗೆ ಬೇಕಾದ ವಿನ್ಯಾಸವನ್ನು ಆರಿಸಿ ಮುಂದುವರೆದಾಗ ಸಂದೇಶ ಕಳುಹಿಸುವ ಆಯ್ಕೆ ಕಾಣ ಸಿಗುತ್ತದೆ.
ರಾಖಿಗಳ ಸೀಮಿತ ದಾಸ್ತಾನು ಲಭ್ಯವಿದೆ. ಈ ಸೇವಾ ವಿಧಾನದ ಮೂಲಕ ರಾಖಿ ಕಳುಹಿಸಲು ಜುಲೈ 31ರ ತನಕ ಅವಕಾಶ ನೀಡಲಾಗಿದೆ. ರಾಖಿ ಕಳುಹಿಸಲು 100 ರೂ. ಶುಲ್ಕವಿದ್ದು, ಅದನ್ನು ಇಂಟರ್ ನೆಟ್ ಬ್ಯಾಂಕಿಂಗ್, ಐಪಿಪಿಬಿ, ಗೂಗಲ್ ಪೇ, ಭೀಮ್ ಆ್ಯಪ್, ಫೋನ್ ಪೇ ಮೂಲಕ ಪಾವತಿ ಮಾಡಬಹುದು.
ಮನೆಯೊಳಗೇ ಕುಳಿತು ಭಾರತದ ಯಾವುದೇ ಮೂಲೆಗೂ ರಾಖಿ ಕಳುಹಿಸಬಹುದಾದ ಈ ಸೇವೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಮಾನ್ಯ ಜನರಿಗೆ ಇದು ಅನುಕೂಲಕರವಾಗಿದೆ.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications