ರಕ್ಷಾ ಬಂಧನ; ಸ್ಪೀಡ್ ಪೋಸ್ಟ್, ಆನ್ಲೈನ್ ಮೂಲಕವೂ ರಾಖಿ ಕಳುಹಿಸಿ
ಬೆಂಗಳೂರು, ಜುಲೈ 30 : ಕೋವಿಡ್ -19 ಪರಿಸ್ಥಿತಿ ಹಿನ್ನಲೆಯಲ್ಲಿ ಸಹೋದರನಿಗೆ ಮನೆಯಲ್ಲಿ ಕುಳಿತುಕೊಂಡೇ ರಾಖಿಯನ್ನು ಕಳಿಸಬಹುದಾಗಿದೆ. ಇದಕ್ಕಾಗಿ ಭಾರತೀಯ ಅಂಚೆ ಇಲಾಖೆ ವಿಶೇಷ ಸೇವೆಯನ್ನು ಆರಂಭಿಸಿದೆ.
Recommended Video
ಕರ್ನಾಟಕದಲ್ಲಿನ ಜನರು ಭಾರತದ ಯಾವುದೇ ಪ್ರದೇಶಕ್ಕೇ ಬೇಕಾದರೂ ರಾಖಿಯನ್ನು ಸ್ಪೀಡ್ ಪೋಸ್ಟ್ ಮುಖಾಂತರ ಸುಲಭವಾಗಿ ಕಳಿಸಬಹುದಾಗಿದೆ. ಇದಕ್ಕಾಗಿ ಕೇವಲ 100 ರೂ. ವೆಚ್ಚವಾಗಲಿದೆ. ಈ ಸೇವೆಗೆ ಕರ್ನಾಟಕ ವೃತ್ತದ ಪೋಸ್ಟ್ ಮಾಸ್ಟರ್ ಜನರಲ್ ಶಿರ್ತಾಡಿ ರಾಜೇಂದ್ರ ಕುಮಾರ್ ಬೆಂಗಳೂರಿನಲ್ಲಿ ಚಾಲನೆ ನೀಡಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಭಾರತೀಯ ಅಂಚೆ ಇಲಾಖೆಯಲ್ಲಿ ದೊರೆಯುತ್ತಿದ್ದ ರಾಖಿ ಲಕೋಟೆಗಳಿಗೆ ಈಗ ಹೊಸ ಆಯಾಮ ನೀಡಲಾಗಿದೆ. ಸಹೋದರರಿಗೆ ಮಾತ್ರವಲ್ಲ ಲಡಾಖ್ ಗಡಿ ಪ್ರದೇಶದಲ್ಲಿರುವ ಸೇನಾ ಯೋಧರಿಗೂ ರಾಖಿ ತಲುಪಿಸುವ ಅವಕಾಶವಿದೆ.

ಯೋಧರಿಗಾಗಿಯೇ ಮುದ್ರಿತ ಸಂದೇಶವನ್ನು ಆಯ್ಕೆ ಮಾಡಿ ರವಾನಿಸಬಹುದಾಗಿದೆ. ಬಲು ಸರಳವಾದ ಪ್ರಕ್ರಿಯೆ ಇದಾಗಿದೆ. ಜನರು www.karnatakapost.gov.in/Rakhi_Postಗೆ ಲಾಗಿನ್ ಆಗಿ ಕಳುಹಿಸುವವರ ಪೂರ್ಣ ವಿವರಗಳನ್ನು ನೀಡಬೇಕು.
ಇಲ್ಲಿ ಸುಮಾರು 11 ವಿವಿಧ ಆಕರ್ಷಕ ವಿನ್ಯಾಸವುಳ್ಳ ರಾಖಿಗಳು ಲಭ್ಯವಿದೆ. ಪ್ರತಿಯೊಂದು ವಿನ್ಯಾಸದ ಎದುರು ವಿನ್ಯಾಸದ ಅಂಕಿ ನಮೂದಿಸಿದ್ದು, ನಮಗೆ ಬೇಕಾದ ವಿನ್ಯಾಸವನ್ನು ಆರಿಸಿ ಮುಂದುವರೆದಾಗ ಸಂದೇಶ ಕಳುಹಿಸುವ ಆಯ್ಕೆ ಕಾಣ ಸಿಗುತ್ತದೆ.
ರಾಖಿಗಳ ಸೀಮಿತ ದಾಸ್ತಾನು ಲಭ್ಯವಿದೆ. ಈ ಸೇವಾ ವಿಧಾನದ ಮೂಲಕ ರಾಖಿ ಕಳುಹಿಸಲು ಜುಲೈ 31ರ ತನಕ ಅವಕಾಶ ನೀಡಲಾಗಿದೆ. ರಾಖಿ ಕಳುಹಿಸಲು 100 ರೂ. ಶುಲ್ಕವಿದ್ದು, ಅದನ್ನು ಇಂಟರ್ ನೆಟ್ ಬ್ಯಾಂಕಿಂಗ್, ಐಪಿಪಿಬಿ, ಗೂಗಲ್ ಪೇ, ಭೀಮ್ ಆ್ಯಪ್, ಫೋನ್ ಪೇ ಮೂಲಕ ಪಾವತಿ ಮಾಡಬಹುದು.
ಮನೆಯೊಳಗೇ ಕುಳಿತು ಭಾರತದ ಯಾವುದೇ ಮೂಲೆಗೂ ರಾಖಿ ಕಳುಹಿಸಬಹುದಾದ ಈ ಸೇವೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಮಾನ್ಯ ಜನರಿಗೆ ಇದು ಅನುಕೂಲಕರವಾಗಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications