ರಕ್ಷಾ ಬಂಧನ; ಸ್ಪೀಡ್ ಪೋಸ್ಟ್, ಆನ್ಲೈನ್ ಮೂಲಕವೂ ರಾಖಿ ಕಳುಹಿಸಿ
ಬೆಂಗಳೂರು, ಜುಲೈ 30 : ಕೋವಿಡ್ -19 ಪರಿಸ್ಥಿತಿ ಹಿನ್ನಲೆಯಲ್ಲಿ ಸಹೋದರನಿಗೆ ಮನೆಯಲ್ಲಿ ಕುಳಿತುಕೊಂಡೇ ರಾಖಿಯನ್ನು ಕಳಿಸಬಹುದಾಗಿದೆ. ಇದಕ್ಕಾಗಿ ಭಾರತೀಯ ಅಂಚೆ ಇಲಾಖೆ ವಿಶೇಷ ಸೇವೆಯನ್ನು ಆರಂಭಿಸಿದೆ.
Recommended Video
ಕರ್ನಾಟಕದಲ್ಲಿನ ಜನರು ಭಾರತದ ಯಾವುದೇ ಪ್ರದೇಶಕ್ಕೇ ಬೇಕಾದರೂ ರಾಖಿಯನ್ನು ಸ್ಪೀಡ್ ಪೋಸ್ಟ್ ಮುಖಾಂತರ ಸುಲಭವಾಗಿ ಕಳಿಸಬಹುದಾಗಿದೆ. ಇದಕ್ಕಾಗಿ ಕೇವಲ 100 ರೂ. ವೆಚ್ಚವಾಗಲಿದೆ. ಈ ಸೇವೆಗೆ ಕರ್ನಾಟಕ ವೃತ್ತದ ಪೋಸ್ಟ್ ಮಾಸ್ಟರ್ ಜನರಲ್ ಶಿರ್ತಾಡಿ ರಾಜೇಂದ್ರ ಕುಮಾರ್ ಬೆಂಗಳೂರಿನಲ್ಲಿ ಚಾಲನೆ ನೀಡಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಭಾರತೀಯ ಅಂಚೆ ಇಲಾಖೆಯಲ್ಲಿ ದೊರೆಯುತ್ತಿದ್ದ ರಾಖಿ ಲಕೋಟೆಗಳಿಗೆ ಈಗ ಹೊಸ ಆಯಾಮ ನೀಡಲಾಗಿದೆ. ಸಹೋದರರಿಗೆ ಮಾತ್ರವಲ್ಲ ಲಡಾಖ್ ಗಡಿ ಪ್ರದೇಶದಲ್ಲಿರುವ ಸೇನಾ ಯೋಧರಿಗೂ ರಾಖಿ ತಲುಪಿಸುವ ಅವಕಾಶವಿದೆ.

ಯೋಧರಿಗಾಗಿಯೇ ಮುದ್ರಿತ ಸಂದೇಶವನ್ನು ಆಯ್ಕೆ ಮಾಡಿ ರವಾನಿಸಬಹುದಾಗಿದೆ. ಬಲು ಸರಳವಾದ ಪ್ರಕ್ರಿಯೆ ಇದಾಗಿದೆ. ಜನರು www.karnatakapost.gov.in/Rakhi_Postಗೆ ಲಾಗಿನ್ ಆಗಿ ಕಳುಹಿಸುವವರ ಪೂರ್ಣ ವಿವರಗಳನ್ನು ನೀಡಬೇಕು.
ಇಲ್ಲಿ ಸುಮಾರು 11 ವಿವಿಧ ಆಕರ್ಷಕ ವಿನ್ಯಾಸವುಳ್ಳ ರಾಖಿಗಳು ಲಭ್ಯವಿದೆ. ಪ್ರತಿಯೊಂದು ವಿನ್ಯಾಸದ ಎದುರು ವಿನ್ಯಾಸದ ಅಂಕಿ ನಮೂದಿಸಿದ್ದು, ನಮಗೆ ಬೇಕಾದ ವಿನ್ಯಾಸವನ್ನು ಆರಿಸಿ ಮುಂದುವರೆದಾಗ ಸಂದೇಶ ಕಳುಹಿಸುವ ಆಯ್ಕೆ ಕಾಣ ಸಿಗುತ್ತದೆ.
ರಾಖಿಗಳ ಸೀಮಿತ ದಾಸ್ತಾನು ಲಭ್ಯವಿದೆ. ಈ ಸೇವಾ ವಿಧಾನದ ಮೂಲಕ ರಾಖಿ ಕಳುಹಿಸಲು ಜುಲೈ 31ರ ತನಕ ಅವಕಾಶ ನೀಡಲಾಗಿದೆ. ರಾಖಿ ಕಳುಹಿಸಲು 100 ರೂ. ಶುಲ್ಕವಿದ್ದು, ಅದನ್ನು ಇಂಟರ್ ನೆಟ್ ಬ್ಯಾಂಕಿಂಗ್, ಐಪಿಪಿಬಿ, ಗೂಗಲ್ ಪೇ, ಭೀಮ್ ಆ್ಯಪ್, ಫೋನ್ ಪೇ ಮೂಲಕ ಪಾವತಿ ಮಾಡಬಹುದು.
ಮನೆಯೊಳಗೇ ಕುಳಿತು ಭಾರತದ ಯಾವುದೇ ಮೂಲೆಗೂ ರಾಖಿ ಕಳುಹಿಸಬಹುದಾದ ಈ ಸೇವೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಮಾನ್ಯ ಜನರಿಗೆ ಇದು ಅನುಕೂಲಕರವಾಗಿದೆ.
-
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications