Get Updates
Get notified of breaking news, exclusive insights, and must-see stories!

ಬಾರ್‌ನಲ್ಲಿ ಜಯ ಕರ್ನಾಟಕ-ಕರವೇ ಕಾರ್ಯಕರ್ತರ ಪುಂಡಾಟ

ಯಾದಗಿರಿ, ಜೂ. 18 : ಯಾದಗಿರಿಯ ಎನ್.ವಿ.ಎಂ. ಬಾರ್‌ನಲ್ಲಿ ಬುಧವಾರ ರಾತ್ರಿ ಮಾರಾಮಾರಿ ನಡೆದಿದೆ. ವೇಟರ್ ಮತ್ತು ಬಾರ್ ಸಹಾಯಕನಿಗೆ ಜಯ ಕರ್ನಾಟಕ ಮತ್ತು ಕರವೇ ಕಾರ್ಯಕರ್ತರು ಥಳಿಸಿದ್ದಾರೆ. ಘಟನೆ ಕುರಿತು 5 ಜನರ ವಿರುದ್ಧ ದೂರು ದಾಖಲಾಗಿದೆ.

ಸಿಗರೇಟ್ ಸೇದಬೇಡಿ ಎಂದು ಹೇಳಿದ್ದಕ್ಕೆ ಕೋಪಗೊಂಡ ಜಯ ಕರ್ನಾಟಕ ಸಂಘಟನೆಯ ಯಾದಗಿರಿ ಜಿಲ್ಲಾಧ್ಯಕ್ಷ ಹಾಗೂ ಕರವೇ ನಾರಾಯಣಗೌಡರ ಬಣದ ಕಾರ್ಯಕರ್ತರು ವೇಟರ್ ಹಾಗೂ ಸಹಾಯಕರಿಗೆ ಥಳಿಸಿದ್ದಾರೆ. ಬಾರ್ ಪಿಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. [ನಾಡಿನ ಸಮಸ್ತ ಕುಡುಕರಿಗೆ ಸರಕಾರದಿಂದ ಸಿಹಿ ಟಾನಿಕ್]

yadagiri

ವೇಟರ್‌ ಬಸವರಾಜ್ ಅವರಿಗೆ ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ತೇಜರಾಜ್ ರಾಠೋಡ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತ ರಾಮು ರಾಠೋಡ್ ಹಾಗೂ ಮತ್ತಿತರರು ಮನಬಂದಂತೆ ಥಳಿಸಿದ್ದಾರೆ. ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. [ಡಾನ್ಸ್‌ ಬಾರ್‌ ನಿರ್ಬಂಧ ತೆರವುಗೊಳಿಸಿದ ಹೈಕೋರ್ಟ್]

ಹಲ್ಲೆಯಿಂದ ಗಾಯಗೊಂಡ ಬಸವರಾಜ್ ಅವರನ್ನು ಯಾದಗಿದಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ, ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಐದು ಜನರ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

bar worker
More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+