ರಕ್ಷಣಾ ವೇದಿಕೆಯಿಂದ ಅಕ್ಟೋಬರ್ 14ರಂದು ಕನ್ನಡಿಗರ ಸಮಾವೇಶ
ಬೆಂಗಳೂರು, ಅಕ್ಟೋಬರ್ 13 : ಕರ್ನಾಟಕ ರಕ್ಷಣಾ ವೇದಿಕೆ ಅಕ್ಟೋಬರ್ 14ರಂದು 'ಕನ್ನಡಿಗರ ಸಮಾವೇಶ' ವನ್ನು ಆಯೋಜಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾವೇಶ ಉದ್ಘಾಟನೆ ಮಾಡಲಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸಮಾವೇಶ ಆಯೋಜಿಸಿದೆ. ಅಕ್ಟೋಬರ್ 13ರ ಶುಕ್ರವಾರ ಜಾನಪದ ಸಂಭ್ರಮ ಕಾರ್ಯಕ್ರಮ ನಡೆಯಿತು.
ರಾಜ್ಯೋತ್ಸವದ ದಿನ ರಾಜಭವನದಲ್ಲಿ ಗುಜರಾತಿ ಉತ್ಸವ!
ಅಕ್ಟೋಬರ್ 14ರ ಶನಿವಾರ ಕನ್ನಡಿಗರ ಸಮಾವೇಶ ನಡೆಯಲಿದೆ. ಮಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣ ಗೌಡ, ಕೇಂದ್ರ ಸಚಿವ ಅನಂತ್ ಕುಮಾರ್, ಡಿ.ವಿ.ಸದಾನಂದ ಗೌಡ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಶನಿವಾರ ಬೆಳಗ್ಗೆ 9 ಗಂಟೆಯಿಂದ 10.30ರ ತನಕ ನಾಡಿನ ಹೆಸರಾಂತ ಕಲಾವಿದರಿಂದ ಸುಗಮ ಸಂಗೀತ ಕಾರ್ಯಕ್ರಮವಿದೆ. ವಿವಿಧ ಪ್ರಶಸ್ತಿಗಳನ್ನು ಈ ಸಂದರ್ಭದಲ್ಲಿ ಪ್ರದಾನ ಮಾಡಲಾಗುತ್ತದೆ...
ಶನಿವಾರ ಕನ್ನಡಿಗರ ಸಮಾವೇಶ
ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಅಕ್ಟೋಬರ್ 14ರಂದು ಕನ್ನಡಿಗರ ಸಮಾವೇಶ ಆಯೋಜಿಸಿದೆ.
ಸಿದ್ದರಾಮಯ್ಯರಿಂದ ಉದ್ಘಾಟನೆ
ಅಕ್ಟೋಬರ್ 14ರ ಶನಿವಾರ ಕನ್ನಡಿಗರ ಸಮಾವೇಶ ನಡೆಯಲಿದೆ. ಮಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ವಿವಿಧ ಪ್ರಶಸ್ತಿ ಪ್ರದಾನ
ಸಮಾವೇಶದಲ್ಲಿ ಶ್ರೀ ಬಸವೇಶ್ವರ ಪ್ರಶಸ್ತಿ, ಶಾಂತವೇರಿ ಗೋಪಾಲಗೌಡ ಪ್ರಶಸ್ತಿ, ಪ್ರೊ.ಎಂ.ಡಿ.ನಂಜುಡಸ್ವಾಮಿ ಪ್ರಶಸ್ತಿ, ಕೆ.ಶ್ಯಾಮರಾವ್, ರಾಷ್ಟ್ರಕವಿ ಕುವೆಂಪು ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಸಮಾವೇಶದಲ್ಲಿ ಯಾರು ಭಾಗವಹಿಸುತ್ತಾರೆ?
ಕನ್ನಡಿಗರ ಸಮಾವೇಶದಲ್ಲಿ ಪಾಲ್ಗೊಳ್ಳುವವರು.