ರಾಜ್ಯಪಾಲರ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಜೇಠ್ಮಲಾನಿ
ನವದೆಹಲಿ, ಮೇ 17: ಸರಕಾರ ರಚನೆಗೆ ರಾಜ್ಯಪಾಲ ವಜೂಭಾಯಿ ವಾಲಾ ಬಿಜೆಪಿಯ ಬಿಎಸ್ ಯಡಿಯೂರಪ್ಪರನ್ನು ಆಹ್ವಾನಿಸಿರುವ ಕ್ರಮವನ್ನು ಪ್ರಶ್ನಿಸಿ ಖ್ಯಾತ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಇಂದು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಎಎಂ ಖನ್ವಿಲ್ಕರ್ ಮತ್ತು ಡಿವೈ ಚಂದ್ರಚೂಡ್ ಮುಂದೆ ತುರ್ತಾಗಿ ತಮ್ಮ ಅರ್ಜಿಯನ್ನು ವಿಚಾರಣೆ ನಡೆಸಬೇಕು ಎಂದು ಕೋರಿಕೊಂಡಿದ್ದಾರೆ.
ಈ ಸಂಬಂಧ ಸರಿಯಾದ ಪೀಠದ ಮುಂದೆ ನಾಳೆ ತಮ್ಮ ಅರ್ಜಿ ಸಲ್ಲಿಸುವಂತೆ ನ್ಯಾಯಮೂರ್ತಿಗಳು ರಾಮ್ ಜೇಠ್ಮಲಾನಿಗೆ ತಿಳಿಸಿದ್ದಾರೆ.

ನಿನ್ನೆ ರಾತ್ರಿ ಪ್ರಮಾಣ ವಚನ ಸ್ವೀಕಾರಕ್ಕೆ ತಡೆ ನೀಡಬೇಕು ಎಂದು ಕಾಂಗ್ರೆಸ್ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಗ್ವಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ ಪ್ರಮಾಣ ವಚನ ಸ್ವೀಕಾರಕ್ಕೆ ತಡೆ ನೀಡಲು ಸುಪ್ರೀಂ ನಿರಾಕರಿಸಿತ್ತು.












Click it and Unblock the Notifications