ಅಯೋಧ್ಯೆ ಭೂಮಿಪೂಜೆ: ಅನಾಶ್ಯಕವಾಗಿ ವಿವಾದ ಮೈಗೆಳೆದುಕೊಂಡ ಶೋಭಾ ಕರಂದ್ಲಾಜೆ
ಬೆಂಗಳೂರು, ಆ 6: ಇಡೀ ದೇಶವೇ ಕಾತುರದಿಂದ ಎದುರು ನೋಡುತ್ತಿದ್ದ ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆ, ಆಗಸ್ಟ್ ಐದರ ಅಭಿಜಿನ್ ಮಹೂರ್ತದಲ್ಲಿ ಶಾಸ್ತೋಕ್ತವಾಗಿ ಮುಕ್ತಾಯಗೊಂಡಿದೆ.
Recommended Video
ಭೂಮಿಪೂಜೆ ನಡೆಸಿದ ಪ್ರಧಾನಿ ಮೋದಿ, ಅಯೋಧ್ಯ ಚಳುವಳಿಯನ್ನು ಸ್ವಾತಂತ್ರ್ಯ ಚಳುವಳಿಗೆ ಹೋಲಿಸಿ, "ರಾಮ ಜನ್ಮಭೂಮಿಗೆ ದೊರೆತ ಸ್ವಾತಂತ್ರ್ಯ ಇದು" ಎಂದು ಬಣ್ಣಿಸಿದ್ದಾರೆ.
ಈ ನಡುವೆ, ಅಯೋಧ್ಯ ಭೂಮಿಪೂಜೆಯನ್ನು ಉಲ್ಲೇಖಿಸಿ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಮಾಡಿರುವ ಟ್ವೀಟ್ ಒಂದು ಭಾರೀ ಸಂಚಲನ ಮೂಡಿಸಿದೆ.
ಟ್ವೀಟ್ ನಲ್ಲಿ ಪ್ರಧಾನಿ ಮೋದಿ, ಪ್ರಭು ಶ್ರೀರಾಮಚಂದ್ರನ ಕೈಹಿಡಿದು, ರಾಮ ಮಂದಿರದ ಕಡೆಗೆ ಕರೆದುಕೊಂಡು ಹೋಗುವಂತೆ ಬಿಂಬಿಸುವ ಫೋಟೋಗೆ ಒಕ್ಕಣೆಯೊಂದನ್ನು ಬರೆದು ಶೋಭಾ ಟ್ವೀಟ್ ಮಾಡಿದ್ದರು.
|
ಅಯೋಧ್ಯೆ ತನ್ನ ಪ್ರೀತಿಯ ರಾಜನನ್ನು ಮರಳಿ ಮನೆಗೆ ಸ್ವಾಗತಿಸಲು ಸಜ್ಜಾಗಿದೆ
"ಅಯೋಧ್ಯೆ ತನ್ನ ಪ್ರೀತಿಯ ರಾಜನನ್ನು ಮರಳಿ ಮನೆಗೆ ಸ್ವಾಗತಿಸಲು ಸಜ್ಜಾಗಿದೆ" ಎನ್ನುವ ಒಕ್ಕಣೆಯನ್ನು ಬರೆದು, ಮೋದಿ, ರಾಮನ ಕೈಹಿಡಿದು ದೇವಾಲಯದ ಕಡೆಗೆ ಹೋಗುವ ಚಿತ್ರವನ್ನು ಶೋಭಾ ಬಳಸಿಕೊಂಡಿದ್ದರು. ಚಿತ್ರದಲ್ಲಿ ರಾಮನನ್ನು ಬಾಲಕನನ್ನಾಗಿ, ಮೋದಿಯನ್ನು ಹಿರಿಯರಂತೆ ತೋರಿಸಲಾಗಿದೆ.

ಹಿಂದುತ್ವದ ಪ್ರಕಾರ, ಮೋದಿ, ರಾಮನನ್ನು ಮುನ್ನಡೆಸುತ್ತಾರೆ
ಸಾಮಾಜಿಕ ತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಈ ಟ್ವೀಟ್ ನಲ್ಲಿ, "ಪ್ರಧಾನಿ ಮೋದಿ, ಪ್ರಭು ರಾಮನಿಗಿಂತ ದೊಡ್ಡವರೇ" ಎಂದು ನೂರಾರು ಜನ ಪ್ರಶ್ನಿಸಿದ್ದಾರೆ. "ನಿಮ್ಮ ಹಿಂದುತ್ವದ ಪ್ರಕಾರ, ಮೋದಿ, ರಾಮನನ್ನು ಮುನ್ನಡೆಸುತ್ತಾರೆ. ರಾಮ, ಮೋದಿಯನ್ನು ಮುನ್ನಡೆಸುವುದಲ್ಲ. ರಾಜ ಯಾವತ್ತೂ ಮುಂದೆ ಸಾಗುತ್ತಾನೆ", "ಬಾಲಾವತರಾದ ರಾಮನನ್ನು ಬಿಂಬಿಸಿದ್ದರೂ, ಮೋದಿ, ರಾಮನ ಕೈಹಿಡಿದುಕೊಂಡು ಹೋಗುವಂತಹ ಫೋಟೋ ಹಾಕಿದ್ದು ತಪ್ಪು. ತಾಯಿ ಕೌಶಲ್ಯ, ತಂದೆ ದಶರಥ, ಗುರುಗಳಾದ ವಿಶ್ವಾಮಿತ್ರ/ವಶಿಷ್ಠರು ಮಾತ್ರ ರಾಮನನ್ನು ಮುನ್ನಡೆಸಬಹುದು" ಈ ರೀತಿಯ ಪ್ರತ್ಯುತ್ತರಗಳು, ಶೋಭಾ ಟ್ವೀಟಿಗೆ ಬಂದಿದೆ.

ಶ್ರೀರಾಮಚರಿತ ಮಾನಸದ ಯಾವ ಭಾಗವನ್ನು ಕಲಿತಿರುವಿರಿ
ಶೋಭಾ ಕರಂದ್ಲಾಜೆ ಟ್ವೀಟಿಗೆ ಖಾರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, "ಪ್ರೀತಿಯನ್ನು ಕಲಿತಿಲ್ಲ, ತ್ಯಾಗವನ್ನೂ ಕಲಿತಿಲ್ಲ, ಕರುಣೆ, ಪ್ರೀತಿ ಎನ್ನುವುದನ್ನೂ ಕಲಿತಿಲ್ಲ, ರಾಮನಿಗಿಂತಲೂ ನಾನೇ ಶ್ರೇಷ್ಠ ಎಂದು ತೋರಿಸಿ ಖುಷಿ ಪಡುವ ನೀವು, ಶ್ರೀರಾಮಚರಿತ ಮಾನಸದ ಯಾವ ಭಾಗವನ್ನು ಕಲಿತಿರುವಿರಿ"ಎಂದು ತರೂರ್ ಪ್ರಶ್ನಿಸಿದ್ದಾರೆ.

ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ
ಶಶಿ ತರೂರ್ ಟ್ವೀಟಿಗೆ ಪ್ರತಿಕ್ರಿಯೆ ನೀಡಿರುವ ಶೋಭಾ, "ಭಾರತೀಯ ಸಂಸ್ಕೃತಿ, ಮೌಲ್ಯದ ಅರಿವಿಲ್ಲದವರು ಇಂತಹ ಮಹತ್ವದ ಈ ಸಂದರ್ಭದಲ್ಲಿ ಈ ರೀತಿ ಬರೆಯುತ್ತಾರೆ. ರಾಮ್ ಲಲ್ಲಾ, ಅಯೋಧ್ಯೆಯ ಪ್ರಭು ಶ್ರೀರಾಮಚಂದ್ರನ ಬಾಲಾವತಾರವನ್ನು ಪೂಜಿಸುತ್ತೇವೆ. ಈ ವಿಚಾರವನ್ನು ತಿಳಿದುಕೊಳ್ಳಲು ಸ್ವಲ್ಪ ಸಮಯ ವಿನಿಯೋಗಿಸಿ" ಎಂದು ತಿರುಗೇಟು ನೀಡಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications