ರಾಮ ಮಂದಿರ ನಿರ್ಮಾಣ: ಭಕ್ತರಲ್ಲಿ ಪೇಜಾವರ ಶ್ರೀಗಳು ಮಾಡಿದ ಮನವಿ
ಹಾಸನ, ಮಂಗಳೂರು, ಫೆ 20: ಆಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಭಕ್ತಾದಿಗಳ ಧನ ಸಹಾಯದ ಜೊತೆ, ಸಾತ್ವಿಕ ಬೆಂಬಲವೂ ಬೇಕಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದರು.
ಹಾಸನದ ರಾಘವೇಂದ್ರಸ್ವಾಮಿ ಮಠಕ್ಕೆ ಭೇಟಿ ನೀಡಿ ಮಾತನಾಡುತ್ತಿದ್ದ ಶ್ರೀಗಳು, "ರಾಮ ಮಂದಿರ ನಿರ್ಮಾಣ ಸಂಬಂಧ ಮೊದಲ ಸಭೆ ನಡೆದಿದೆ. ಅಯೋಧ್ಯೆಯ ಸ್ಟೇಟ್ ಬ್ಯಾಂಕ್ ನಲ್ಲಿ ಬ್ಯಾಂಕ್ ಖಾತೆ ತೆರೆಯಲಾಗುವುದು" ಎಂದು ಪೇಜಾವರ ಶ್ರೀಗಳು ಹೇಳಿದರು.
"ನಮ್ಮ ಗುರುಗಳ ಹೆಸರಿನಲ್ಲಿ ಮೊದಲ ದೇಣಿಗೆಯಾಗಿ ಐದು ಲಕ್ಷ ರೂಪಾಯಿಯನ್ನು ನೀಡಲಾಗಿದೆ. ಭಕ್ತಾದಿಗಳು ಈ ಧಾರ್ಮಿಕ ಕೆಲಸಕ್ಕೆ ಅವರವರ ಶಕ್ತ್ಯಾನುಸಾರ ದೇಣಿಗೆಯನ್ನು ನೀಡಬಹುದು. ಮುಂದಿನ ದಿನಗಳಲ್ಲಿ ಈ ಬಗ್ಗೆ ಸವಿವರವಾಗಿ ವಿವರಣೆಯನ್ನು ನೀಡಲಾಗುವುದು" ಎಂದು ವಿಶ್ವಪ್ರಸನ್ನ ಶ್ರೀಗಳು ತಿಳಿಸಿದರು.

ಅಯೋಧ್ಯೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಮೊದಲ ಸಭೆ, ದೆಹಲಿಯಲ್ಲಿ, ಬುಧವಾರ (ಫೆ 19) ನಡೆದಿತ್ತು. ಟ್ರಸ್ಟಿನ ಸದಸ್ಯರಲ್ಲಿ ಒಬ್ಬರನ್ನಾಗಿ ವಿಶ್ವಪ್ರಸನ್ನ ತೀರ್ಥರನ್ನು ಕೇಂದ್ರ ಸರಕಾರ ನೇಮಿಸಿತ್ತು. ಮಹಾಂತ ನೃತ್ಯ ಗೋಪಾಲದಾಸ ಟ್ರಸ್ಟಿನ ಅಧ್ಯಕ್ಷರಾಗಿ, ಚಂಪತ್ ರೈ, ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಮಂಗಳೂರು ವರದಿ: ಮಧ್ವಾಚಾರ್ಯರು ಸ್ಥಾಪಿಸಿದ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಮಠದ ಮೂಲ ಮಠ, ದಕ್ಷಿಣಕನ್ನಡ ಜಿಲ್ಲೆಯ ಪಡೀಲು ಮತ್ತು ತೊಕೂರು ನಡುವೆ ನಿರ್ಮಾಣವಾಗಲಿರುವ ರೈಲ್ವೆ ನಿಲ್ದಾಣದ ಸಮೀಪದಲ್ಲಿದೆ.

ಸದ್ರಿ ರೈಲ್ವೇ ನಿಲ್ದಾಣಕ್ಕೆ 'ಪೇಜಾವರ ರೈಲ್ವೆ ನಿಲ್ದಾಣ' ಎಂದು ನಾಮಕರಣ ಮಾಡುವಂತೆ, ಭಾರತ ಸರಕಾರ, ರೈಲ್ವೆ ಇಲಾಖೆ ಮತ್ತು ರಾಜ್ಯ ಸರಕಾರಕ್ಕೆ ಒತ್ತಡ ತರುವಂತೆ, ಪೇಜಾವರ ಮಾಗಣಿಯ ಹತ್ತು ಸಮಸ್ತರ ಪರವಾಗಿ, ವಿಶ್ವಪ್ರಸನ್ನ ತೀರ್ಥರಿಗೆ ಮನವಿ ಸಲ್ಲಿಸಲಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications