ರಾಮ ಮಂದಿರ ನಿರ್ಮಾಣ: ಭಕ್ತರಲ್ಲಿ ಪೇಜಾವರ ಶ್ರೀಗಳು ಮಾಡಿದ ಮನವಿ
ಹಾಸನ, ಮಂಗಳೂರು, ಫೆ 20: ಆಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಭಕ್ತಾದಿಗಳ ಧನ ಸಹಾಯದ ಜೊತೆ, ಸಾತ್ವಿಕ ಬೆಂಬಲವೂ ಬೇಕಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದರು.
ಹಾಸನದ ರಾಘವೇಂದ್ರಸ್ವಾಮಿ ಮಠಕ್ಕೆ ಭೇಟಿ ನೀಡಿ ಮಾತನಾಡುತ್ತಿದ್ದ ಶ್ರೀಗಳು, "ರಾಮ ಮಂದಿರ ನಿರ್ಮಾಣ ಸಂಬಂಧ ಮೊದಲ ಸಭೆ ನಡೆದಿದೆ. ಅಯೋಧ್ಯೆಯ ಸ್ಟೇಟ್ ಬ್ಯಾಂಕ್ ನಲ್ಲಿ ಬ್ಯಾಂಕ್ ಖಾತೆ ತೆರೆಯಲಾಗುವುದು" ಎಂದು ಪೇಜಾವರ ಶ್ರೀಗಳು ಹೇಳಿದರು.
"ನಮ್ಮ ಗುರುಗಳ ಹೆಸರಿನಲ್ಲಿ ಮೊದಲ ದೇಣಿಗೆಯಾಗಿ ಐದು ಲಕ್ಷ ರೂಪಾಯಿಯನ್ನು ನೀಡಲಾಗಿದೆ. ಭಕ್ತಾದಿಗಳು ಈ ಧಾರ್ಮಿಕ ಕೆಲಸಕ್ಕೆ ಅವರವರ ಶಕ್ತ್ಯಾನುಸಾರ ದೇಣಿಗೆಯನ್ನು ನೀಡಬಹುದು. ಮುಂದಿನ ದಿನಗಳಲ್ಲಿ ಈ ಬಗ್ಗೆ ಸವಿವರವಾಗಿ ವಿವರಣೆಯನ್ನು ನೀಡಲಾಗುವುದು" ಎಂದು ವಿಶ್ವಪ್ರಸನ್ನ ಶ್ರೀಗಳು ತಿಳಿಸಿದರು.

ಅಯೋಧ್ಯೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಮೊದಲ ಸಭೆ, ದೆಹಲಿಯಲ್ಲಿ, ಬುಧವಾರ (ಫೆ 19) ನಡೆದಿತ್ತು. ಟ್ರಸ್ಟಿನ ಸದಸ್ಯರಲ್ಲಿ ಒಬ್ಬರನ್ನಾಗಿ ವಿಶ್ವಪ್ರಸನ್ನ ತೀರ್ಥರನ್ನು ಕೇಂದ್ರ ಸರಕಾರ ನೇಮಿಸಿತ್ತು. ಮಹಾಂತ ನೃತ್ಯ ಗೋಪಾಲದಾಸ ಟ್ರಸ್ಟಿನ ಅಧ್ಯಕ್ಷರಾಗಿ, ಚಂಪತ್ ರೈ, ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಮಂಗಳೂರು ವರದಿ: ಮಧ್ವಾಚಾರ್ಯರು ಸ್ಥಾಪಿಸಿದ ಅಷ್ಟಮಠಗಳಲ್ಲಿ ಒಂದಾದ ಪೇಜಾವರ ಮಠದ ಮೂಲ ಮಠ, ದಕ್ಷಿಣಕನ್ನಡ ಜಿಲ್ಲೆಯ ಪಡೀಲು ಮತ್ತು ತೊಕೂರು ನಡುವೆ ನಿರ್ಮಾಣವಾಗಲಿರುವ ರೈಲ್ವೆ ನಿಲ್ದಾಣದ ಸಮೀಪದಲ್ಲಿದೆ.

ಸದ್ರಿ ರೈಲ್ವೇ ನಿಲ್ದಾಣಕ್ಕೆ 'ಪೇಜಾವರ ರೈಲ್ವೆ ನಿಲ್ದಾಣ' ಎಂದು ನಾಮಕರಣ ಮಾಡುವಂತೆ, ಭಾರತ ಸರಕಾರ, ರೈಲ್ವೆ ಇಲಾಖೆ ಮತ್ತು ರಾಜ್ಯ ಸರಕಾರಕ್ಕೆ ಒತ್ತಡ ತರುವಂತೆ, ಪೇಜಾವರ ಮಾಗಣಿಯ ಹತ್ತು ಸಮಸ್ತರ ಪರವಾಗಿ, ವಿಶ್ವಪ್ರಸನ್ನ ತೀರ್ಥರಿಗೆ ಮನವಿ ಸಲ್ಲಿಸಲಾಗಿದೆ.
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications