ಅಯೋಧ್ಯೆ ಶ್ರೀ ರಾಮ ಮಂದಿರ ಉದ್ಘಾಟನೆ; ಶೃಂಗೇರಿ ಮಠದ ಸ್ಪಷ್ಟನೆ
ಚಿಕ್ಕಮಗಳೂರು, ಜನವರಿ 09: ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಿಗದಿಯಾಗಿದೆ. ಈ ಕಾರ್ಯಕ್ರಮಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ, ದೇಶದ ಜನರು ಈ ಸಂಭ್ರಮದ ಕ್ಷಣಕ್ಕಾಗಿ ಕಾದು ಕುಳಿತಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾಪೀಠ ಪ್ರಕಟಣೆಯೊಂದರಲ್ಲಿ ಶ್ರೀ ರಾಮ ಮಂದಿರದ ಉದ್ಘಾಟನೆ ಬಗ್ಗೆ ಸ್ಪಷ್ಟನೆಯೊಂದನ್ನು ನೀಡಿದೆ. ಆಡಳಿತಾಧಿಕಾರಿಗಳು ಶ್ರೀಮಠ ಶೃಂಗೇರಿ ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ.

ಮಠದ ಪ್ರಕಟಣೆ; ಆಸ್ತಿಕ ಜನರೆಲ್ಲರ ಗಮನಕ್ಕೆ ಒಂದು ಮುಖ್ಯವಾದ ವಿಷಯ ಎಂಬ ವಿಷಯವನ್ನು ಪ್ರಕಟಣೆ ಒಳಗೊಂಡಿದೆ.
ಸುಮಾರು ಐದುನೂರು ವರ್ಷಗಳ ಸುದೀರ್ಘವಾದ ಹೋರಾಟದ ನಂತರ ಶ್ರೀರಾಮಚಂದ್ರನ ಅವತಾರ ಕ್ಷೇತ್ರವಾದ ಪವಿತ್ರ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನಿಗೆ ಭವ್ಯವಾದ ದೇವಸ್ಥಾನದ ನಿರ್ಮಾಣವು ನೆರವೇರಿ ಇದೇ ಶೋಭಕೃತ್ ಪುಷ್ಯ ಶುಕ್ಲದ್ವಾದಶಿ (22-1-2024) ಸೋಮವಾರದಂದು ಪ್ರಾಣಪ್ರತಿಷ್ಠಾಮಹೋತ್ಸವವು ಅತ್ಯಂತ ವೈಭವೋಪೇತವಾಗಿ ಸಂಪನ್ನಗೊಳ್ಳಲಿದೆ. ಈ ವಿಷಯವು ಸಮಸ್ತ ಆಸ್ತಿಕಸ್ತೋಮಕ್ಕೂ ಅತ್ಯಂತಾನಂದದಾಯಕವಾಗಿದೆ.
ಆದರೆ ಇಂತಹ ಸಂದರ್ಭದಲ್ಲಿ ಕೆಲವರು ಧರ್ಮದ್ವೇಷಿಗಳು ಸಾಮಾಜಿಕ ಜಾಲತಾಣದಲ್ಲಿ ಶೃಂಗೇರಿ ಶಾರದಾಪೀಠದ ಪ್ರಸ್ತುತ ಅಧಿಪತಿಗಳಾದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಛಾಯಾಚಿತ್ರದ ಜೊತೆಗೆ ಶ್ರೀಗಳು ಈ ಪವಿತ್ರ ಪ್ರಾಣಪ್ರತಿಷ್ಠಾ ಮಹೋತ್ಸವವನ್ನು ವಿರೋಧಿಸುತ್ತಿದ್ದಾರೆ ಎಂಬ ಅರ್ಥವು ಬರುವ ಹಾಗೆ ಸಂದೇಶವನ್ನು ಹಾಕಿ ಪ್ರಚಾರ ಮಾಡುತ್ತಿದ್ದಾರೆ.
ಆದರೆ ಜಗದ್ಗುರು ಶ್ರೀಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರು ಇಂತಹ ಯಾವುದೇ ಸಂದೇಶವನ್ನು ನೀಡಿರುವುದಿಲ್ಲ. ಇದು ಕೇವಲ ಧರ್ಮದ್ವೇಷಿಗಳಾದ ಕೆಲವರು ಮಾಡುತ್ತಿರುವ ಮಿಥ್ಯಾಪ್ರಚಾರವೇ ಸರಿ. ಆದ್ದರಿಂದ ಆಸ್ತಿಕಮಹಾಜನರು ಯಾವುದೇ ಕಾರಣಕ್ಕೆ ಇಂತಹ ಅಪಪ್ರಚಾರಗಳಿಗೆ ಬೆಲೆಯನ್ನು ಕೊಡಬಾರದು ಎಂದು ಮನವಿ ಮಾಡಲಾಗಿದೆ.
ಹಾಗೆಯೇ ದಕ್ಷಿಣಾಮ್ನಾಯ ಶೃಂಗೇರಿ ಶಾರದಾಪೀಠದ ಅಧಿಕೃತವಾದ www.sringeri.net ಎಂಬ ವೆಬ್ಸೈಟಿನಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾದ ವಿಷಯಗಳನ್ನು ಮಾತ್ರವೇ ಪ್ರಾಮಾಣಿಕವಾಗಿ ಪರಿಗಣಿಸಬೇಕೆಂದು ಈ ಮೂಲಕ ನಿವೇದಿಸುತ್ತಿದ್ದೇವೆ.
"sharadapeetham" ಯೂಟ್ಯೂಬ್ ಚ್ಯಾನೆಲ್ ಮೂಲಕ ಕಳೆದ ದೀಪಾವಳಿಯ (12-11-2023) ಸಂದರ್ಭದಲ್ಲಿ ಈ ಪವಿತ್ರ ಪ್ರಾಣಪ್ರತಿಷ್ಠಾ ಮಹೋತ್ಸವವನ್ನು ಮನಸ್ಸಿನಲ್ಲಿಟ್ಟುಕೊಂಡು ಶ್ರೀರಾಮತಾರಕ ಮಹಾಮಂತ್ರವನ್ನು ಜಪಿಸುವಂತೆ ಎಲ್ಲಾ ಆಸ್ತಿಕರಿಗೂ ಶೃಂಗೇರಿ ಜಗದ್ಗುರುಗಳು ಸಂದೇಶವನ್ನು ನೀಡಿದ್ದರು. ಅದನ್ನನುಸರಿಸಿ ಆಸ್ತಿಕರು ಅತ್ಯಧಿಕ ಸಂಖ್ಯೆಯಲ್ಲಿ ಮಂತ್ರಜಪವನ್ನು ಮಾಡುತ್ತಿರುವುದು ಈ ಸಂದರ್ಭದಲ್ಲಿ ಗಮನಾರ್ಹವಾಗಿದೆ.
ಹಾಗೆಯೇ ಅತ್ಯಂತ ಪವಿತ್ರವೂ ಅಪರೂಪವು ಆದ ಈ ಪ್ರಾಣಪ್ರತಿಷ್ಠಾಮಹೋತ್ಸವದ ಸುಸಂದರ್ಭದಲ್ಲಿ ಎಲ್ಲಾ ಆಸ್ತಿಕರು ಯಥಾಯೋಗ್ಯವಾಗಿ ಭಾಗವಹಿಸಿ ಶ್ರೀರಾಮನ ಪರಿಪೂರ್ಣಕೃಪೆಗೆ ಪಾತ್ರರಾಗಿ ಕೃತಾರ್ಥರಾಗಬೇಕೆಂದು ಜಗದ್ಗುರು ಮಹಾಸ್ವಾಮಿಗಳವರು ಆಶೀರ್ವದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಶ್ರೀ ರಾಮ ಮಂದಿರದಲ್ಲಿ ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದ ಅಂಗವಾಗಿ ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಅಂದು ವಿಶೇಷ ಪೂಜೆಯನ್ನು ಜನಡೆಸಲಾಗುತ್ತದೆ. ಈ ಕುರಿತು ಮುಜರಾಯಿ ಇಲಾಖೆ ಈಗಾಗಲೇ ಸುತ್ತೋಲೆಯನ್ನು ಹೊರಡಿಸಿದೆ.
ಸುತ್ತೋಲೆಯಲ್ಲಿ ಶ್ರೀ ರಾಮನ ಜನ್ಮಸ್ಥಳವಾದ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಿರುವ ಶ್ರೀರಾಮ ಮಂದಿರದಲ್ಲಿ ದಿನಾಂಕ 22/01/2024ರಂದು ನೂತನವಾಗಿ ಶ್ರೀರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವು ನಡೆಯಲಿದೆ. ಅಂದು ದೇಶದ/ ರಾಜ್ಯದ ಎಲ್ಲಾ ಜನರ ಒಳಿತಿಗಾಗಿ ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಶ್ರೀರಾಮನ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಸಮಯದಲ್ಲಿ ವಿಶೇಷ ಪೂಜೆ/ ಪ್ರಾರ್ಥನೆ/ ಮಂಗಳಾರತಿಯನ್ನು ನಡೆಸಲು ಸೂಚಿಸಿದೆ ಎಂದು ಹೇಳಿದೆ.
ಜನವರಿ 22ರಂದು ಅಯೋಧ್ಯೆಗೆ ಎಲ್ಲರೂ ಬರಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಸಹ ಶ್ರೀ ರಾಮನ ಭಕ್ತರಿಗೆ ಕರೆ ನೀಡಿದ್ದಾರೆ. ಬಿಜೆಪಿ ಈಗಾಗಲೇ ಮಂತ್ರಾಕ್ಷತೆಯನ್ನು ಜನರ ಮನೆ ಬಾಗಿಲಿಗೆ ತಲುಪಿಸುತ್ತಿದೆ. ರಾಮ ಮಂದಿರ ಉದ್ಘಾಟನೆ ವೇಳೆ ಎಲ್ಲರ ಮನೆಯ ಮುಂದೆ ದೀಪ ಬೆಳಗಬೇಕು ಎಂದು ಕರೆ ನೀಡಲಾಗಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications