ಅಂದು ರಥಯಾತ್ರೆ, ಚುನಾವಣಾ ಹೊಸ್ತಿಲಲ್ಲಿ ಇಂದು RSS ರಾಮರಾಜ್ಯ ಯಾತ್ರೆ
Recommended Video

ಪಕ್ಷೇತರರಿಗಿಂತಲೂ ಕಮ್ಮಿ ಎರಡು ಸೀಟು ಹೊಂದಿದ್ದ ಬಿಜೆಪಿಗೆ ಲಾಲ್ ಕೃಷ್ಣ ಅಡ್ವಾಣಿಯವರ ರಥಯಾತ್ರೆ ದೇಶದಲ್ಲಿ ಅಧಿಕಾರದ ಬಾಗಿಲನ್ನೇ ತೆರೆಯಲಾರಂಭಿಸಿತು. ಎಲ್ಲೋ ಇದ್ದ ಬಿಜೆಪಿ ಊಹಿಸಲೂ ಅಸಾಧ್ಯವಾದ ರೀತಿಯಲ್ಲಿ ಮೇಲ್ಪಂಕ್ತಿಗೆ ಬರಲಾರಂಭಿಸಿತು.
ಕಾಂಗ್ರೆಸ್ ಮುಕ್ತ್ ಭಾರತ್ ಎಂದು ಪ್ರಧಾನಿ ಮೋದಿ, ಅಮಿತ್ ಶಾ ಆದಿಯಾಗಿ ಬಿಜೆಪಿ ಮುಖಂಡರು ಇಂದು ಏನು ಉದ್ಘರಿಸುತ್ತಿದ್ದಾರೋ, ಅದಕ್ಕೆ ಮೂಲ ಬೇರು ಅಡ್ವಾಣಿ ರಥಯಾತ್ರೆ ಅನ್ನುವುದನ್ನು ಯಾರೂ ಮರೆತಿರಲಾರರು, ಮರೆಯಲೂ ಬಾರದು..
ವಿಚಾರಕ್ಕೆ ಬರುವುದಾದರೆ, ಬಿಜೆಪಿಯ ಮಾತೃ ಸಂಘಟನೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಬೆಂಬಲದೊಂದಿಗೆ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕು ಎನ್ನುವ ಉದ್ದೇಶವನ್ನು ಇಟ್ಟುಕೊಂಡು 39 ದಿನಗಳ 'ರಾಮರಾಜ್ಯ ರಥಯಾತ್ರೆ' ಯನ್ನು ಆರಂಭಿಸಲು ರಾಮದಾಸ ಸೊಸೈಟಿ ಸಜ್ಜಾಗಿದೆ.
ಉತ್ತರಪ್ರದೇಶದ ಕರಸೇವಕಪುರಂ (ಅಯೋಧ್ಯ) ನಿಂದ ಆರಂಭವಾಗಲಿರುವ ಈ ರಥಯಾತ್ರೆಗೆ ಅಲ್ಲಿನ ಸಿಎಂ ಯೋಗಿ ಆದಿತ್ಯನಾಥ್ ಚಾಲನೆ ನೀಡಲಿದ್ದು, ತಮಿಳುನಾಡಿನ ರಾಮೇಶ್ವರಂನಲ್ಲಿ ಯಾತ್ರೆ ಸಂಪನ್ನಗೊಳ್ಳಲಿದೆ. ಮಹಾರಾಷ್ಟ್ರದ ಶ್ರೀರಾಮದಾಸ ಯುನಿವರ್ಸಲ್ ಸೊಸೈಟಿ ಈ ಯತ್ರೆ ಆಯೋಜಿಸಿದ್ದು, RSS , ವಿಎಚ್ಪಿ ಮತ್ತು ಬಿಜೆಪಿಯ ಮುಖಂಡರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನುವ ಮಾಹಿತಿಯಿದೆ.
ಹಿಂದುತ್ವದ ವಿಚಾರದಲ್ಲೇ ಚುನಾವಣೆ ಎದುರಿಸಬೇಕು ಎನ್ನುವ ಬಿಜೆಪಿ ವರಿಷ್ಟರ ಸ್ಪಷ್ಟ ಫರ್ಮಾನು ಇದೆ ಸುದ್ದಿಯ ನಡುವೆ, ಈ ಯಾತ್ರೆ, ಕರ್ನಾಟಕದಲ್ಲೂ ಹಾದುಹೋಗಲಿದ್ದು, ಬಿಜೆಪಿಯವರು ಇದರ ಲಾಭವನ್ನು ಯಾವರೀತಿ ಪಡೆದುಕೊಳ್ಳಲಿದ್ದಾರೆ ಎನ್ನುವುದು ಕುತೂಹಲಕ್ಕೆ ಎಡೆಮಾಡಿ ಕೊಟ್ಟಿದೆ. ಮುಂದೆ ಓದಿ

ಯಾವ ದಿನಾಂಕದಂದು ರಥಯಾತ್ರೆ ಸಾಗಲಿದೆ ಎನ್ನುವ ಮಾಹಿತಿಯಿಲ್ಲ
25ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ರಾಮರಥ ಮತ್ತು ಈ ಯಾತ್ರೆ, ವಾರಣಾಸಿ, ಪ್ರಯಾಗ, ಚಿತ್ರಕೂಟ, ಉಜ್ಜೈನಿ, ನಾಸಿಕ್, ಬದ್ಲಾಪುರ, ಬೆಂಗಳೂರು ಮೂಲಕ ಸಾಗಿ ರಾಮೇಶ್ವರಂನಲ್ಲಿ ಕೊನೆಗೊಳ್ಳಲಿದೆ. ಯಾವ ನಗರದಲ್ಲಿ, ಯಾವ ದಿನಾಂಕದಂದು ರಥಯಾತ್ರೆ ಸಾಗಲಿದೆ ಎನ್ನುವ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ.

ಬಿಜೆಪಿ ಮುಖಂಡರು ಪೂರ್ಣಕುಂಭ ಸ್ವಾಗತ ಕೋರುವುದು ದಟ್ಟ
ಹಿಂದೂ ಮಠಗಳನ್ನು ಮುಜರಾಯಿ ಸುಪರ್ದಿಗೆ ತರಬೇಕು ಎನ್ನುವ ಉದ್ದೇಶವನ್ನು ಇಟ್ಟುಕೊಂಡು, ನಂತರ ತೀವ್ರ ವಿರೋಧದ ಹಿನ್ನಲೆಯಲ್ಲಿ ಸಿದ್ದರಾಮಯ್ಯ ಸರಕಾರ ಅದನ್ನು ಕೈಬಿಟ್ಟಿದೆ. ಆದರೆ ಈ ವಿಷಯವನ್ನು ಬಿಜೆಪಿ ಕೈಬಿಡುವ ಸಾಧ್ಯತೆ ಮಾತ್ರ ಕಮ್ಮಿ. ಹಾಗಾಗಿ, ರಾಮರಾಜ್ಯ ರಥಯಾತ್ರೆಗೆ ಕರ್ನಾಟಕ ಬಿಜೆಪಿ ಮುಖಂಡರು ಪೂರ್ಣಕುಂಭ ಸ್ವಾಗತ ಕೋರುವುದು ದಟ್ಟವಾಗಿದೆ.

ಮಾ.25ರ ರಾಮನವಮಿಯಂದು ಯಾತ್ರೆ ಸಂಪನ್ನ
ಮಹಾಶಿವರಾತ್ರಿಯ ಶುಭದಿನವಾದ ಫೆ.13ರಂದು ಈ ಯಾತ್ರೆ ಆರಂಭವಾಗಲಿದ್ದು, ಉತ್ತರಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯದಲ್ಲಿ ಸಾಗಲಿದೆ. ಫೆ 13ರಿಂದ ಮಾ.25ರ (ರಾಮನವಮಿ) ವರೆಗೆ ಈ ಯಾತ್ರೆ ಸಾಗಲಿದ್ದು, ಸುಮಾರು ನಲವತ್ತು ಕಡೆ ಸಾರ್ವಜನಿಕ ಸಭೆ ನಡೆಸಲು ನಿರ್ಧರಿಸಲಾಗಿದೆ.

ಸಾರ್ವತ್ರಿಕ ಚುನಾವಣೆಯ ವೇಳೆ ಬಿಜೆಪಿಗೆ ಅಯೋಧ್ಯ ವಿಷಯ ಅತ್ಯಂತ ನಿರ್ಣಾಯಕ
ಮುಂಬರುವ ಕರ್ನಾಟಕ ಚುನಾವಣೆ, ಇದಾದ ನಂತರ ಹಲವು ರಾಜ್ಯಗಳ ಅಸೆಂಬ್ಲಿ ಚುನಾವಣೆ ಮತ್ತು ಅದಕ್ಕಿಂತಲೂ ಹೆಚ್ಚಾಗಿ ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ ಅಯೋಧ್ಯ ವಿಷಯ ಅತ್ಯಂತ ನಿರ್ಣಾಯಕವಾಗಿರುವುದರಿಂದ, ಬಿಜೆಪಿ 'ರಾಮರಾಜ್ಯ ಯಾತ್ರೆ'ಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಸಾಧ್ಯತೆ ಹೆಚ್ಚು.

ಆರು ರಾಜ್ಯಗಳ ಪೊಲೀಸ್ ವರಿಷ್ಠರಿಗೆ ಕೇಂದ್ರ ಗೃಹ ಇಲಾಖೆ ಪತ್ರ
ಯಾತ್ರೆಯ ವೇಳೆ ಯಾವುದೇ ಗೊಂದಲ ಮತು ಕಾನೂನು ಸುವ್ಯವಸ್ಥೆಗೆ ತೊಂದರೆ ಬರದಂತೆ ನೋಡಿಕೊಳ್ಳಲು ಆರು ರಾಜ್ಯಗಳ ಪೊಲೀಸ್ ವರಿಷ್ಠರಿಗೆ ಕೇಂದ್ರ ಗೃಹ ಇಲಾಖೆ ಪತ್ರ ಬರೆದಿದೆ. ಸರ್ವೋಚ್ಚ ನ್ಯಾಯಾಲಯದಲ್ಲಿ ಅಯೋಧ್ಯೆ ವಿಚಾರಣೆ ಆರಂಭವಾದ ಮರುದಿನವೇ ಈ ಯಾತ್ರೆಯ ಬಗ್ಗೆ ಪ್ರಕಟಣೆ ಹೊರಬಿದ್ದಿದೆ.

ರಥಯಾತ್ರೆಗೆ ಯೋಗಿ ಆದಿತ್ಯನಾಥ್ ಚಾಲನೆ
ಫೆಬ್ರವರಿ ಹದಿಮೂರರಂದು ಸಂತ ಸಮ್ಮೇಳನ ನಡೆಯಲಿದೆ,ಇದಾದ ನಂತರ ರಥಯಾತ್ರೆಗೆ ಯೋಗಿ ಆದಿತ್ಯನಾಥ್ ಚಾಲನೆ ನೀಡಲಿದ್ದಾರೆ. RSS ಸಂಘಟನೆಯ ಸಹಸಂಘಟನೆಗಳಾದ ವಿಶ್ವಹಿಂದೂ ಪರಿಷತ್ ಮತ್ತು ಮುಸ್ಲಿಂ ರಾಷ್ಟ್ರೀಯ ಮಂಚ್, ಯಾತ್ರೆಯ ಜವಾಬ್ದಾರಿಯನ್ನು ವಹಿಸಿಕೊಂಡಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications