ರಾಮ ದೇವರಲ್ಲ, ರಾಮ ದೇವರಲ್ಲ ಅಂತ ಒತ್ತಿ ಒತ್ತಿ ಹೇಳಿದ ಕಾಂಗ್ರೆಸ್ ನಾಯಕ
ವಿಜಯನಗರ, ಫೆಬ್ರವರಿ 22: . ಕೋಟ್ಯಾಂತರ ಹಿಂದೂಗಳು ಶ್ರದ್ಧಾ ಭಕ್ತಿಯಿಂದ ಆರಾಧಿಸುವ, ಪೂಜಿಸುವ ಶ್ರೀರಾಮ ದೇವರಲ್ಲ, ರಾಮ ದೇವರಲ್ಲ ಅಂತ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಂಸದ ವಿಎಸ್ ಉಗ್ರಪ್ಪ ಕೂಡ ರಾಮನ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಹೌದು, ವಿಜಯನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ವಿ ಎಸ್ ಉಗ್ರಪ್ಪ, ರಾಮ ದೇವರಲ್ಲ, ರಾಮ ದೇವರಲ್ಲ ಅಂತ ಒತ್ತಿ ಒತ್ತಿ ಹೇಳಿದ್ರು. ರಾಮ ದೇವರಲ್ಲ, ರಾಮ ಮನುಷ್ಯ, ಆತ ರಾಜ, ರಾಜಕುಮಾರ. ನಿಮಗೇನಾದರೂ ಭಕ್ತಿ ಇದೆಯಾ ಅಂತ ಬಿಜೆಪಿ ನಾಯಕರನ್ನು ಪ್ರಶ್ನಿಸಿದ ಉಗ್ರಪ್ಪ ಅವರು, ರಾಮ ದೇವರಲ್ಲ, ಆತ ಮನುಷ್ಯ. ಆತ ರಾಜ, ರಾಜಕುಮಾರ ಎಂದಿದ್ದಾರೆ. ತನ್ನ ಆದರ್ಶಗಳ ಮೂಲಕ ರಾಮ ದೈವತ್ವವನ್ನು ಪಡೆದ ಅಂತ ಉಗ್ರಪ್ಪ ಪ್ರತಿಪಾದಿಸಿದ್ದಾರೆ.

ಕಳೆದ ಬಾರಿ ಪುಲ್ವಾಮಾ ಹೆಸರಲ್ಲಿ ಚುನಾವಣೆ ಮಾಡಿದ್ದಿರಿ, ಈ ಬಾರಿ ರಾಮನ ಹೆಸರಲ್ಲಿ ಲೋಕಸಭಾ ಚುನಾವಣೆ ಮಾಡಲು ಹೊರಟಿದ್ದಿರಿ. ಆದರೆ ರಾಮನ ಹೆಸರು ಹೇಳೋದಕ್ಕೆ ನಿಮಗೆ ಯೋಗ್ಯತೆ ಇಲ್ಲ ಎಂದು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಮನ ಹೆಸರು ಹೇಳೋದಕ್ಕೆ ಯೋಗ್ಯರಿರುವರು ಕಾಂಗ್ರೆಸ್ನವರು. ರಾಮ ಕೊಟ್ಟ ವಚನವನ್ನು ಈಡೇರಿಸಿದನು, ಆದರೆ ಪ್ರಧಾನಿ ನರೇಂದ್ರ ಮೋದಿ ವಚನ ಭ್ರಷ್ಟ ಇದ್ದಾರೆ ಎಂದು ಕಾಂಗ್ರೆಸ್ ಮಾಜಿ ಸಚಿವ ವಿ ಎಸ್ ಉಗ್ರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಮನ ಆದರ್ಶಗಳು ಇಲ್ಲದಿದ್ದರೆ ನೀನು ಹೇಗಪ್ಪ ರಾಮನ ಭಕ್ತನಾಗುತ್ತೀಯಾ? ಪಾಪ ನಿಮ್ಮ ಶ್ರೀಮತಿ ಇಲ್ಲಿ ಅಂಜನಾದ್ರಿಗೆ, ಹಂಪಿಗೆ ಬಂದು ಹೋಗಿದ್ದಾರೆ. ಮೊದಲು ರಾಮಭಕ್ತನಾಗಿ ಆ ಹೆಣ್ಣು ಮಗಳ ರಕ್ಷಣೆ ಮಾಡಪ್ಪ ಅಂತ ಮಾತಿನ ಭರದಲ್ಲಿ ಪ್ರಧಾನಿ ಬಗ್ಗೆ ಏಕವಚನ ವಾಗ್ದಾಳಿ ನಡೆಸಿದ ಉಗ್ರಪ್ಪ, ರಾಮಾಯಣದಲ್ಲಿ ಅಶ್ವಮೇಧ ಯಾಗ ಮಾಡಬೇಕಾದ್ರೆ ಸತಿ ಪತಿ ಸೇರಿ ಮಾಡ್ಬೇಕು ಅಂತ ಗುರು ವಶಿಷ್ಠರು, ವಿಶ್ವಾಮಿತ್ರರು ಹೇಳುತ್ತಾರೆ. ಹಾಗಾಗಿ ಚಿನ್ನದ ಸೀತೆಯನ್ನು ಮಾಡಿ ರಾಮ ಪೂಜೆ ಮಾಡ್ತಾರೆ, ನೀನೇನು ಮಾಡಿದ್ಯಪ್ಪಾ ಮೊನ್ನೆ? ಧರ್ಮವಿರೋಧಿ, ರಾಮನ ವಿಚಾರಕ್ಕೆ ವಿರೋಧಿ ಅಲ್ವಾ ಅಂತ ಏಕವಚನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನ ಟೀಕಿಸಿದರು.
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ












Click it and Unblock the Notifications