ಗೋಸ್ವರ್ಗದಲ್ಲಿ ಸಂತ್ರಸ್ತರಿಗಾಗಿ ಪರಿಹಾರ ಕೇಂದ್ರ: ಊಟ, ವಸತಿ ವ್ಯವಸ್ಥೆ
ಬೆಂಗಳೂರು, ಆ 10: ಭೀಕರ ಪ್ರವಾಹದಿಂದ ತತ್ತರಿಸಿರುವ ರಾಜ್ಯದ ಜನತೆಗೆ ರಾಮಚಂದ್ರಾಪುರ ಮಠ ಸಹಾಯಹಸ್ತ ಚಾಚಿದ್ದು, ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರದ ಬಳಿ ಇರುವ ಗೋಸ್ವರ್ಗದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರವನ್ನು ಸ್ವ-ಇಚ್ಛೆಯಿಂದ ಆರಂಭಿಸಿದೆ.
'ಯಾವುದೇ ಸರ್ಕಾರಿ ನೆರವು ಅಥವಾ ಪ್ರತಿಫಲಾಪೇಕ್ಷೆ ಇಲ್ಲದೇ ತನ್ನ ಕರ್ತವ್ಯ ಎಂದು ಭಾವಿಸಿ ಈ ಕೇಂದ್ರ ಆರಂಭಿಸಲಾಗುತ್ತಿದೆ' ಎಂದು ರಾಘವೇಶ್ವರ ಶ್ರೀಗಳು ನುಡಿದರು. ಗಿರಿನಗರದ ಶ್ರೀರಾಮಾಶ್ರಮದಲ್ಲಿ ರಾಮಾಯಣ ಚಾತುರ್ಮಾಸ್ಯ ಕೈಗೊಂಡಿರುವ ಅವರು, ಶನಿವಾರ ಆಶೀರ್ವಚನದಲ್ಲಿ ಈ ವಿಷಯ ಪ್ರಕಟಿಸಿದರು.
'ರಾಜ್ಯದ ಜನ ಭೀಕರ ಪ್ರವಾಹದಿಂದ ತತ್ತರಿಸಿದ್ದು, ಇದು ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಕ್ಕೆ ಧುಮುಕಬೇಕಾದ ಸಮಯ. ನೊಂದವರ ಬದುಕನ್ನು ಕಟ್ಟಿಕೊಡಲು, ನಮ್ಮ ಸಂಪಾದನೆಯ ಒಂದಿಷ್ಟು ಮೊತ್ತವನ್ನು ಸಮರ್ಪಿಸಬೇಕಾದ ಹೊತ್ತು. ಆದ್ದರಿಂದ ಶ್ರೀಮಠ ಈ ಮಾನವೀಯ ಕಾರ್ಯಕ್ಕೆ ಮುಂದಾಗಿದೆ' ಎಂದು ಶ್ರೀಗಳು ವಿವರಿಸಿದರು.

'ಗೋಸ್ವರ್ಗದಲ್ಲಿ ಸಾವಿರಾರು ಮಂದಿಗೆ ಆಶ್ರಯ ನೀಡಲು ಮತ್ತು ಊಟೋಪಚಾರಕ್ಕೆ ವ್ಯವಸ್ಥೆಯಿದ್ದು, ಪ್ರವಾಹ ಸಂತ್ರಸ್ತರು ಉಚಿತವಾಗಿ ಇದನ್ನು ಬಳಸಿಕೊಳ್ಳಬಹುದು'. ಗೋಸ್ವರ್ಗ, ನೆರೆ ಸಂತ್ರಸ್ತರ ಪಾಲಿಗೂ ಸ್ವರ್ಗವಾಗಬೇಕು ಎನ್ನುವುದು ನಮ್ಮ ಬಯಕೆ' ಎಂದು ಶ್ರೀಗಳು ಸ್ಪಷ್ಟಪಡಿಸಿದರು.
'ಪ್ರವಾಹ ಸಂತ್ರಸ್ತರಿಗೆ ಇನ್ನೂ ಯಾವ ರೀತಿಯಲ್ಲಿ ನೆರವು ನೀಡಬಹುದು ಎಂಬ ಬಗ್ಗೆ ಚಿಂತನೆ ನಡೆದಿದೆ' ಎಂದು ರಾಘವೇಶ್ವರ ಶ್ರೀಗಳು ಹೇಳಿದರು.
ನೆರೆ ಸಂತ್ರಸ್ತರಿಗೆ ಪರಿಹಾರ ಸಾಮಗ್ರಿ ಸಂಗ್ರಹಕ್ಕೆ ಕೂಡಾ ಶ್ರೀಮಠ ವ್ಯವಸ್ಥೆ ಮಾಡಿದೆ. ಮಂಗಳೂರಿನ ನಂತೂರು ಶ್ರೀಭಾರತೀ ಸಮೂಹ ಸಂಸ್ಥೆಯ ಸೇವಾಸಮಿತಿ ಕಚೇರಿ, ಮಾಣಿಮಠ ಕಚೇರಿ, ಉತ್ತರ ಕನ್ನಡ ಜಿಲ್ಲೆಯ ಕೆಕ್ಕಾರು ಮಠ ಕಚೇರಿ, ಅಪ್ಸರಕೊಂಡ ಮಠದ ಕಚೇರಿ, ಬಾನ್ಕುಳಿ ಗೋಸ್ವರ್ಗ ಆವರಣದಲ್ಲಿ ಪರಿಹಾರ ಸಾಮಗ್ರಿ ಸಂಗ್ರಹ ಕೇಂದ್ರಗಳನ್ನು ತೆರೆಯಲಾಗಿದೆ. ಇಲ್ಲಿ ಸಂಗ್ರಹಿಸಿದ ಪರಿಹಾರ ಸಾಮಗ್ರಿಗಳನ್ನು ಸಂತ್ರಸ್ತರಿಗೆ ವಿತರಿಸಲಾಗುತ್ತದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications