ರಾಮಚಂದ್ರಾಪುರ ಮಠದ ಉತ್ತರಾಧಿಕಾರಿ ವಿವಾದಕ್ಕೆ ತೆರೆ

ಬೆಂಗಳೂರು, ಜ. 14 : ರಾಮಚಂದ್ರಾಪುರ ಮಠಕ್ಕೆ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲಾಗಿದೆ ಎಂಬ ವಿವಾದ ಅಂತ್ಯಗೊಂಡಿದೆ. 7 ವರ್ಷದ ನನ್ನ ಮಗನನ್ನು ಉತ್ತರಾಧಿಕಾರಿಯಾಗಿ ಮಾಡುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ರಾಘವೇಶ್ವರ ಶ್ರೀಗಳ ಆಪ್ತರಾದ ಜಗದೀಶ್ ಶರ್ಮಾ ಅವರು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಜಗದೀಶ್ ಶರ್ಮಾ ಅವರು, ರಾಮಚಂದ್ರಪುರ ಮಠದ ಮೇಲೆ ಪಿತೂರಿಗಳು ನಡೆಯುತ್ತಿವೆ. ಮಹಿಳೆಯೊಬ್ಬಳನ್ನು ಬಳಸಿಕೊಂಡು ನಡೆಸಿದ ಪಿತೂರಿ ಸೋಲುವ ಹಂತ ತಲುಪಿದಾಗ, ಪುಟ್ಟ ಮಗುವನ್ನು ಬಳಸಿಕೊಂಡು ಮತ್ತೊಂದು ವಿವಾದ ಸೃಷ್ಟಿಸಲಾಗುತ್ತಿದೆ ಎಂದು ದೂರಿದರು. [ಶ್ರೀಗಳ ಕೇಸ್, ವಿಚಾರಣೆಯಿಂದ ಹಿಂದೆ ಸರಿದ ಜಡ್ಜ್]

ramachandrapura math

ರಾಮಚಂದ್ರಪುರದ ಮಠಕ್ಕೆ ದೇವಿಶರ್ಮ ಅವರನ್ನು ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂಬ ಆರೋಪ ಆಧಾರರಹಿತವಾಗಿದ್ದು. ನನ್ನ ಮಗ ದೇವಿಶರ್ಮನಿಗೆ ಏಳು ವರ್ಷ ವಯಸ್ಸು, ಅವನನ್ನು ಉತ್ತರಾಧಿಕಾರಿಯಾಗಿ ಮಾಡುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಹೇಳಿದರು. [ರಾಘವೇಶ್ವರ ಶ್ರೀಗಳಿಗೆ ನಿಷ್ಠ : ಹವ್ಯಕ ಮಹಾಮಂಡಲ]

ಮಾಜಿ ಸಚಿವ ಕೆ.ಎಚ್.ಶ್ರೀನಿವಾಸ್ ಅವರು ನಾಲಿಗೆ ಚಪಲಕ್ಕಾಗಿ ಜಗದೀಶ್ ಶರ್ಮ ಅವರು ಮಗನನ್ನು ಉತ್ತರಾಧಿಕಾರಿಯಾಗಿ ಮಾಡಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಇಂತಹ ಹೇಳಿಕೆ ನೀಡಿ ಗೊಂದಲ ಮೂಡಿಸುವ ಬದಲು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. [ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಉತ್ತರಾಧಿಕಾರಿ ಘೋಷಣೆ]

ಮಠದಿಂದಲೂ ಸ್ಪಷ್ಟನೆ : ಜಗದೀಶ್ ಶರ್ಮಾ ಅವರ ಎರಡನೇ ಪುತ್ರನನ್ನು ರಾಮಚಂದ್ರಾಪುರ ಮಠದ ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂಬ ಸುದ್ದಿಗಳು ಸುಳ್ಳು ಎಂದು ಮಠವೂ ಸ್ಪಷ್ಟನೆ ನೀಡಿದೆ. ಪುಟ್ಟ ಬಾಲಕನನ್ನು ಉತ್ತರಾಧಿಕಾರಿಯಾಗಿ ನೇಮಿಸುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಠ ಪ್ರಕಟಣೆಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+