KSRTC: ರಾಜ್ಯದ ಈ ಜಿಲ್ಲೆಯ ವ್ಯಾಪ್ತಿಯಲ್ಲಿ ಹೊಸ ಬಸ್ ಘಟಕ ಲೋಕಾರ್ಪಣೆ: ರಾಮಲಿಂಗಾ ರೆಡ್ಡಿ
ದಾವಣಗೆರೆ, ಅಕ್ಟೋಬರ್ 11: ದಾವಣಗೆರೆ ಜಿಲ್ಲೆಯ ಚನ್ನಗಿರಿ ಭಾಗದ ಜನರ ಬಹು ದಿನಗಳ ಬೇಡಿಕೆಯು ಈಡೇರಿದೆ. ಇಲ್ಲಿನ ಹೊಸ ತಾಲೂಕು ಬಸ್ ಘಟಕವನ್ನು ಉದ್ಘಾಟನೆ ಮಾಡಬೇಕೆಂಬ ಕನಸು ನನಸಾಗಿದೆ. ಬಹುಕೋಟಿ ವೆಚ್ಚದಲ್ಲಿ ವಿಶಾಲ ಪ್ರದೇಶದಲ್ಲಿ ನಿರ್ಮಾಣವಾದ ಹೊಸ ಕಟ್ಟಡವನ್ನು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಉದ್ಘಾಟಿಸಿದ್ದಾರೆ.
ಚನ್ನಗಿರಿಯಲ್ಲಿ ತಾಲೂಕು ಬಸ್ ಘಟಕವು 4 ಎಕರೆ ಜಮೀನಿನಲ್ಲಿ ಒಟ್ಟು 8 ಕೋಟಿ ರೂ ವೆಚ್ಚದಲ್ಲಿ ತಲೆಎತ್ತಿದೆ. ನೂತನವಾಗಿ ನಿರ್ಮಿಸಲಾದ ಈ ಘಟಕಕ್ಕೆ ಈಗಾಗಲೇ ಸಿಬ್ಬಂದಿ ಮತ್ತು ಬಸ್ಸುಗಳನ್ನು ನಿಯೋಜಿಸಲಾಗಿದೆ ಎಂದು ಉದ್ಘಾಟನೆ ಬಳಿಕ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.

ಚನ್ನಗಿರಿಯಲ್ಲಿ ಬಸ್ ಘಟಕ ಆರಂಭದಿಂದ ಜನರ ಬೇಡಿಕೆ ಈಡೇರಿದ್ದು ಇದರ ಪ್ರಯೋಜನ ಪಡೆದು ಕೊಳ್ಳುವಂತೆ ಮಾನ್ಯ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರು ತಿಳಿಸಿದರು.
ಶಾಸಕ ಬಸವರಾಜ ವಿ. ಶಿವಗಂಗಾ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಸ್ ಘಟಕ ನಿರ್ಮಾಣಕ್ಕೆ ನಿವೇಶನ ಸಮಸ್ಯೆ ಇತ್ತು, ಅದನ್ನು ಬಗೆ ಹರಿಸಲಾಗಿದೆ. ಹೊಸ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವರಲ್ಲಿ ಬೇಡಿಕೆ ಇಟ್ಟು, ಎರಡು ಎಕರೆ ನಿವೇಶನ ಗುರುತಿಸಲಾಗಿದೆ ಎಂದು ತಿಳಿಸಿದರು. ಇದಕ್ಕೆ ಸಾರಿಗೆ ಸಚಿವರು ಶೀಘ್ರದಲ್ಲಿಯೇ ಅನುಮತಿ ನೀಡುವುದಾಗಿ ಸ್ಥಳದಲ್ಲೇ ಭರವಸೆ ನೀಡಿದರು.
ಅದೇ ರೀತಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರ ಸಹ ಬಸ್ ನಿಲ್ದಾಣಕ್ಕೆ ಬೇಡಿಕೆ ಇಟ್ಟರು. ಸೂಕ್ತ ಜಾಗ ಒದಗಿಸಿದ್ದಲ್ಲಿ ಬಸ್ ನಿಲ್ದಾಣ ನಿರ್ಮಿಸಲು ಒಪ್ಪಿಗೆ ನೀಡುವುದಾಗಿ ಸಚಿವರು ಭರವಸೆ ಕೊಟ್ಟರು. ಇದೇ ವೇಳೆ ಹೊಳಲ್ಕೆರೆ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದ ಸಚಿವರು, ತರಬೇತಿ ಕೇಂದ್ರವನ್ನು ಸರ್ಕಾರದ ಕೌಶಲ್ಯಅಭಿವೃದ್ಧಿ ಇಲಾಖೆಯೊಡನೆ ಮಾತುಕತೆ ನಡೆಸಿ ಮತ್ತಷ್ಟು ಸಾರ್ವಜನಿಕರಿಗೆ ಸದುಪಯೋಗವಾಗುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಸಭೆ ನಡೆಸುವ ಬಗ್ಗೆ ಮಾತುಕತೆ ನಡೆಸುವಂತೆ ಅಧಿಕಾರಿಗಳು ಸೂಚಿಸಿದರು.
ಬಸ್ ಘಟಕದ ಉದ್ಘಾಟನೆ ಕರ್ನಾಟಕ ಜೀವ ವೈವಿಧ್ಯ ನಿಗಮ ಮಂಡಳಿ ಅಧ್ಯಕ್ಷ ವಡ್ನಾಳ್ ಜಗದೀಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷಶಾಮನೂರು ಟಿ. ಬಸವರಾಜ್ ಮತ್ತಿತರರು ಸಾಕ್ಷಿಯಾದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications