ರಾಜೀನಾಮೆ ವಾಪಸ್ ಪಡೆಯಲಿದ್ದಾರೆ ರಾಮಲಿಂಗಾ ರೆಡ್ಡಿ?
Recommended Video
ಬೆಂಗಳೂರು, ಜುಲೈ 17 : ಕಾಂಗ್ರೆಸ್ ನಾಯಕರು ನಡೆಸಿದ ಸಂಧಾನ ಸಭೆ ಫಲ ಕೊಟ್ಟಿದೆ. ಬಿ. ಟಿ. ಎಂ. ಕ್ಷೇತ್ರದ ಶಾಸಕ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ವಾಪಸ್ ಪಡೆಯಲಿದ್ದಾರೆ?.
ಬುಧವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ, "ನಾನು ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನೆ. ಪಕ್ಷದಲ್ಲಿಯೇ ಇರುತ್ತೇನೆ. ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತೇನೆ," ಎಂದು ಹೇಳಿದರು.
"ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಸಹ ಕಾಂಗ್ರೆಸ್ ಪಕ್ಷದ ಬಗ್ಗೆಯಾಗಲಿ, ಸಮ್ಮಿಶ್ರ ಸರ್ಕಾರದ ಬಗ್ಗೆಯಾಗಲಿ ಯಾವುದೇ ವ್ಯತಿರಿಕ್ತ ಹೇಳಿಕೆಗಳನ್ನು ನೀಡಿಲ್ಲ" ಎಂದು ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದರು.
ಗುರುವಾರ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ಮಾಡಲಿದ್ದಾರೆ. ರಾಮಲಿಂಗಾ ರೆಡ್ಡಿ ಅವರು ಸದನಕ್ಕೆ ಹಾಜರಾದರೆ ಸರ್ಕಾರದ ಪರವಾಗಿಯೇ ಮತ ಚಲಾವಣೆ ಮಾಡಲಿದ್ದಾರೆ. ರಾಮಲಿಂಗಾ ರೆಡ್ಡಿ ಅವರ ಹೇಳಿಕೆಯಿಂದಾಗಿ ಕಾಂಗ್ರೆಸ್ ನಾಯಕರಿಗೆ ಸ್ಪಲ್ಪ ಸಮಾಧಾನವಾಗಿದೆ.

ಸ್ಪೀಕರ್ ಜೊತೆ ಮಾತನಾಡುವೆ
ಮಾಧ್ಯಮಗಳ ಜೊತೆ ಮಾತನಾಡಿದ ರಾಮಲಿಂಗಾ ರೆಡ್ಡಿ, "ನಾನು ಕೆಲವು ಕಾರಣಗಳಿಂದಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜೀನಾಮೆ ವಾಪಸ್ ಪಡೆಯುವುದು ಅಥವ ಪಡೆಯದಿರುವ ಬಗ್ಗೆ ಸ್ಪೀಕರ್ ಜೊತೆ ಗುರುವಾರ ಕರೆದಿರುವ ವಿಚಾರಣೆ ವೇಳೆ ಮಾತುಕತೆ ನಡೆಸುತ್ತೇನೆ," ಎಂದರು.

ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ
"ರಾಜಕೀಯದ ಬಗ್ಗೆ ನಾನು ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನೆ. ಗುರುವಾರ ವಿಧಾನಸಭೆ ಕಲಾಪದಲ್ಲಿ ಪಾಲ್ಗೊಳ್ಳುತ್ತೇನೆ. ಕಾಂಗ್ರೆಸ್ ಪಕ್ಷ, ಸರ್ಕಾರದ ಬಗ್ಗೆ ನಾನು ವ್ಯತರಿಕ್ತ ಹೇಳಿಕೆ ನೀಡಿಲ್ಲ" ಎಂದು ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದರು.

ಕಾಂಗ್ರೆಸ್ ನಾಯಕರು ಭೇಟಿಯಾಗಿದ್ದರು
ಭಾನುವಾರ ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ರಾಮಲಿಂಗಾ ರೆಡ್ಡಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದ್ದರು.

ಜುಲೈ 6ರಂದು ರಾಜೀನಾಮೆ
ಜುಲೈ 6ರಂದು ರಾಮಲಿಂಗಾ ರೆಡ್ಡಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ, ಇತರ ಶಾಸಕರ ಜೊತೆ ಮುಂಬೈಗೆ ಹೋಗದೆ ಬೆಂಗಳೂರಿನಲ್ಲಿಯೇ ಇದ್ದಾರೆ. ಜುಲೈ 15ರಂದು ವಿಚಾರಣೆಗೆ ಬರುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರು ನೋಟಿಸ್ ನೀಡಿದ್ದರೂ ರಾಮಲಿಂಗಾ ರೆಡ್ಡಿ ಅವರು ಗೈರಾಗಿದ್ದರು.
-
"ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ, ಕಾಂಗ್ರೆಸ್ನಿಂದ ಪ್ರಜಾಪ್ರಭುತ್ವದ ಹತ್ಯೆ": ಆರ್ ಅಶೋಕ್ -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ












Click it and Unblock the Notifications