ಮಾಜಿ ಪ್ರಧಾನಿ ದೇವೇಗೌಡರ ನಿಲುವಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ!
ಬೆಂಗಳೂರು, ಫೆ. 03: ವಿಧಾನಪರಿಷತ್ನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅವರು ಮನಮುಟ್ಟುವ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿರುವ ಅವರು, ಮೊದಲಿನಿಂದಲೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ಜಾತ್ಯಾತೀತ ನಿಲುವಿನಲ್ಲಿ ನಂಬಿಕೆ ಇಟ್ಟವರು. ಸಭಾಪತಿ ಸ್ಥಾನ ಹೊಂದಾಣಿಕೆಗೆ ಅವರು ಬಿಜೆಪಿ ಜೊತೆ ಹೋಗದಿರೋದು ಸೂಕ್ತ. ಮೊನ್ನೆಯಷ್ಟೇ ಪರಿಷತ್ ಉಪಸಭಾಪತಿ ಚುನಾವಣೆ ನಡೆದಿದೆ. ಸಭಾಪತಿ ಸ್ಥಾನಕ್ಕೆ ರಾಜಿನಾಮೆ ಕೇಳಿದ್ದಾರೆ. ಈ ಬಗ್ಗೆ ಪರಿಷತ್ನಲ್ಲಿ ಚರ್ಚೆ ಆಗಲಿದೆ ಎಂದಿದ್ದಾರೆ.
ಗೋಹತ್ಯೆ ನಿಷೇಧ ವಿಚಾರ ಬಂದಾಗ ಬಿಜೆಪಿ ಗೋ ಹತ್ಯೆ ನಿಷೇಧ ನಿರ್ಧಾರ ತೆಗೆದುಕೊಂಡಿತ್ತು. ನನ್ನ ಅಭಿಪ್ರಾಯದಲ್ಲಿ ಎಲ್ಲಾ ಪ್ರಾಣಿಗಳ ಹತ್ಯೆ ನಿಲ್ಲಿಸಬೇಕು ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ದೆಹಲಿಯಲ್ಲಿ ರೈತರ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅವರು, ರೈತರು ಅನ್ನದಾತರು, ದೇಶದ ಬೆನ್ನೆಲುಬು ಅಂತ ಬಿಜೆಪಿಯವರು ಹೇಳುತ್ತಿದ್ದರು. ಆದರೆ ಅವರು ಹೇಳುತ್ತಿರುವುದು ಒಂದಾದರೆ, ತಮ್ಮ ಮನಸ್ಸಿನಲ್ಲಿ ಮತ್ತೊಂದು ವಿಷಯ ಇಟ್ಟುಕೊಂಡಿದ್ದಾರೆ. ದೆಹಲಿಯಲ್ಲಿ ಖಲಿಸ್ತಾನದ ಪರ ಬಿಜೆಪಿ ಕಾರ್ಯಕರ್ತರೇ ಕರಪತ್ರ ಹಂಚಿದ್ದಾರೆ. ಕಾರ್ಯಕರ್ತರ ಹೆಸರಲ್ಲಿ ಬಿಜೆಪಿಯವರು ವೇಷ ಮರೆಸಿಕೊಂಡು ದೆಹಲಯಲ್ಲಿ ಪ್ರತಿಭಟನೆಗೆ ಬಂದಿದ್ದರು. ಈಗ ರಸ್ತೆಯಲ್ಲಿ ಮೊಳೆ ಹೊಡೆದಿದ್ದಾರೆ. ಕಾಂಕ್ರೀಟ್ ದಿಬ್ಬ ಹಾಕಿ ಅಡ್ಡಗಟ್ಟಿದ್ದಾರೆ. ರೈತರ ಎದುರು ಬಿಜೆಪಿಯ ನಿಜವಾದ ಮುಖವಾಡ ಹೊರ ಬಂದಿದೆ. ಮುಂದಿನ ದಿನಗಳಲ್ಲಿ ಬಿಜೆಪಿಯವರು ಮಾಡಿದ್ದನ್ನು ಅನುಭವಿಸುತ್ತಾರೆ ಎಂದು ರಾಮಲಿಂಗಾರೆಡ್ಡಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications